Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

ಬೆಳ್ಳಾರೆ ಸಮೀಪದ ಊರ ರಸ್ತೆಯ ಕಾಮಗಾರಿಗೆ ಫಲಾನುಭವಿ ಕಾವಲುಗಾರ

Team Udayavani, Sep 13, 2024, 1:15 PM IST

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

ಪುತ್ತೂರು: ಸುಮಾರು ಹತ್ತು ವರ್ಷಗಳಿಂದ ತೀರಾ ಹದಗೆಟ್ಟಿದ್ದ ಸಾರ್ವಜನಿಕ ರಸ್ತೆಯೊಂದಕ್ಕೆ ಹೊಸದಾಗಿ ಕಾಂಕ್ರೀಟ್‌ ಕಾಮಗಾರಿ ನಡೆಯುತ್ತಿದ್ದು ಗುಣಮಟ್ಟದ ಮೇಲೆ ನಿಗಾ ಇಡಲು ಕೃಷಿಕ ನೋರ್ವ ದಿನ ನಿತ್ಯ ಕಾವಲು ಕಾಯುತ್ತಿರುವ ಅಪರೂಪದ ಪ್ರಸಂಗ ಇದು.

ಸುಳ್ಯ ತಾಲೂಕಿನ ಬೆಳ್ಳಾರೆ ಕೇಂದ್ರ ಬಸ್‌ ನಿಲ್ದಾಣದ ಬಳಿಯಿಂದ ಕವಲೊಡೆದು ತಡಗಜೆ ಮೂಲಕ ಕೊಡಿಯಾಲ ಗ್ರಾಮಕ್ಕೆ ಸಂಪರ್ಕ ಬೆಸೆಯುವ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ರಸ್ತೆ ಇದು. ದಿನಂಪ್ರತಿ ನೂರಾರು ಮಂದಿ ಈ ರಸ್ತೆಯನ್ನು ಅವಲಂಬಿಸಿದ್ದರೂ, ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದರೂ ಕಳೆದ ಕೆಲ ವರ್ಷಗಳಿಂದ ತೀರಾ ಹದಗೆಟ್ಟು ಸಂಚಾರಕ್ಕೆ ಅಸಾಧ್ಯ ಎನ್ನುವ ಸ್ಥಿತಿಗೆ ತಲುಪಿತ್ತು. ಸ್ಥಳೀಯರ ನಿರಂತರ ಒತ್ತಡದಿಂದ ಕೆಲವು ತಿಂಗಳ ಹಿಂದೆ ಅನುದಾನ ಬಿಡುಗಡೆಗೊಂತ್ತು.

ಕಾಮಗಾರಿಗೆ ಕಾವಲುಗಾರ
ಹತ್ತು ದಿನಗಳ ಹಿಂದೆ ಬೆಳ್ಳಾರೆ ಜಂಕ್ಷನ್‌ನಿಂದ 230 ಮೀಟರ್‌ ದೂರದ ತನಕ ಸುಮಾರು 16 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಕಾಮಗಾರಿ ಪ್ರಾರಂಭಗೊಂಡಿತ್ತು. ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಸ್ತೆ ಫಲಾನುಭವಿಯಾಗಿರುವ ಕೃಷಿಕ ದಿಲೀಪ್‌ ಗಟ್ಟಿಗಾರು ನಿರ್ಧರಿಸಿದರು. ಸ್ವ ಇಚ್ಛೆಯಿಂದ, ಉಚಿತವಾಗಿ ಕಳೆದ ಹತ್ತು ದಿನಗಳಿಂದ ಕಾಮಗಾರಿಯ ಪ್ರತೀ ಕ್ಷಣವನ್ನೂ ವೀಕ್ಷಿಸುತ್ತಾ ಗುಣಮಟ್ಟದ ಬಗ್ಗೆ ಗುತ್ತಿಗೆದಾರ, ಎಂಜಿನಿಯರ್‌ ಅವರಿಂದ ಮಾಹಿತಿ ಪಡೆಯುತ್ತಿದ್ದಾರೆ. ಅನುಮಾನ ಬಂದಲ್ಲಿ ಕಾರ್ಮಿಕರ ಬಳಿ ವಿಚಾರಿಸಿ ಮಾಹಿತಿ ಪಡೆಯುತ್ತಾರೆ. ಈ ಕೆಲಸಕ್ಕಾಗಿ ಇಡೀ ದಿನವನ್ನು ಮೀಸಲಿಟ್ಟಿದ್ದಾರೆ.

ನನ್ನೂರಿನ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಮೇಲೆ ನಿತ್ಯವೂ ನಿಗಾ ಇರಿಸಿದ್ದೇನೆ. ಗುಣಮಟ್ಟದಲ್ಲಿ ರಾಜೀ ಮಾಡದೆ ಕಾಮಗಾರಿ ಮಾಡಬೇಕು ಅನ್ನುವುದೇ ನನ್ನ ಉದ್ದೇಶ. ಸಮರ್ಪಕ ರೀತಿಯಲ್ಲಿ ಕೆಲಸ ನಡೆದಿದೆ. -ದಿಲೀಪ್‌, ಗಟ್ಟಿಗಾರು

ಕರೆ ಮಾಡಿ ವಿಚಾರಿಸುತ್ತಾರೆ
ಪ್ರತೀ ದಿನ ರಸ್ತೆ ಕಾರ್ಮಿಕರು ಬೆಳಗ್ಗೆ 9.30ಕ್ಕೆ ಸ್ಥಳಕ್ಕೆ ಬಂದರೆ, ದಿಲೀಪ್‌ ಗಟ್ಟಿಗಾರು 8.45 ಕ್ಕೆ ಹಾಜರಿರುತ್ತಾರೆ. ಕಾರ್ಮಿಕರಿಗೆ ಫೋನ್‌ ಮಾಡಿ ಅವರು ಬರುವುದನ್ನು ಖಾತರಿ ಮಾಡುತ್ತಾರೆ. ಅಲ್ಲಿಂದ ಕಾಮಗಾರಿ ಮುಗಿಯುವ ತನಕವೂ ಇರುತ್ತಾರೆ. ಜಲ್ಲಿ, ಸಿಮೆಂಟ್‌ ಮಿಕ್ಸಿಂಗ್‌ ಸರಿಯಾಗಿದೆಯೋ ಎಂದು ಪರಿಶೀಲಿಸುತ್ತಾರೆ. ರಸ್ತೆಯ ಎತ್ತರ, ಅಗಲಕ್ಕೆ ಸಮ ಪ್ರಮಾಣದಲ್ಲಿ ಜಲ್ಲಿ ಮಿಶ್ರಣ ಹಾಕಿರುವ ಬಗ್ಗೆಯು ಮಾಹಿತಿ ಪಡೆಯುತ್ತಾ ರಸ್ತೆ ಗುಣಮಟ್ಟದ ಬಗ್ಗೆ ಹದ್ದಿನ ಕಣ್ಣಿರಿಸಿದ್ದಾರೆ. ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಅದಾದ ಬಳಿಕದ ಪ್ರಕ್ರಿಯೆಗಳ ಬಗ್ಗೆಯು ನಿಗಾ ಇರಿಸಲು ದಿಲೀಪ್‌ ನಿರ್ಧರಿಸಿದ್ದಾರೆ.

ಪೈಪ್‌ ಅಳವಡಿಕೆ
ರಸ್ತೆ ಕಾಮಗಾರಿ ಆದ ಬಳಿಕ ಕುಡಿಯುವ ನೀರಿಗಾಗಿ, ಕೇಬಲ್‌ ಅಳವಡಿಕೆಗಾಗಿ ರಸ್ತೆಯನ್ನೇ ಅಗೆಯುವುದನ್ನು ಕಂಡಿದ್ದೇವೆ. ಇದರಿಂದ ರಸ್ತೆ ಹಾಳಾದ ನೂರಾರು ಉದಾಹರಣೆಗಳು ಇವೆ. ಈ ಬಗ್ಗೆ ಮೊದಲೇ ಎಚ್ಚೆತ್ತುಕೊಂಡಿರುವ ದಿಲೀಪ್‌ ಗುತ್ತಿಗೆದಾರರ ಗಮನಕ್ಕೆ ತಂದು ರಸ್ತೆಯ ಬದಿಗಳಲ್ಲಿ ಪೈಪ್‌ ಅಳವಡಿಸಿದ್ದಾರೆ. ಭವಿಷ್ಯದ ದಿನಗಳಲ್ಲಿ ನಳ್ಳಿ ನೀರಿನ ಸಂಪರ್ಕ ಪಡೆಯಲು ಬೇಕಾದ ಹಾಗೇ ಪೈಪ್‌ ಜೋಡಿಸಿದ್ದಾರೆ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.