ವಂದೇ ಭಾರತ್‌ಗೆ ಬೆಳಗಾವಿ ಜನರ ಅಸಮಾಧಾನ-ಪುಣೆಯಿಂದ ಹುಬ್ಬಳ್ಳಿಗೆ ಹೊಸ ರೈಲು

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಆರಂಭ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

Team Udayavani, Sep 13, 2024, 1:55 PM IST

ವಂದೇ ಭಾರತ್‌ಗೆ ಬೆಳಗಾವಿ ಜನರ ಅಸಮಾಧಾನ-ಪುಣೆಯಿಂದ ಹುಬ್ಬಳ್ಳಿಗೆ ಹೊಸ ರೈಲು

ಉದಯವಾಣಿ ಸಮಾಚಾರ
ಬೆಳಗಾವಿ: ಹುಬ್ಬಳ್ಳಿಯಿಂದ ಬೆಳಗಾವಿ ಮೂಲಕ ಪುಣೆವರೆಗೆ ನೂತನ ವಂದೇ ಭಾರತ್‌ ರೈಲು ಸಂಚಾರ ಸುದ್ದಿ ಗಡಿ ಭಾಗದ ಬೆಳಗಾವಿ ಜನರಲ್ಲಿ ಮತ್ತೆ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್‌ ರೈಲಿನ ನಿರೀಕ್ಷೆಯಲ್ಲಿದ್ದ ಜನರು ಜಿಲ್ಲೆಯ ರಾಜಕೀಯ ನಾಯಕರ ಇಚ್ಛಾಶಕ್ತಿ ಬಗ್ಗೆ ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

ಅಭಿವೃದ್ಧಿ ವಿಷಯದಲ್ಲಿ ಹುಬ್ಬಳ್ಳಿ ಭಾಗದ ರಾಜಕೀಯ ನಾಯಕರು ಇಚ್ಛಾಶಕ್ತಿ ತೋರಿಸುತ್ತಿದ್ದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಪ್ರತಿಷ್ಠೆ ಎಲ್ಲದಕ್ಕೂ ಸಮಸ್ಯೆಯಾಗುತ್ತಿದೆ. ಪರಸ್ಪರ ಸಹಕಾರದ ಕೊರತೆ ಎದ್ದುಕಾಣುತ್ತಿದೆ. ವರ್ಷದ ಹಿಂದೆ ಬೆಂಗಳೂರಿನಿಂದ ಬೆಳಗಾವಿಯವರೆಗೆ ಯಶಸ್ವಿ ಪ್ರಾಯೋಗಿಕ ಚಾಲನೆಗಳ ಹೊರತಾಗಿಯೂ ವಂದೇ ಭಾರತ್‌ ಎಕ್ಸ್ ‌ಪ್ರೆಸ್‌ ಸೇವೆಗಳು ನೇರವಾಗಿ ಬೆಳಗಾವಿ ನಿವಾಸಿಗಳಿಗೆ ಲಭ್ಯವಿಲ್ಲ ಎಂಬ ಸುದ್ದಿ ಸಹಜವಾಗಿಯೇ ಅನೇಕ ರೀತಿಯ ಅನುಮಾನಗಳಿಗೆ ಕಾರಣವಾಗಿದೆ.

ಪ್ರಸ್ತುತ ಹೈಸ್ಪೀಡ್‌ ರೈಲು ಬೆಂಗಳೂರು ಮತ್ತು ಧಾರವಾಡ ನಡುವೆ ಕಾರ್ಯನಿರ್ವಹಿಸುತ್ತಿದ್ದರೂ ಇದೇ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲು ನೈಋತ್ಯ ರೈಲ್ವೆ ಇಲಾಖೆ ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ತಾಂತ್ರಿಕ ಕಾರಣಗಳನ್ನು ಒಡ್ಡುತ್ತಲೇ ಬಂದಿದೆ. ಆದರೆ ಈಗ ಹುಬ್ಬಳ್ಳಿಯಿಂದ ಬೆಳಗಾವಿ ಮೂಲಕ ಹಾದು ಹೋಗುವ ಪುಣೆ ಮತ್ತು ಹುಬ್ಬಳ್ಳಿ (570 ಕಿಮೀ) ನಡುವೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇವೆ ಪ್ರಾರಂಭ ಜಿಲ್ಲೆಯ ಜನರಲ್ಲಿ ಅಚ್ಚರಿ ಮತ್ತು ಅಸಮಾಧಾನ ಹುಟ್ಟುಹಾಕಿದೆ.

ನಿರಂತರ ಮನವಿಗಳ ನಡುವೆಯೂ ಬೆಂಗಳೂರು-ಧಾರವಾಡ ವಂದೇ ಭಾರತ್‌ ಸೇವೆಯನ್ನು ಬೆಳಗಾವಿಗೆ (610 ಕಿಮೀ) ವಿಸ್ತರಣೆ
ಮಾಡುತ್ತಿಲ್ಲ. ಇದಕ್ಕೆ ತಾಂತ್ರಿಕ ಸಮಸ್ಯೆ ಎದುರಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳುತ್ತಲೇ ಬಂದರು. ಆಗ ಜನರೂ ಈ ಅಭಿಪ್ರಾಯಕ್ಕೆ ತಲೆಬಾಗಿ ಸುಮ್ಮನಾದರು. ಆದರೆ ಈಗ ಅದೇ ವಂದೇ ಭಾರತ್‌ ರೈಲು ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳ್ಳಿಗೆ
ಸಂಚರಿಸುವುದಾದರೆ ಅದಕ್ಕೆ ಯಾವ ತಾಂತ್ರಿಕ ಸಮಸ್ಯೆಗಳೂ ಬರುವದಿಲ್ಲವೇ ಎಂಬುದು ಜನರ ಪ್ರಶ್ನೆ.

ಮುಖ್ಯವಾಗಿ ಪುಣೆ ಮತ್ತು ಹುಬ್ಬಳ್ಳಿ ನಡುವೆ ವಂದೇ ಭಾರತ್‌ ರೈಲಿನ ಪ್ರಾಯೋಗಿಕ ಸಂಚಾರವೂ ಇದುವರೆಗೆ ನಡೆದಿಲ್ಲ. ಹೀಗಿದ್ದರೂ ಅದಕ್ಕೆ ರೈಲ್ವೆ ಸಚಿವರು ಅನುಮೋದನೆ ಕೊಡಲು ಕಾರಣ ಏನು, ಇದರ ಹಿಂದೆ ಯಾವ ಪ್ರಭಾವ ಕೆಲಸ ಮಾಡಿತು ಎಂಬ ಅನುಮಾನ ಹುಟ್ಟಿಕೊಂಡಿದೆ.

ಮಾಹಿತಿ ಪ್ರಕಾರ ಧಾರವಾಡ ಮತ್ತು ಬೆಳಗಾವಿ ನಡುವಿನ ಪ್ರಯಾಣದ ಸಮಯ ಎರಡೂ ದಿಕ್ಕುಗಳಲ್ಲಿ ಸುಮಾರು 1 ಗಂಟೆ 40 ನಿಮಿಷಗಳು ಎಂದು ಅಂದಾಜಿಸಲಾಗಿದೆ. ರೈಲ್ವೆ ಮಂಡಳಿ ಪ್ರಕಾರ ಬೆಂಗಳೂರು ಮತ್ತು ಬೆಳಗಾವಿ ನಡುವಿನ ಪ್ರಯಾಣಕ್ಕೆ 7 ಗಂಟೆ 45 ನಿಮಿಷಗಳ ಸಮಯ ಬೇಕು. ಅದೇ ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಸೇವೆ 8 ಗಂಟೆ 30 ನಿಮಿಷಗಳ ಪ್ರಯಾಣದ ಅವಧಿಯನ್ನು ಹೊಂದಿದೆ. ಹೀಗಿರುವಾಗ ಯಾವ ಮಾನದಂಡದ ಮೇಲೆ ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಆರಂಭ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಮರೆಯಾದ ಸಿಹಿಸಂಭ್ರಮ: ಕಳೆದ ನವೆಂಬರ್‌ನಲ್ಲಿ ವಂದೇ ಭಾರತ್‌ ರೈಲು ಪ್ರಾಯೋಗಿಕವಾಗಿ ಗಡಿನಾಡು ಬೆಳಗಾವಿಗೆ ಬಂದಾಗ ರಾಜಕೀಯ ಪಕ್ಷಗಳಿಂದ ವಿಜಯೋತ್ಸವವೇ ನಡೆದಿತ್ತು. ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದರು. ಆಗ ವಿಜಯೋತ್ಸವದ ಜತೆಗೆ ವಂದೇ ಭಾರತ್‌ ರೈಲಿನ ಹಿಂದೆ ಎರಡು ಪ್ರಮುಖ ಪಕ್ಷಗಳ ನಾಯಕರ ನಡುವೆ ಕ್ರೆಡಿಟ್‌ ವಾರ್‌ ಸಹ ಜೋರಾಗಿ ನಡೆದಿತ್ತು. ಕಾರ್ಯಕರ್ತರು ಸಹ ತಮ್ಮ ನಾಯಕರ ಶ್ರಮದ ಫಲ ಎಂದೇ ಬಿಂಬಿಸಿಕೊಂಡಿದ್ದರು.

ನಂತರ ವಿಜಯೋತ್ಸವ ಮಾಡಿದವರು ಸುಮ್ಮನಾದರು. ಈ ಕಡೆ ಬೆಂಗಳೂರಿನಿಂದ ಬೆಳಗಾವಿಗೆ ಸಂಚಾರ ಆರಂಭಿಸಬೇಕಾಗಿದ್ದ ವಂದೇ ಭಾರತ್‌ ರೈಲಿಗೆ ತಾಂತ್ರಿಕ ಕಾರಣದ ನೆಪ ಮುಂದೆ ಮಾಡಲಾಯಿತು. ಆನಂತರ ಈ ರೈಲು ಸಂಚಾರದ ಕಥೆ ಏನಾಯಿತು ಎಂಬುದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಲಿಲ್ಲ. ರಾಜಕೀಯ ಆರೋಪ-ಪ್ರತ್ಯಾರೋಪಗಳು ಮಾತ್ರ ನಿರಂತರವಾಗಿ ನಡೆದವು.

ಈ ರಾಜಕೀಯ ಕಿತ್ತಾಟದ ನಡುವೆ ಈಗ ಅಚ್ಚರಿ ಎನ್ನುವಂತೆ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್‌ ರೈಲು ಸಂಚಾರ ಆರಂಭವಾಗುತ್ತಿದೆ. ಇದಕ್ಕೆ ಕಳೆದ ಒಂದು ವರ್ಷದಿಂದ ಪ್ರಯತ್ನ ನಡೆದಿತ್ತು. ಈಗ ಈ ರೈಲು ಬೆಳಗಾವಿ ಮೇಲೆ ಹಾದು ಹೋಗುತ್ತದೆ. ಇಲ್ಲಿ ನಿಲುಗಡೆ ಮಾಡಲಾಗುತ್ತದೆ ಎಂಬುದೇ ಇಲ್ಲಿನ ಜನರ ಸಮಾಧಾನ ಅಷ್ಟೆ. ಬೆಳಗಾವಿ ಜನರು ಮತ್ತು
ಉದ್ಯಮಿಗಳು ನೇರವಾಗಿ ಬೆಳಗಾವಿ ಮತ್ತು ಪುಣೆ ನಡುವೆ ವಂದೇ ಭಾರತ್‌ ರೈಲಿಗೆ ಬೇಡಿಕೆ ಇಟ್ಟಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ.

ಪುಣೆಯಿಂದ ಬೆಳಗಾವಿಗೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಈಗ ಅದು ಈಡೇರಿದೆ. ಇನ್ನು ಬೆಂಗಳೂರಿನಿಂದ ಧಾರವಾಡದವರೆಗೆ ಬರುವ ವಂದೇ ಭಾರತ್‌ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು
ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ. ಈ ಸಂಬಂಧ ಸದ್ಯದಲ್ಲೇ ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ.
ಜಗದೀಶ ಶೆಟ್ಟರ, ಬೆಳಗಾವಿ ಸಂಸದ

ಈ ಹಿಂದೆ ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್‌ ರೈಲಿನ ಯಶಸ್ವಿ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಆಗ ರೈಲ್ವೆ ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಹೇಳಿದ ಕಾರಣ ವಂದೇ ಭಾರತ್‌ ರೈಲು ಸಂಚಾರ ಆರಂಭವಾಗದೆ ನಿರಾಸೆಯಾಗಿತ್ತು. ಈಗ ಯಾವುದೇ ಪ್ರಾಯೋಗಿಕ ಸಂಚಾರ ಇಲ್ಲದೆ ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಸಂಚಾರ ಆರಂಭಿಸಲಾಗುತ್ತಿದೆ. ಹಾಗಾದರೆ ಈ ರೈಲು ಸಂಚಾರಕ್ಕೆ ತಾಂತ್ರಿಕ ಸಮಸ್ಯೆ ಕಾಣಿಸಲಿಲ್ಲವೇ? ಈ ರೀತಿಯ ತಾರತಮ್ಯ ಸರಿಯೇ?
ಪ್ರಸಾದ ಕುಲಕರ್ಣಿ, ನೈಋತ್ಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ

* ಕೇಶವ ಆದಿ

ಟಾಪ್ ನ್ಯೂಸ್

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.