![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 13, 2024, 11:23 AM IST
ಬೆಂಗಳೂರು: ಅಮ್ಮ ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಿಎಸ್ಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರಿನ ಥಣಿಸಂದ್ರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಥಣಿಸಂದ್ರದ ಅಯ್ಯಪ್ಪ (20) ಆತ್ಮಹತ್ಯೆಗೆ ಶರಣಾದವ.
ತಮಿಳುನಾಡು ಮೂಲದ ಅಯ್ಯಪ್ಪ ತನ್ನ ತಾಯಿ ಜತೆಗೆ ಬೆಂಗಳೂರಲ್ಲೆ ಬಂದು ನೆಲೆಸಿದ್ದ. ಥಣಿಸಂದ್ರದಲ್ಲಿ ಸಣ್ಣದೊಂದು ಮನೆ ಮಾಡಿಕೊಂಡು ವಾಸವಿದ್ದರು. ಕಳೆದ 6 ವರ್ಷಗಳ ಹಿಂದಷ್ಟೇ ಅಯ್ಯಪ್ಪ ತಂದೆ ಮೃತಪಟ್ಟಿದ್ದರು.
ತಾಯಿ ಮನೆ ಕೆಲಸ ಮಾಡಿಕೊಂಡು ಮಗನನ್ನು ಓದಿಸುತ್ತಿದ್ದರು. ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಯ್ಯಪ್ಪನಿಗೆ ಬೈಕ್ ನಲ್ಲಿ ಓಡಾಡುವ ಹುಚ್ಚು ಹೆಚ್ಚಾಗಿತ್ತು. ಬೈಕ್ ಕೊಡಿಸುವಂತೆ ಅಮ್ಮನನ್ನು ಪೀಡಿಸುತ್ತಿದ್ದ. ಆರ್ಥಿಕವಾಗಿ ಹಿಂದುಳಿದಿದ್ದ ಹಿನ್ನೆಲೆಯಲ್ಲಿ ಪುತ್ರನಿಗೆ ತಾಯಿ ಬೈಕ್ ಕೊಡಿಸಿರಲಿಲ್ಲ. ಸ್ವಲ್ಪ ದಿನ ಕಾಯು ಮುಂದೆ ಬೈಕ್ ಕೊಡಿಸೋಣ ಎಂದು ತಾಯಿ ಮಗನಿಗೆ ಸಮಾಧಾನ ಮಾಡಿದ್ದರು. ಅಲ್ಲದೇ, ಶೀಘ್ರದಲ್ಲೇ ಬೈಕ್ ಕೊಡಿಸಲು ತಾಯಿ ನಿರ್ಧರಿಸಿ 50 ಸಾವಿರ ರೂ. ಸಾಲ ಮಾಡಲು ಮುಂದಾಗಿದ್ದರು.
ಸೆ.11ರಂದು ಅಯ್ಯಪ್ಪ ತಾಯಿ ಬೆಳಗ್ಗೆ 6 ಗಂಟೆಗೆ ಎಂದಿನಂತೆ ಕೆಲಸಕ್ಕೆಂದು ಹೋಗಿದ್ದರು. ಸಂಜೆ 4.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದರಿಂದ ಗಾಬರಿಗೊಂಡ ತಾಯಿ ಸಂಬಂಧಿಕರು ಹಾಗೂ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸಂಬಂಧಿಕರು ನೀಡಿದ ಮಾಹಿತಿ ಆಧರಿಸಿ ಹೆಣ್ಣೂರು ಪೊಲೀರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಯಿ ಬೈಕ್ ಕೊಡಿಸಲು ಮುಂದಾಗಿರುವ ಸಂಗತಿ ಅಯ್ಯಪ್ಪನ ಗಮನಕ್ಕೆ ಬಂದಿರಲಿಲ್ಲ. ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಡಿಕೊಂಡಿದ್ದಾನೆ ಎನ್ನಲಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.