ಮಕ್ಕಳನ್ನು ಮೊಬೈಲ್ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ
Team Udayavani, Sep 13, 2024, 10:10 AM IST
■ ಉದಯವಾಣಿ ಸಮಾಚಾರ
ಹಾನಗಲ್ಲ: ಆರೋಗ್ಯಕ್ಕಾಗಿ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಕ್ರೀಡೆಗೆ ಮಹತ್ವ ನೀಡಿದರೆ ಇದು ಸಾಧ್ಯವಾಗುವುದಲ್ಲದೇ, ಉತ್ತಮ
ಆಸಕ್ತಿಗಳ ಮೂಲಕ ಮಕ್ಕಳನ್ನು ಮೊಬೈಲ್ ಆಕರ್ಷಣೆಯಿಂದ ದೂರ ಮಾಡಲು ಸಾಧ್ಯ ಎಂದು ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ ತಿಳಿಸಿದರು.
ಇಲ್ಲಿನ ನವೀನ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಹಾನಗಲ್ಲ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ
ಮಾತನಾಡಿದ ಅವರು, ಸದೃಢ ದೇಹ ಮನಸ್ಸಿಗಾಗಿ ಕ್ರೀಡಾ ಚಟುವಟಿಕೆಗಳು ಬೇಕು. ಮಕ್ಕಳಿಗೆ ಕ್ರೀಡಾ ಆಸಕ್ತಿ ಬೆಳೆಸಿದರೆ ಇಂದಿನ
ಮೊಬೈಲ್ನಿಂದ ದೂರವಿಡಲು ಸಾಧ್ಯ. ಉತ್ತಮ ಆಸಕ್ತಿಯಿಂದ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಉತ್ತಮ ವಿಷಯಗಳ ಓದು, ಉತ್ತಮ ಚಟುವಟಿಕೆಗಳ ಕಡೆ ಗಮನ ಹರಿಸುವಂತಾಗಬೇಕು ಎಂದರು.
ಪುರಸಭೆ ಉಪಾಧ್ಯಕ್ಷೆ ವೀಣಾ ಗುಡಿ ಮಾತನಾಡಿ, ಪಠ್ಯದ ಉತ್ತಮ ಅಧ್ಯಯನಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ.
ವಿದ್ಯಾರ್ಥಿಗಳನ್ನು ಉತ್ಸಾಹದಿಂದಿಡಲು ಹೆಚ್ಚು ಉಪಯೋಗವಾಗುತ್ತದೆ. ಶಾಲಾ ಹಂತದಲ್ಲೇ ಕ್ರೀಡಾ ಆಸಕ್ತಿ ಬೆಳೆದರೆ ಪ್ರತಿಭಾವಂತರು ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ. ಅಂತಹ ಪ್ರೋತ್ಸಾಹ ಶಾಲಾ ಮಟ್ಟದಲ್ಲೇ ಸಿಗಲು ಎಂದರು.
ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಮಾತನಾಡಿ, ಮಕ್ಕಳಿಗೆ ವರ್ಷಪೂರ್ತಿ ಕ್ರೀಡೆಯ
ಆಸಕ್ತಿ ಉಳಿಯುವಂತೆ ಮಾರ್ಗದರ್ಶನ ಮಾಡುವಲ್ಲಿ ಶಿಕ್ಷಕರು ಕಾಳಜಿವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸರಕಾರ ಕ್ರೀಡಾ
ಚಟುವಟಿಕೆಗಳಿಗೆ ಉತ್ತಮ ಪ್ರೋತ್ಸಾಹ ನೀಡುತ್ತಿದೆ. ಅದರ ಸದುಪಯೋಗ ಆಗಬೇಕು ಎಂದರು.
ಸಂಸ್ಥೆಯ ಉಪಾಧ್ಯಕ್ಷ ಪ್ರದೀಪ ಮಹೇಂದ್ರಕರ ಅಧ್ಯಕ್ಷತೆ ವಹಿಸಿದ್ದರು. ಸಿಆರ್ಪಿ ಶ್ರೀನಿವಾಸ ದೀಕ್ಷಿತ್, ಇಸಿಒ ಬಸವರಾಜ
ಸಂಗೂರು, ದೈಹಿಕ ಶಿಕ್ಷಣಾಧಿಕಾರಿ ಜಿ.ಎಂ. ಪಂಚಾಳ, ನವಿನ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಜು ಬಳಲದವರ, ನವೀನ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸಂತೋಷ ದೊಡ್ಡಮನಿ, ಎಂ.ಎಸ್. ಅಮರದ, ವಿನಾಯಕ ಕಳಸೂರ, ಮಹೇಶ್ವರಿ ಪೂಜಾರ, ಪ್ರಕಾಶ ಬಡಿಗೇರ, ಉಳವಪ್ಪ ಲಮಾಣಿ, ಎಂ.ಎಂ. ಮಾಸಣಗಿ, ಬಸವರಾಜ ತಿತ್ತಿ, ಕಾಶಿನಾಥ ಬಗರೆ, ವೇದಾ ಬಣಕಾರ, ಬಿ.ಎಂ. ದಿಡಗೂರ, ಲತಾ ಸದಾರಾಧ್ಯಮಠ, ಐ.ಬಿ. ಕುಂಕೂರ, ಎಂ. ಪಂಚಾಕ್ಷರಿ, ಸಹನಾ ಓಲೇಕಾರ, ಸಿ.ಆರ್. ವಡ್ಡರ, ಎಂ.ಎನ್. ಗೊಪಣ್ಣನವರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ಕಲಿಸಿ: ಚೌಡಯ್ಯ ಸ್ವಾಮೀಜಿ
Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್ ಕಿಡಿ
ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.