Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್ ಆದ ನರ್ಸ್!
ಆಸ್ಪತ್ರೆಯಲ್ಲಿ ನರ್ಸ್ ತನ್ನ ಕೆಲಸ ಮುಗಿಸಿ ಮನೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಳು...
Team Udayavani, Sep 13, 2024, 11:50 AM IST
Representative Image: Pixabay
ಪಾಟ್ನಾ: ನರ್ಸ್(Nurse) ಮೇಲೆ ಸಾಮೂಹಿಕ ಅ*ತ್ಯಾಚಾರ ನಡೆಸಲು ಯತ್ನಿಸಿದ ವೇಳೆ ದಿಢೀರನೆ ಹರಿತವಾದ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸುವ ಮೂಲಕ ಅಪಾಯದಿಂದ ಪಾರಾದ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮಬಂಗಾಳದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆ ಮೇಲಿನ ಅ*ತ್ಯಾಚಾರ ಮತ್ತು ಹ*ತ್ಯೆ ಪ್ರಕರಣ ನಡೆದು ಒಂದು ತಿಂಗಳ ನಂತರ ಬಿಹಾರದಲ್ಲಿ ಈ ಘಟನೆ ನಡೆದಿದೆ.
ಅ*ತ್ಯಾಚಾರ ಪ್ರಕರಣದಲ್ಲಿ ವೈದ್ಯನೊಬ್ಬ ಭಾಗಿಯಾಗಿದ್ದು, ಈತ ಸಮಷ್ಠಿಪುರ್ ಜಿಲ್ಲೆಯ ಆರ್ ಬಿಎಸ್ (RBS) ಹೆಲ್ತ್ ಕೇರ್ ಸಂಟರ್ ನ ಅಡ್ಮಿನಿಸ್ಟ್ರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.
ಆಸ್ಪತ್ರೆಯಲ್ಲಿ ನರ್ಸ್ ತನ್ನ ಕೆಲಸ ಮುಗಿಸಿ ಮನೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಕುಡಿದ ಅಮಲಿನಲ್ಲಿದ್ದ ಡಾ.ಸಂಜಯ್ ಕುಮಾರ್ ಮತ್ತು ಅತನ ಇಬ್ಬರು ಸಹಾಯಕ ವೈದ್ಯರು ಆಕೆಯ ಮೇಲೆ ಅ*ತ್ಯಾಚಾರ ಎಸಗಲು ಮುಂದಾಗಿದ್ದರು. ಆಗ ನರ್ಸ್ ಬ್ಲೇಡ್ ನಿಂದ ವೈದ್ಯನ ಖಾಸಗಿ ಅಂಗವನ್ನು ಕತ್ತರಿಸಿದ ನಂತರ ಕಾಮುಕರ ಕಪಿಮುಷ್ಟಿಯಿಂದ ತಪ್ಪಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಆಸ್ಪತ್ರೆಯಿಂದ ಹೊರ ಬಂದ ನಂತರ ನರ್ಸ್ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಅದರಂತೆ ಆಸ್ಪತ್ರೆಗೆ ದೌಡಾಯಿಸಿದ ಪೊಲೀಸರು, ಡಾ. ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮತ್ತಿಬ್ಬರು ಆರೋಪಿಗಳಾದ ಡಾ.ಅವಧೇಶ್ ಕುಮಾರ್ ಮತ್ತು ಡಾ.ಸುನೀಲ್ ಕುಮಾರ್ ಗುಪ್ತಾನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.