Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ


ಶ್ರೀರಾಮ್ ನಾಯಕ್, Sep 13, 2024, 5:57 PM IST

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

ಜೋಳ(Corn) ಎಂದಾಕ್ಷಣ ನೆನಪಿಗೆ ಬರುವುದೇ ಉತ್ತರ ಕರ್ನಾಟಕ (Uttara Karnataka) ಯಾಕೆಂದರೆ ಅಲ್ಲಿನ ಜನರು ಜೋಳವನ್ನು ಬೆಳೆಸಿ, ನಿತ್ಯದ ಆಹಾರದಲ್ಲಿ ಉಪಯೋಗಿಸುತ್ತಾರೆ. ಆದರೆ ಈಗ ಉತ್ತರ ಕರ್ನಾಟಕ ಮಾತ್ರವಲ್ಲ ಬೇರೆ ಕಡೆಯಲ್ಲೂ ಬೆಳೆಸುವುದರಿಂದ ಅಡುಗೆ ಮನೆಗೂ ಇದು ಲಗ್ಗೆ ಇಟ್ಟಿದೆ. ಹೌದು ಯಾಕೆಂದರೆ ಆರೋಗ್ಯದ ದೃಷ್ಟಿಯಲ್ಲಿ ಜೋಳ ಉತ್ತಮ ಸಿರಿಧಾನ್ಯವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಅಡುಗೆಯಲ್ಲೂ ತನ್ನ ಛಾಪೂ ಮೂಡಿಸಿದೆ.

ಜೋಳದಿಂದಲೂ ವಿಭಿನ್ನ ರೀತಿಯ ಖಾದ್ಯಗಳನ್ನು ತಯಾರಿಸಬಹುದು ಅಲ್ಲದೆ ಶುಭ ಸಮಾರಂಭಗಳಲ್ಲೂ ಇದನ್ನು ಬಳಸುತ್ತಾರೆ. ಹಾಗೆಯೇ ನಾವಿಂದು ಜೋಳದಿಂದ ತಯಾರಿಸಲಾಗುವ ಎರಡು ಖಾದ್ಯಗಳನ್ನು ನಿಮಗೆ ಪರಿಚಯಿಸುತ್ತಿದ್ದೇವೆ ನೀವೂ ಮನೆಯಲ್ಲಿ ಇದನ್ನು ಟ್ರೈ ಮಾಡಬಹುದು, ಬನ್ನಿ ಹಾಗಾದರೆ ಜೋಳದಿಂದ ತಯಾರಿಸಬಹುದಾದ ಸಲಾಡ್ ಮತ್ತು ಉಸ್ಲಿ ಹೇಗೆ ತಯಾರಿಸುವುದೆಂದು ತಿಳಿದುಕೊಂಡು ಬರೋಣ…

ಜೋಳದ ಸಲಾಡ್‌(ಕೋಸಂಬರಿ)(Corn Salad/Kosambari)
ಬೇಕಾಗುವ ಸಾಮಗ್ರಿಗಳು
ಜೋಳ-1ಕಪ್‌, ಟೊಮ್ಯಾಟೋ-1, ಕ್ಯಾಪ್ಸಿಕಂ(ಸಣ್ಣದು)-1, ಮುಳ್ಳುಸೌತೆ(ಸಣ್ಣಗೆ ಹೆಚ್ಚಿದ್ದು)-4ಚಮಚ, ಈರುಳ್ಳಿ(ಸಣ್ಣಗೆ ಹೆಚ್ಚಿದ್ದು)-2,  ಕ್ಯಾರೆಟ್‌(ತುರಿದ)-1, ಖಾರದ ಪುಡಿ(ಮೆಣಸಿನ ಪುಡಿ)-2ಚಮಚ, ಪೆಪ್ಪರ್‌ ಪುಡಿ-ಅರ್ಧ ಟೀಸ್ಪೂನ್‌, ಜೀರಿಗೆ ಪುಡಿ-ಚಾಟ್‌ ಮಸಾಲ-ಅರ್ಧ ಟೀಸ್ಪೂನ್‌, ಲಿಂಬೆರಸ-1ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಜೋಳವನ್ನು ಮೃದುವಾಗುವವರೆಗೆ ಚೆನ್ನಾಗಿ ಬೇಯಿಸಿಕೊಳ್ಳಿ. ಬಳಿಕ ನೀರನ್ನು ಸೋಸಿ ಅದನ್ನು ತಣ್ಣಗಾಗಲು ಬಿಡಿ. ನಂತರ ಬೇಯಿಸಿದ ಜೋಳವನ್ನು ಒಂದು ಬೌಲ್‌ ಗೆ ಹಾಕಿ ಅದಕ್ಕೆ ಸಣ್ಣಗೆ ಹೆಚ್ಚಿದ ಟೊಮ್ಯಾಟೋ, ಕ್ಯಾಪ್ಸಿಕಂ, ಮುಳ್ಳುಸೌತೆ, ಈರುಳ್ಳಿ ಮತ್ತು ತುರಿದಿಟ್ಟ ಕ್ಯಾರೆಟ್‌ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ತದನಂತರ ಮೆಣಸಿನ ಪುಡಿ, ಪೆಪ್ಪರ್‌, ಜೀರಿಗೆ ಪುಡಿ, ಚಾಟ್‌ ಮಸಾಲ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಲಿಂಬೆರಸವನ್ನು ಹಾಕಿ ಪುನಃ ಮಿಶ್ರಣ ಮಾಡಿ ಕೊನೆಗೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿದರೆ ಆರೋಗ್ಯಕರವಾದ ಜೋಳದ ಸಲಾಡ್‌ ಸವಿಯಲು ಸಿದ್ಧ.

ಜೋಳದ ಉಸ್ಲಿ(Sweet Corn usli)
ಬೇಕಾಗುವ ಸಾಮಗ್ರಿಗಳು
ಜೋಳ-2ಕಪ್‌(ಬೇಯಿಸಿದ್ದು), ಈರುಳ್ಳಿ-(ಸಣ್ಣಗೆ ಹೆಚ್ಚಿದ್ದು)-2, ಒಣಮೆಣಸು-3, ಹಸಿಮೆಣಸು-2, ಸಾಸಿವೆ-1ಚಮಚ, ತೆಂಗಿನೆಣ್ಣೆ -3ಚಮಚ, ಅರಿಶಿನ ಪುಡಿ-ಅರ್ಧ ಟೀಸ್ಪೂನ್‌, ತೆಂಗಿನ ತುರಿ-4ಚಮಚ, ಗರಂ ಮಸಾಲ-1ಚಮಚ, ಲಿಂಬೆರಸ-1ಚಮಚ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಕರಿಬೇವಿನ ಎಲೆ-ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಒಂದು ಬಾಣಲೆಗೆ 3 ಚಮಚದಷ್ಟು ತೆಂಗಿನೆಣ್ಣೆಯನ್ನು ಹಾಕಿ ಕಾದಮೇಲೆ ಸಾಸಿವೆ ಸೇರಿಸಿ ಅದು ಸಿಡಿದ ನಂತರ ಕರಿಬೇವಿನ ಎಲೆ, ಹಸಿಮೆಣಸು, ಒಣಮೆಣಸು ಮತ್ತು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಫ್ರೈ ಮಾಡಿ ನಂತರ ಬೇಯಿಸಿದ ಜೋಳವನ್ನು ಸೇರಿಸಿ ಅದಕ್ಕೆ ತೆಂಗಿನ ತುರಿ, ಗರಂ ಮಸಾಲ,ಅರಿಶಿನ ಪುಡಿ, ಲಿಂಬೆರಸ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರ ಹಾಗೂ ಆರೋಗ್ಯಕರವಾದ ಜೋಳದ ಉಸ್ಲಿ ಸವಿಯಲು ಸಿದ್ಧ.

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.