Kodikanyan: ಅಕ್ರಮ ಮರಳುಗಾರಿಕೆ; ಟೆಂಪೋ ವಶ
Team Udayavani, Sep 13, 2024, 8:50 PM IST
ಕೋಟ: ಸಾಲಿಗ್ರಾಮ ಸಮೀಪ ಕೋಡಿ-ಕನ್ಯಾಣದ ರಾಮಮಂದಿರದ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟೆಂಪೋವನ್ನು ಹಾಗೂ ಚಾಲಕ ಗಣೇಶ ಹಾಗೂ ಜೆ.ಸಿ.ಬಿ. ಆಪರೇಟರ್ ಚರಣ್ರಾಜ್ ಎನ್ನುವವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಸೆ. 12ರಂದು ನಡೆದಿದೆ.
ಕೋಟ ಪೊಲೀಸ್ ಠಾಣೆಯ ತನಿಖಾ ವಿಭಾಗದ ಉಪನಿರೀಕ್ಷಕಿ ಸುಧಾ ಪ್ರಭು ಅವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನವನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಸಾಲಿಗ್ರಾಮದ ಪ್ರಕಾಶ ಎನ್ನುವವರ ಸೂಚನೆಯಂತೆ ಅಂಥೋನಿಯವರ ಮನೆಯ ಅಂಗಳದ ನೆಲದಲ್ಲಿ ಹುದುಗಿಸಿ ಸಂಗ್ರಹಿಸಿಟ್ಟ ಮರಳು ರಾಶಿಯಲ್ಲಿನ ಮರಳನ್ನು ಜೆ.ಸಿ.ಬಿ ಮುಖಾಂತರ ತೆಗೆದು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದಾಗಿ ಟೆಂಪೋ ಚಾಲಕ ಹಾಗೂ ಜೆ.ಸಿ.ಬಿ ಆಪರೇಟರ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.