Bengaluru: ಲಂಚಕ್ಕೆ ಬೇಡಿಕೆ: ವಿಶೇಷ ತಹಶೀಲ್ದಾರ್‌ಗೆ 3 ವರ್ಷ ಜೈಲು

ಜಮೀನು ವ್ಯಾಜ್ಯ ಇತ್ಯರ್ಥಕ್ಕೆ 20 ಲಕ್ಷ ರೂ. ಲಂಚ ಬೇಡಿಕೆ ಆರೋಪ ; ಲಂಚ ಸ್ವೀಕರಿಸುವಾಗ ಕಾರ್ಯಾಚರಣೆ

Team Udayavani, Sep 13, 2024, 3:07 PM IST

16-

ಬೆಂಗಳೂರು: ಜಮೀನಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಅರ್ಜಿದಾರರ ಪರ ಆದೇಶ ನೀಡಲು 20 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌ ಹಾಗೂ ಅವರ ಸಹಾಯಕನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಬಿ.ಎಸ್‌.ವೆಂಕಟಾಚಲಪತಿ ಹಾಗೂ ಇವರ ಸಹಾಯಕ ಮಧುಸೂದನ್‌ ಶಿಕ್ಷೆಗೆ ಒಳಗಾದವರು.

ಏನಿದು ಪ್ರಕರಣ?: ಹುಳಿಮಾವು ನಿವಾಸಿ ಎಚ್‌ .ಪಿ.ಮಂಜುನಾಥ್‌ ಹಾಗೂ ಅವರ ಸಹೋದರರ ಮಕ್ಕಳಿಗೂ ಗೊಟ್ಟಿಗೆರೆ ಗ್ರಾಮದಲ್ಲಿ 1 ಎಕರೆ 37 ಗುಂಟೆ ಜಮೀನಿನ ವಿಚಾರದ ಸಂಬಂಧ ವಿಶೇಷ ತಹಶೀಲ್ದಾರ್‌ ಕಚೇರಿಯಲ್ಲಿ ಕೇಸು ನಡೆಯುತ್ತಿತ್ತು. ಮಂಜುನಾಥ್‌ ತಂದೆ ನಿಧನರಾದ ಬಳಿಕ 2016ರಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ್‌ಗೆ ಕೇಸನ್ನು ಬೇಗ ಮುಗಿಸಿ ಕೊಡುವಂತೆ ಮನವಿ ಪತ್ರ ಸಲ್ಲಿಸಿದ್ದರು.

ಬಿ.ಎಸ್‌.ವೆಂಕಟಾಚಲಪತಿ ಭೇಟಿ ಮಾಡಿ ಕೆಲಸದ ಬಗ್ಗೆ ವಿಚಾರಿಸಿದಾಗ ತನ್ನ ಸಹಾಯಕ ಮಧುಸೂದನ್‌ ಅವರನ್ನು ಕರೆಯಿಸಿ ಇವರನ್ನು ಭೇಟಿ ಮಾಡುವಂತೆ ಮಂಜುನಾಥ್‌ಗೆ ಸೂಚಿಸಿದ್ದರು. ಅದರಂತೆ ಮಧುಸೂದನ್‌ ಭೇಟಿ ಮಾಡಿದಾಗ ಮಂಜುನಾಥ್‌ ಪರ ಆದೇಶ ಮಾಡಲು 20 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬಿ.ಎಸ್‌.ವೆಂಕಟಾಚಲಪತಿಯನ್ನು ಮಂಜುನಾಥ್‌ ಪ್ರಶ್ನಿಸಿದಾಗ ಅವರು ಸಹ 15 ಲಕ್ಷಕ್ಕೆ ಬೇಡಿಕೆಯಿಟ್ಟು ಮುಂಗಡವಾಗಿ 5 ಲಕ್ಷ ರೂ. ತಂದು ಕೊಟ್ಟರೆ ನಿಮ್ಮ ಪರವಾಗಿ ಆದೇಶಮಾಡುತ್ತೇನೆ. ಉಳಿದ ಹಣವನ್ನು ನೀಡಿದ ಬಳಿಕ ಆರ್ಡರ್‌ ಕಾಪಿ ಕೊಡುವುದಾಗಿ ಲಂಚದ ಹಣಕ್ಕೆ ಒತ್ತಾಯಿಸಿದ್ದರು. ಮಂಜುನಾಥ್‌ ಈ ಹಿಂದೆಯಿದ್ದ ಎಸಿಬಿಗೆ ದೂರು ನೀಡಿದ್ದರು. 2017ರಲ್ಲಿ ಎಸಿಬಿ ದಾಳಿ ನಡೆಸಿದಾಗ ವೆಂಕಟಾಚಲಪತಿ ಪರ ಲಂಚ ಸ್ವೀಕರಿಸುತ್ತಿದ್ದ ಮಧುಸೂದನ್‌ ಸಿಕ್ಕಿ ಬಿದ್ದಿದ್ದರು.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.