ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ


Team Udayavani, Sep 13, 2024, 3:22 PM IST

ಭೂಗತ ಜಲವಿದ್ಯುತ್‌ ಯೋಜನೆಗೆ ವಿರೋಧ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಸಾಗಿಸುವ ಯೋಜನೆ

■ ಉದಯವಾಣಿ ಸಮಾಚಾರ
ಶಿರಸಿ: ರಾಜ್ಯ ಸರ್ಕಾರ ಶರಾವತಿ ಭೂಗತ ಜಲವಿದ್ಯುತ್‌ ಯೋಜನೆ ಕೈಬಿಡಬೇಕು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಅವರು, ಶರಾವತಿ ನದಿ ನೀರನ್ನು ಬೆಂಗಳೂರಿಗೆ
ಸಾಗಿಸುವ ಯೋಜನೆ ಕೈಗೆತ್ತಿಕೊಳ್ಳಬಾರದು. ಶರಾವತಿ ನದಿಗೆ ಅಘನಾಶಿನಿ ನದಿ ತಿರುಗಿಸುವ ಯೋಜನೆ ರೂಪಿಸುವ ಹಿಂಬಾಗಿಲ ಪ್ರಯತ್ನ ನಡೆದಿದೆ ಎಂದೂ ಹೇಳಿದರು.

ಅಘನಾಶಿನಿ ಕಣಿವೆ ಜನತೆ ಎಚ್ಚರದಿಂದ ಇರಬೇಕು. ಹಾವೇರಿ ಜಿಲ್ಲೆಯಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವರು ಆಶ್ವಾಸನೆ ನೀಡುತ್ತಿರುವ ಸಂಗತಿ ಬಗ್ಗೆ ಬೇಡ್ತಿ ಕಣಿವೆ ಜನತೆ ಜಾಗೃತಿ ವಹಿಸಬೇಕಿದೆ. ಪ್ರಚಲಿತ ಭೂ ಕುಸಿತ, ಮೇಘಸ್ಫೋಟ, ಮಲೆನಾಡಿನ ಮಹಾಮಳೆಯಿಂದ ಪಶ್ಚಿಮ ಘಟ್ಟ ತತ್ತರಗೊಂಡಿದೆ. ಇನ್ನಷ್ಟು ಬೃಹತ್‌ ಅಭಿವೃದ್ಧಿ
ಯೋಜನೆಗಳನ್ನು ತಡೆದುಕೊಳ್ಳುವ ಧಾರಣಾ ಸಾಮರ್ಥ್ಯ ಇಲ್ಲವಾಗಿದೆ ಎಂದರು. ಕರಾವಳಿ ತಿರದ ಮೀನುಗಾರರು, ರೈತರು ಉಪ್ಪು ನೀರು ಹೆಚ್ಚಾಗಿ ಅತಂತ್ರರಾಗುವ ಪರಿಸ್ಥಿತಿ ಬರಲಿದೆ.

ಶರಾವತಿ-ಅಘನಾಶಿನಿ ಕೆಳಭಾಗಕ್ಕೆ ಸಿಹಿನೀರು ಬಾರದ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಧಾರಣಾ ಸಾಮರ್ಥ್ಯ ವರದಿ, ಶರಾವತಿ ಮತ್ತು ಅಘನಾಶಿನಿ ಕಣಿವೆ ಅಧ್ಯಯನ ವರದಿಗಳ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನ ಮಾಡಬೇಕು ಎಂದರು.

2021 ರ ಭೂಕುಸಿತ ಅಧ್ಯಯನ ವರದಿ ಶಿಫಾರಸು ಜಾರಿ ಮಾಡಬೇಕು. ಈಗಾಗಲೇ ಈ ಘಟ್ಟಗಳು ಸಡಿಲಗೊಂಡಿವೆ. ಬೃಹತ್‌ ಯೋಜನೆಗ ಳಿಂದ ಅರಣ್ಯ, ಪರಿಸರ, ವನ್ಯಜೀವಿ, ಜೀವವೈವಿಧ್ಯ ಕಾಯಿದೆಗಳ ಉಲ್ಲಂಘನೆ ಆಗಲಿವೆ. ಜಲ, ಸಿಆರ್‌ ಜಡ್‌ ಮಾಲಿನ್ಯ ಮುಂತಾದ ಕಾನೂನು ಭಂಗ ಆಗುವ, ಶರಾವತಿ ಅಭಯಾರಣ್ಯ, ಅಘನಾಶಿನಿ ಸಂರಕ್ಷಿತ ಪ್ರದೇಶ, ಬೇಡ್ತಿ-ಶಾಲ್ಮಲಾ ಸಂರಕ್ಷಿತ ಪ್ರದೇಶಗಳು ಛಿದ್ರವಾಗಲಿದೆ ಎಂದರು.

ಕತ್ತಲೆಕಾನು, ಸಿಂಗಳೀಕ, ಕರಿಕಾನಬೆಟ್ಟ, ಯಾಣ ಶಿಖರ, ರಾಮ್‌ಸಾರ್‌ಸೈಟ್‌, ಮಿರಿಸ್ಟಿಕಾ ಸ್ಟಾಂಪ್ಸ್‌, ವಿನಾಶದ ಅಂಚಿನ ವೃಕ್ಷ ಸಮೂಹ ಸೇರಿ ಅಪಾರ ಸಸ್ಯ ವನ್ಯಜೀವಿಗಳ ಆವಾಸಕ್ಕೆ ಧಕ್ಕೆ ಬರಲಿದೆ. ಹಲವು ಅರಣ್ಯ ಬುಡಕಟ್ಟು ಜನಾಂಗದವರು ನೆಲೆ ಕಳೆದುಕೊಳ್ಳಲಿದ್ದಾರೆ ಎಂದರು.

ಮಲೆನಾಡಿಗೆ ಮಾರಕವಾದ ಬೃಹತ್‌ ಯೋಜನೆಗಳು ಬೇಡ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ ಅರಣ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ ಜಾರಿ ಮಾಡಬೇಕು ಎಂದು ರೈತರು, ಮೀನುಗಾರರು, ವನವಾಸಿಗಳು ಒತ್ತಾಯಿಸಿದ್ದಾರೆ. ಈ ಮೇಲಿನ ಎಲ್ಲ ಅಂಶಗಳ ಕುರಿತು ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಧ್ವನಿ ಎತ್ತಬೇಕು. ಮಲೆನಾಡಿನ ಜನಪ್ರತಿನಿಧಿಗಳು ಒಂದಾಗಿ ಹೋರಾಟ ನಡೆಸಬೇಕು. ಇದಕ್ಕಾಗಿ ವಿಧಾನ ಸಭೆ ವಿಶೇಷ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸಿದರು.

ಅರಣ್ಯ ಸಚಿವರು ಪಶ್ಚಿಮ ಘಟ್ಟದಲ್ಲಿ ಇಂತಹ ಬೃಹತ್‌ ಯೋಜನೆಗಳ ಅರಣ್ಯ ಪರವಾನಿಗೆ ನೀಡಬಾರದು. ವನ್ಯಜೀವಿ ಪರವಾನಗಿ ನೀಡಬಾರದು. ಶರಾವತಿ ಭೂಗತ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು. ಕೇಂದ್ರ ಪರಿಸರ ಅರಣ್ಯ ಮಂತ್ರಾಲಯ ಶರಾವತಿ ಅಘನಾಶಿನಿ, ಬೇಡ್ತಿ ಕಣಿವೆ ಪರಿಸ್ಥಿತಿ ಪರಿಶೀಲನೆಗೆ ಉನ್ನತ ಅಧಿಕಾರಿಗಳ ತಂಡ ಕಳಿಸಬೇಕು ಎಂದರು. ಈ ವೇಳೆ ವಕ್ಷಲಕ್ಷ ಆಂದೋಲನದ ವಿಶ್ವನಾಥ, ಗಣಪತಿ ಬಿಸಲಕೊಪ್ಪ ಇದ್ದರು.

ಪಶ್ಚಿಮ ಘಟ್ಟದಲ್ಲಿ ಹಲವು ಪರಿಸರ ನಾಶಿ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದ ವೇಳೆ ಹೋರಾಟದ
ಮೂಲಕ ಸ್ಥಗಿತಗೊಳಿಸಲಾಗಿದೆ.
●ಅನಂತ ಹೆಗಡೆ ಅಶೀಸರ,
ಅಧ್ಯಕ್ಷರು, ವೃಕ್ಷಲಕ್ಷ ಆಂದೋಲನ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.