Mangaluru:ಕರಾವಳಿ ಉತ್ಸವದಲ್ಲಿ ಮಾರ್ಪಾಡು ನಿರೀಕ್ಷೆ;ನಗರ ಮಧ್ಯದಿಂದ ಪಿಲಿಕುಳಕ್ಕೆ ಸ್ಥಳಾಂತರ

ಇನ್ನು ಪ್ರದರ್ಶನ ಇಲ್ಲ; ಆಹಾರೋತ್ಸವ, ಸಾಂಸ್ಕೃತಿಕ ಚಟುವಟಿಕೆಗೆ ಸೀಮಿತ

Team Udayavani, Sep 13, 2024, 3:28 PM IST

Mangaluru:ಕರಾವಳಿ ಉತ್ಸವದಲ್ಲಿ ಮಾರ್ಪಾಡು ನಿರೀಕ್ಷೆ;ನಗರ ಮಧ್ಯದಿಂದ ಪಿಲಿಕುಳಕ್ಕೆ ಸ್ಥಳಾಂತರ

ಮಹಾನಗರ: ಈ ಬಾರಿಯ ಕರಾವಳಿ ಉತ್ಸವವನ್ನು ವಿಭಿನ್ನವಾಗಿ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ತುಳುನಾಡಿನ ಅಹಾರ ಹಾಗೂ ಸಂಸ್ಕೃತಿಗೆ ಒತ್ತು ನೀಡುವ ಮೂಲಕ ಈ ವರೆಗೆ ಕರಾವಳಿ ಉತ್ಸವ ಎಂದರೆ ‘ಪ್ರದರ್ಶನ’ ಎಂದು ಜನಮಾನಸದಲ್ಲಿ ಇದ್ದ ಭಾವನೆಯನ್ನು ಬದಲಾಯಿಸಲಾಗುವುದು. ಜತೆಗೆ ಉತ್ಸವದ ಸ್ಥಳವೂ ಬದಲಾಗಲಿದೆ.

ಈವರೆಗೆ ಲಾಲ್‌ಬಾಗ್‌ನ ಮಂಗಳಾ ಕ್ರೀಡಾಂಗಣದ ಒತ್ತಿಗೆ ಇರುವ ಮೈದಾನದಲ್ಲಿ ಕರಾವಳಿ ಉತ್ಸವ ನಡೆಯುತ್ತಿತ್ತು.

ವಸ್ತು ಪ್ರದರ್ಶನದ ಜತೆಯಲ್ಲೇ ಸಾಂಸ್ಕೃತಿ ಕಾರ್ಯಕ್ರಮಗಳು ಪ್ರದರ್ಶನಗೊಳ್ಳುತ್ತಿದ್ದವು. ಈ ಬಾರಿ ಪಿಲಿಕುಳದ ಅರ್ಬನ್‌ ಹಾಥ್‌ಗೆ ಸ್ಥಳಾಂತರಗೊಳ್ಳಲಿದೆ. ಈಗ ಅಲ್ಲಲ್ಲಿ ಆಗಾಗ ವಸ್ತು ಪ್ರದರ್ಶನಗಳು ನಡೆಯುತ್ತಿರುವುದರಿಂದ ಕರಾವಳಿ ಉತ್ಸವದ ಪ್ರದರ್ಶನ ನೋಡಲೆಂದೇ ಬರುವ ಜನರ ಸಂಖ್ಯೆ ಕಡಿಮೆಯಾಗಿದೆ. ಪ್ರದರ್ಶನ ಸ್ಟಾಲ್‌ಗ‌ಳನ್ನು ಸ್ಥಾಪಿಸುವವರ ಸಂಖ್ಯೆಯೂ ವಿರಳವಾಗಿದೆ. ಹಾಗಾಗಿ ಬದಲಾದ ಕಾಲಘಟ್ಟದಲ್ಲಿ ಕರಾವಳಿ ಉತ್ಸವದ ಸ್ವರೂಪದಲ್ಲಿ ಕೂಡ ಬದಲಾವಣೆ ಅಗತ್ಯ ಎಂದು ಕರಾವಳಿ ಉತ್ಸವ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಅಭಿಪ್ರಾಯ ಕೇಳಿಬಂದಿತ್ತು. ಆಹಾರೋತ್ಸವ ತುಳುನಾಡಿನ ಶೈಲಿಯ ಆಹಾರ, ವಿಶೇಷವಾಗಿ ಬ್ಯಾರಿ, ಕೊಂಕಣಿ, ಬಂಟ, ಮೊಗವೀರ ಇತ್ಯಾದಿ ಸಮುದಾಯಗಳ ಆಹಾರ ವೈಭವ, ಸಸ್ಯಾಹಾರ, ಮಲೆನಾಡು ಶೈಲಿಯ ಅಹಾರೋತ್ಸವ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.ಕರಾವಳಿ ಉತ್ಸವದ ಸ್ವರೂಪ ಬದಲಾವಣೆ ಬಗ್ಗೆ ಸಭೆಯಲ್ಲಿ ಹಲವು ರೀತಿ ಚರ್ಚೆಗಳು ನಡೆದಿವೆ. ಇನ್ನೂ ಯಾವುದೇ ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಕೂಡಾ ಚರ್ಚಿಸಿ ನಿರ್ಧರಿಸುತ್ತೇವೆ. -ಮುಲ್ಲೈ ಮುಗಿಲನ್‌ ಜಿಲ್ಲಾಧಿಕಾರಿ, ದ.ಕ.

ಪಿಲಿಕುಳಕ್ಕೆ ಜನರನ್ನು ಸೆಳೆಯುವ ಉದ್ದೇಶ
ಈ ಹಿಂದೆ ಎ.ಬಿ. ಇಬ್ರಾಹಿಂ ಅವರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಹಲವು ಬಾರಿ ಆಹಾರ ಮೇಳ, ಮಾವುಮೇಳ, ಮತ್ಸ್ಯ ಉತ್ಸವ ಇತ್ಯಾದಿಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅದನ್ನು ಗಮನದಲ್ಲಿರಿಸಿ ಹಾಗೂ ನಿಸರ್ಗಧಾಮಕ್ಕೆ ಹೆಚ್ಚು ಮಂದಿಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಮುಖ್ಯ ಕಾರ್ಯಕ್ರಮಗಳು ಪಿಲಿಕುಳದಲ್ಲಿ ನಡೆದರೂ ಕೆಲವೊಂದು ಪೂರಕ ಕಾರ್ಯಕ್ರಮಗಳು ಪುರಭವನ ಬಳಿಯ ರಾಜಾಜಿ ಪಾರ್ಕ್‌ ಆ್ಯಂಪಿ ಥಿಯೇಟರ್‌ ಹಾಗೂ ಕದ್ರಿ ಪಾರ್ಕ್‌ನಲ್ಲೂ ನಡೆಯಲಿವೆ.

ಬೀಚ್‌ ಉತ್ಸವ
ಈ ಬಾರಿಯೂ ಬೀಚ್‌ ಉತ್ಸವ ಇರಲಿದೆ. ಪಣಂಬೂರಿನಲ್ಲೋ ತಣ್ಣೀರುಬಾವಿ ಬೀಚ್‌ನಲ್ಲೋ ಎಂದು ಇನ್ನಷ್ಟೇ ತೀರ್ಮಾನವಾಗಬೇಕಿದೆ.

ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಿ ಅವರಿಂದ ಸಾಂಸ್ಕೃತಿಕ ಜಾನಪದ ಕಲಾ ಪ್ರದರ್ಶನ ಏರ್ಪಡಿಸುವ ಉದ್ದೇಶವೂ ಇದೆ. ಹಿಂದೆ ಕರಾವಳಿ ಉತ್ಸವದಲ್ಲಿ ಸ್ಟಾರ್‌ ಕಲಾವಿದರ ಪ್ರದರ್ಶನವೂ ಇರುತ್ತಿತ್ತು. ಈ ಬಾರಿ ಬರುವ ಅನುದಾನದ ಆಧಾರದಲ್ಲಿ ಇದು ನಿರ್ಧಾರವಾಗಲಿದೆ.

-ವೇಣುವಿನೋದ್‌ ಕೆ.ಎಸ್‌

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.