ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ


Team Udayavani, Sep 13, 2024, 4:01 PM IST

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಉದಯವಾಣಿ ಸಮಾಚಾರ
ಕೊಂಡ್ಲಹಳ್ಳಿ: ಮಳೆ ಬಂದರೆ ಸಾಕು ಈ ಶಾಲೆಯ ಕೊಠಡಿಗಳೆಲ್ಲಾ ಸೋರುತ್ತವೆ, ಮೇಲ್ಛಾವಣಿಯ ಹೆಂಚುಗಳು ಪುಡಿ
ಪುಡಿಯಾಗಿ ಕೆಳಗೆ ಬೀಳುತ್ತಿರುತ್ತವೆ. ಮಳೆಗಾಲ ಬಂದರೆ ಸಾಕು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಇನ್ನಿಲ್ಲದ ಆತಂಕ. ಇದು ಕೋನಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿ. 1995ರಲ್ಲಿ
ಆರಂಭಗೊಂಡಿರುವ ಈ ಶಾಲೆಯಲ್ಲಿ 1ರಿಂದ 7ನೇ ತರಗತಿಯ 52 ವಿದ್ಯಾರ್ಥಿಗಳಿದ್ದಾರೆ.

ಮೂರು ಕೊಠಡಿಗಳಲ್ಲಿ ಶಾಲಾರಂಭದ ವರ್ಷಗಳಲ್ಲಿ ನಿರ್ಮಾಣಗೊಂಡಿರುವ ಎರಡು ಹೆಂಚಿನ ಕೊಠಡಿಗಳ ಮೇಲ್ಛಾವಣಿಯ
ಹೆಂಚುಗಳು ಶಿಥಿಲಗೊಂಡು ಪುಡಿಯಾಗಿ ಕೆಳಗೆ ಬೀಳುತ್ತಿರುತ್ತವೆ. ಹೆಂಚಿನ ಮೇಲ್ಛಾವಣಿಯ  ಮೇಲೆ ಸಿಮೆಂಟ್‌ ಪ್ಲಾಸ್ಟರಿಂಗ್‌
ಮಾಡಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಮೇಲ್ಛಾವಣಿಯಿಂದ ಬಿರುಕು ಬಿಟ್ಟಿರುವ ಗೋಡೆಗಳ ಮೂಲಕ ನೀರು ಒಳಬಂದು ಶಾಲಾ ಕಟ್ಟಡ ಶಿಥಿಲಾವಸ್ಥೆ ತಲುಪಿದೆ.

2011-12ರಲ್ಲಿ ಎಸ್‌ಎಸ್‌ಎ ಅಡಿಯಲ್ಲಿ ನಿರ್ಮಿಸಿರುವ ಆರ್‌ಸಿಸಿ ಕೊಠಡಿಯ ಮೇಲ್ಛಾವಣಿಯ ಸಿಮೆಂಟಿನ ತುಂಡುಗಳು ಕೆಳಗೆ ಉದುರುತ್ತಿದ್ದು, ಕಬ್ಬಿಣದ ಸಲಾಕೆಗಳು ಹೊರ ಬಂದಿವೆ. ಈ ಕೊಠಡಿ ಕೂಡ ಶಿಥಿಲಗೊಂಡು ಆರ್‌ಸಿಸಿ ಉದುರುತ್ತಿದ್ದು, ಸಣ್ಣ ಮಳೆ ಬಂದರೂ ಸೋರುತ್ತಿದೆ. ಇದರಿಂದ ಮಳೆ ಬಂದರೆ ಈ ಶಾಲೆಯ ದಾಖಲಾತಿ ವಹಿಗಳು, ಇತರ ಅಗತ್ಯ ವಸ್ತುಗಳ
ಸಂಗ್ರಹಣೆಗೂ ತೊಂದರೆಯಾಗುತ್ತಿದೆ.

ಸ್ವಲ್ಪ ಮಳೆ ಬಂದರೂ ಮಳೆ ನೀರು ಮೇಲ್ಛಾವಣಿಗೆ ಸೇರಿ ಫ್ಯಾನ್‌ ಶಾರ್ಟ್‌ ಆಗಿ ಸುಟ್ಟು ಹೋಗುತ್ತಿದೆ. ಮಳೆಯಿಂದ ಇಡೀ ಕೊಠಡಿಗಳು ನೀರು ತುಂಬಿಕೊಂಡು ಮಕ್ಕಳು ಕುಳಿತುಕೊಳ್ಳಲು ಕೂಡ ಆಗದಷ್ಟು ತೊಂದರೆಯಾಗುತ್ತಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕ ಚಂದ್ರಾ ನಾಯ್ಕ. ಮಳೆ ಬಂದರೆ ಶಾಲಾ ಕೊಠಡಿಗಳು ಸೋರುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುವಂತಿವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕುಂಬಾರಹಟ್ಟಿ ಶಾಲೆ ದುರಸ್ತಿಗೆ ಕೂಡಲೇ ಮುಂದಾಗಬೇಕಿದೆ.

ಕಳೆದ 3-4 ವರ್ಷಗಳಿಂದಲೂ ಈ ಸಮಸ್ಯೆ ಇದೆ. ಕೊಠಡಿಗಳ ರಿಪೇರಿ ಮಾಡಿಸಿಕೊಡಲು ಬಿಇಒ ಅವರಿಗೆ ಹಾಗೂ ಕ್ಲಸ್ಟರ್‌ ಸಿಆರ್‌ಪಿಗಳಿಗೆ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಯಾವುದೇ ಅನುಕೂಲ ಆಗುತ್ತಿಲ್ಲ. ಕೊಠಡಿಗಳ ರಿಪೇರಿಗೆ ಅನುಕೂಲ ಮಾಡಿಕೊಡುವರೇನೋ ನಾವು ಚಾತಕಪಕ್ಷಿಯಂತೆ ಕಾಯುತ್ತಿದ್ದೇವೆ. ಯಾಕೆ ಈ ಉದಾಸೀನ ಎಂಬುದೇ ತಿಳಿಯುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಿಸಿಕೊಡಬೇಕು.
*ನಾಗರಾಜ್‌, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರು

ಮೊಳಕಾಲ್ಮೂರು ತಾಲೂಕಿನ 10 ಪ್ರಾಥಮಿಕ ಶಾಲೆಗಳ 20 ಕೊಠಡಿಗಳ ದುರಸ್ತಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಇಲಾಖೆಗೆ
ಕಳುಹಿಸಲಾಗಿದೆ. ಇದರಲ್ಲಿ ಕುಂಬಾರಹಟ್ಟಿಯ ಎರಡು ಶಾಲಾ ಕೊಠಡಿಗಳ ದುರಸ್ತಿಯೂ ಸೇರಿದೆ. ಇಲಾಖೆಯಿಂದ ಮಂಜೂರಾತಿ ದೊರೆತ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.
*ಇ. ನಿರ್ಮಲಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ

*ಕೊಂಡ್ಲಹಳ್ಳಿ ರಾಮಚಂದ್ರಪ್ಪ

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.