WWE ಕುಸ್ತಿ ಪಟು ಆಪ್ ನಿಂದ ಕಣಕ್ಕೆ; ರಂಗೇರಿದ ವಿನೇಶ್ ಫೋಗಾಟ್ ಸ್ಫರ್ಧಿಸುತ್ತಿರುವ ಜುಲಾನಾ
ರಂಗೇರಿದ ಕುಸ್ತಿ ಅಖಾಡ.. ಬಿಜೆಪಿಯಿಂದಲೂ ಭಾರೀ ರಣತಂತ್ರ!
Team Udayavani, Sep 13, 2024, 6:14 PM IST
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರ ನೈಜ ರಾಜಕೀಯ ದಂಗಲ್ ಆಗುವ ಮೂಲಕ ರಾಷ್ಟ್ರ ಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಾಟ್ ಅವರ ಎದುರು ಆಮ್ ಆದ್ಮಿ ಪಕ್ಷದಿಂದಲೂ ಕುಸ್ತಿ ಪಟು ಕವಿತಾ ದಲಾಲ್ ಅವರನ್ನು ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ನಿಂದ ಮೈತ್ರಿ ಮುರಿದುಕೊಂಡಿರುವ ಆಪ್ ಪ್ರತ್ಯೇಕ ಸ್ಪರ್ಧೆ ಮಾಡುತ್ತಿದ್ದು, 37 ರ ಹರೆಯದ WWE ವೃತ್ತಿಪರ ಕುಸ್ತಿಪಟು ಕವಿತಾ ದಲಾಲ್ ಅವರನ್ನು ಕಣಕ್ಕಿಳಿಸಿದೆ. ಕವಿತಾ 2017 ರಿಂದ 2021 ರ ನಡುವೆ NXTಯಲ್ಲಿ ಕವಿತಾ ದೇವಿ ಎಂಬ ರಿಂಗ್ ಹೆಸರಿನಲ್ಲಿ WWE ಆಡಿದ್ದರು. WWE ನಲ್ಲಿ ಕುಸ್ತಿಯಾಡಿದ ಮೊದಲ ಭಾರತೀಯ ಮಹಿಳಾ ವೃತ್ತಿಪರ ಕುಸ್ತಿಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
ಬಿಜೆಪಿಯಿಂದಲೂ ಪ್ರಬಲ ಅಭ್ಯರ್ಥಿ
ಬಿಜೆಪಿ ಕ್ಯಾಪ್ಟನ್ ಯೋಗೀಶ್ ಬೈರಾಗಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ, 35 ರ ಹರೆಯದ ಮಾಜಿ ಸೇನಾ ಅಧಿಕಾರಿ ಮತ್ತು ಮಾಜಿ ವಾಣಿಜ್ಯ ಪೈಲಟ್ ಬೈರಾಗಿ ಸಫಿಡಾನ್ ನಿವಾಸಿಯಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಏಳು ವರ್ಷಗಳ ಹಿಂದೆ ರಾಜಕೀಯಕ್ಕೆ ಪ್ರವೇಶಿಸಿ ಪಕ್ಷದಲ್ಲಿ ದುಡಿದ ಅನುಭವ ಹೊಂದಿದ್ದಾರೆ.
ಬೈರಾಗಿ ಅವರು ಚೆನ್ನೈ ಪ್ರವಾಹದ ಸಮಯದಲ್ಲಿ ಪರಿಹಾರ ಮತ್ತು ರಕ್ಷಣ ವಿಮಾನಗಳನ್ನು ಹಾರಿಸಿ ಮತ್ತು ಕೋವಿಡ್ ಸಮಯದಲ್ಲಿ ವಂದೇ ಭಾರತ್ ಮಿಷನ್ನಲ್ಲಿ ಭಾಗಿಯಾಗಿ ತನ್ನದೇ ಆದ ಹಿರಿಮೆಯನ್ನು ಹೊಂದಿರುವ ಯುವ ಮುಖವಾಗಿದ್ದಾರೆ.
ಜಾತಿ ಲೆಕ್ಕಾಚಾರ
ಜಾಟ್ ಮತದಾರರ ಪ್ರಾಬಲ್ಯ ಹೊಂದಿರುವ ಕ್ಷೇತ್ರವಾಗಿದ್ದು ಅಂದಾಜು 81,000 ಮತದಾರರು ಭವಿಷ್ಯ ನಿರ್ಧರಿಸಲಿದ್ದಾರೆ. ಹಿಂದುಳಿದ ವರ್ಗದ (33,608) ಮತ್ತು ಪರಿಶಿಷ್ಟ ಜಾತಿ (29,661) ಮತದಾರರೂ ಇದ್ದಾರೆ. ಕಾರ್ಯತಂತ್ರ ರೂಪಿಸಿರುವ ಬಿಜೆಪಿ ಜಾಟ್ ಅಲ್ಲದ ಹಿಂದುಳಿದ ವರ್ಗದ ಬೈರಾಗಿ ಅವರನ್ನು ಕಣಕ್ಕಿಳಿಸಿದೆ, ವಿವಿಧ ಸಮುದಾಯಗಳಲ್ಲಿ ತನ್ನ ಮತಗಳನ್ನು ಸೆಳೆಯುವ ಇರಾದೆ ಹೊಂದಿದೆ.
ಬಿಜೆಪಿಯ ಪ್ರಬಲ ಮುಖಂಡ ಸುರೇಂದರ್ ಸಿಂಗ್ ಲಾಥರ್ ಮತ್ತು ಬೆಂಬಲಿಗರು ಪಕ್ಷ ತೊರೆದು ಭಾರತೀಯ ರಾಷ್ಟ್ರೀಯ ಲೋಕದಳ (INLD)-ಬಹುಜನ ಸಮಾಜ ಪಕ್ಷ (BSP) ಮೈತ್ರಿ ಕೂಟ ಸೇರಿ ಟಿಕೆಟ್ ಗಿಟ್ಟಿಸಿಕೊಂಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ತೊಡೆ ತಟ್ಟಿದ್ದಾರೆ.
ಹಾಲಿ ಶಾಸಕ ಪ್ರಬಲ ಸ್ಪರ್ಧಿ
ಜಾಟ್ ಪ್ರಾಬಲ್ಯದ ಕ್ಷೇತ್ರದಲ್ಲಿ ಜನನಾಯಕ ಜನತಾ ಪಕ್ಷದ ಹಾಲಿ ಶಾಸಕ ಅಮರ್ಜೀತ್ ಧಂಡಾ ಮತ್ತೆ ಕಣಕ್ಕಿಳಿದಿದ್ದು ಅವರೂ ಪ್ರಬಲ ಸ್ಪರ್ಧಿ ಎನ್ನುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ತನ್ನದೇ ಆದ ಪಕ್ಷದ ಕಾರ್ಯಕರ್ತರ ಬಲ ಮತ್ತು ವರ್ಚಸ್ಸನ್ನು ಅವರು ಹೊಂದಿದ್ದು, ಬಹುಕೋನದ ಸ್ಪರ್ಧೆಯಲ್ಲಿ ಯಾರು ಗೆಲ್ಲುತ್ತಾರೋ ಎನ್ನುವುದನ್ನು ಮತದಾರರು ನಿರ್ಧರಿಸಬೇಕಿದೆ.
ಒಟ್ಟಾರೆ ಹರಿಯಾಣದಲ್ಲೇ ವಿವಿಧ ಪಕ್ಷಗಳ ಕಾರ್ಯಕರ್ತರಲ್ಲಿ ಅತ್ಯಧಿಕ ಉತ್ಸಾಹ ಜುಲಾನದಲ್ಲಿ ಕಂಡು ಬರುತ್ತಿದೆ. ಎಲ್ಲ ಪಕ್ಷಗಳು ಭರ್ಜರಿ ಪ್ರಚಾರವನ್ನೂ ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.