Bengaluru: ತಾಯಿ ಬೈಕ್ ಕೊಡಿಸದಿದ್ದಕ್ಕೆ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Sep 13, 2024, 11:23 AM IST
ಬೆಂಗಳೂರು: ಅಮ್ಮ ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಿಎಸ್ಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರಿನ ಥಣಿಸಂದ್ರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಥಣಿಸಂದ್ರದ ಅಯ್ಯಪ್ಪ (20) ಆತ್ಮಹತ್ಯೆಗೆ ಶರಣಾದವ.
ತಮಿಳುನಾಡು ಮೂಲದ ಅಯ್ಯಪ್ಪ ತನ್ನ ತಾಯಿ ಜತೆಗೆ ಬೆಂಗಳೂರಲ್ಲೆ ಬಂದು ನೆಲೆಸಿದ್ದ. ಥಣಿಸಂದ್ರದಲ್ಲಿ ಸಣ್ಣದೊಂದು ಮನೆ ಮಾಡಿಕೊಂಡು ವಾಸವಿದ್ದರು. ಕಳೆದ 6 ವರ್ಷಗಳ ಹಿಂದಷ್ಟೇ ಅಯ್ಯಪ್ಪ ತಂದೆ ಮೃತಪಟ್ಟಿದ್ದರು.
ತಾಯಿ ಮನೆ ಕೆಲಸ ಮಾಡಿಕೊಂಡು ಮಗನನ್ನು ಓದಿಸುತ್ತಿದ್ದರು. ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಯ್ಯಪ್ಪನಿಗೆ ಬೈಕ್ ನಲ್ಲಿ ಓಡಾಡುವ ಹುಚ್ಚು ಹೆಚ್ಚಾಗಿತ್ತು. ಬೈಕ್ ಕೊಡಿಸುವಂತೆ ಅಮ್ಮನನ್ನು ಪೀಡಿಸುತ್ತಿದ್ದ. ಆರ್ಥಿಕವಾಗಿ ಹಿಂದುಳಿದಿದ್ದ ಹಿನ್ನೆಲೆಯಲ್ಲಿ ಪುತ್ರನಿಗೆ ತಾಯಿ ಬೈಕ್ ಕೊಡಿಸಿರಲಿಲ್ಲ. ಸ್ವಲ್ಪ ದಿನ ಕಾಯು ಮುಂದೆ ಬೈಕ್ ಕೊಡಿಸೋಣ ಎಂದು ತಾಯಿ ಮಗನಿಗೆ ಸಮಾಧಾನ ಮಾಡಿದ್ದರು. ಅಲ್ಲದೇ, ಶೀಘ್ರದಲ್ಲೇ ಬೈಕ್ ಕೊಡಿಸಲು ತಾಯಿ ನಿರ್ಧರಿಸಿ 50 ಸಾವಿರ ರೂ. ಸಾಲ ಮಾಡಲು ಮುಂದಾಗಿದ್ದರು.
ಸೆ.11ರಂದು ಅಯ್ಯಪ್ಪ ತಾಯಿ ಬೆಳಗ್ಗೆ 6 ಗಂಟೆಗೆ ಎಂದಿನಂತೆ ಕೆಲಸಕ್ಕೆಂದು ಹೋಗಿದ್ದರು. ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದರಿಂದ ಗಾಬರಿಗೊಂಡ ತಾಯಿ ಸಂಬಂಧಿಕರು ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸಂಬಂಧಿಕರು ನೀಡಿದ ಮಾಹಿತಿ ಆಧರಿಸಿ ಹೆಣ್ಣೂರು ಪೊಲೀರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಯಿ ಬೈಕ್ ಕೊಡಿಸಲು ಮುಂದಾಗಿರುವ ಸಂಗತಿ ಅಯ್ಯಪ್ಪನ ಗಮನಕ್ಕೆ ಬಂದಿರಲಿಲ್ಲ. ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಡಿಕೊಂಡಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.