Baikampady ಜಂಕ್ಷನ್ ರಸ್ತೆಗೆ ಗುಣವಾಗದ ಕಾಯಿಲೆ!
ಹೊಂಡಗುಂಡಿಗಳಿಂದಾಗಿ ಹೈರಾಣು; ಲಾರಿಗಳ ಭಾರಕ್ಕೆ ಇಂಟರ್ಲಾಕ್ ನಾಶ
Team Udayavani, Sep 13, 2024, 3:14 PM IST
ಬೈಕಂಪಾಡಿ: ಇಲ್ಲಿನ ಕೈಗಾರಿಕಾ ಪ್ರದೇಶಕ್ಕೆ ಹೋಗುವ ರಸ್ತೆ ತೀರಾ ಹದೆಗೆಟ್ಟಿದ್ದು ಕೈಗಾರಿಕಾ ವಲಯಕ್ಕೆ ಪ್ರವೇಶ ಪಡೆಯುವ ಟ್ರಕ್, ಕಂಟೈನರ್ ಸಹಿತ ಘನ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಸರಿಸುಮಾರು 30 ಸಾವಿರ ಕಾರ್ಮಿಕರು ದಿನನಿತ್ಯ ಸಂಚರಿಸುವ ಪ್ರಮುಖ ರಸ್ತೆ ಇದಾಗಿದೆ.
ಸಾವಿರಾರು ದ್ವಿಚಕ್ರ ವಾಹನ, ಜೋಕಟ್ಟೆಗೆ ಹೋಗುವ ಬಸ್ ಸಹಿತ ಇತರ ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ಹೊಂಡಗುಂಡಿಗಳಿಂದಾಗಿ ‘ಅಯ್ಯೋ ಯಾಕಾದರೂ ಇಲ್ಲಿಂದ ಹೋಗುವ ದುಃಸ್ಥಿತಿ ನಮಗೆ ಬಂತೋ?’ ಎಂದು ಸವಾರರು ಹಳಹಳಿಸುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಅಧೀನದಲ್ಲಿದ್ದರೂ ಅಭಿವೃದ್ಧಿಗಾಗಿ ಭೂ ಸ್ವಾಧೀನವನ್ನು ಕೇಂದ್ರ ಸರಕಾರ ಮಾಡಿಕೊಡಬೇಕಾಗಿದೆ. ಈ ಕಾರಣದಿಂದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮತ್ತು ಸ್ಥಳೀಯ ಪಾಲಿಕೆ ಈ ಸಮಸ್ಯೆ ನಮ್ಮ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ಕಣ್ಮುಚ್ಚಿ ಕುಳಿತಿವೆ. ಈ ಹಿಂದೆ ಬೃಹತ್ ಹೊಂಡವಾದಾಗ ಇಂಟರ್ ಲಾಕ್ ಹಾಕಲಾಗಿತ್ತು. ಘನ ವಾಹನಗಳ ಭಾರಕ್ಕೆ ಅವು ನಾಶವಾಗಿವೆ.
ಪ್ರಮುಖ ಕೈಗಾರಿಕಾ ಪ್ರದೇಶ ಇದಾಗಿರುವುದರಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ವ್ಯವಹಾರಗಳ ಒಟ್ಟಾರೆ ಉತ್ಪಾದಕತೆ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ತತ್ಕ್ಷಣವೇ ಬೈಕಂಪಾಡಿ ಜಂಕ್ಷನ್ ರಸ್ತೆಯ ದುರಸ್ತಿಗೆ ಕ್ರಮ ಜರಗಿಸಬೇಕು ಎಂದು ಕೆನರಾ ಕೈಗಾರಿಕಾ ಸಂಘ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.