Valmiki Corporation Scam ಯತ್ನಾಳ್, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ
ರಾಜ್ಯಪಾಲರ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರೋಧಿ ಬಣದ 21 ಮಂದಿ
Team Udayavani, Sep 13, 2024, 11:18 PM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದ ಹಣ ಬಳ್ಳಾರಿ ಮತ್ತು ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ದುರ್ಬಳಕೆಯಾಗಿದ್ದು, ಚುನಾವಣ ಅಕ್ರಮ ಪ್ರಕರಣ ದಾಖಲಿಸಿ ಫಲಿತಾಂಶ ತಡೆಹಿಡಿಯಬೇಕೆಂದು ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರೋಧಿ ಬಣದ ಸದಸ್ಯರು ರಾಜಭವನಕ್ಕೆ ಭೇಟಿ ನೀಡಿ ದೂರು ನೀಡಿದ್ದು, ಗುರುವಾರ ನಡೆದ ಆರ್ಎಸ್ಎಸ್ ಸಭೆಯ ಬೆನ್ನಲ್ಲೇ ಈ ಬಣ ಚುರುಕಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಬಿ.ಪಿ. ಹರೀಶ್, ಎಂ. ಚಂದ್ರಪ್ಪ, ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸೋಮಲಿಂಗಪ್ಪ, ಯಡಿಯೂರಪ್ಪನವರ ಮಾಜಿ ಪಿಎ ಎನ್.ಆರ್. ಸಂತೋಷ್ ಸೇರಿ 21 ಜನರು ಈ ನಿಯೋಗದಲ್ಲಿದ್ದರು. ವಾಲ್ಮೀಕಿ ನಿಗಮದ ಅವ್ಯವಹಾರ ಸಂಬಂಧ ರಾಜ್ಯಪಾಲರಿಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಹಿರೇಹಾಳ್ ಅವರು ಈಗಾಗಲೇ ಸಲ್ಲಿಸಿರುವ ದೂರಿಗೆ ಪೂರಕವಾದ ದಾಖಲೆಗಳನ್ನು ಈ ನಿಯೋಗ ರಾಜ್ಯಪಾಲರಿಗೆ ನೀಡಿದೆ.
ಇದಾದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅರವಿಂದ ಲಿಂಬಾವಳಿ, ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿರುವುದು ಮತ್ತು ಗ್ಯಾರಂಟಿ ಯೋಜನೆಗೆಳಿಗೆ ಎಸ್ಸಿಇಪಿ, ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ.
ಅರುಣ್ ಹಿರೇಹಾಳ್ ಚುನಾವಣೆಗಿಂತಲೂ ಮೊದಲೇ ದೂರು ದಾಖಲಿಸಿದ್ದರು. ಅದಕ್ಕೆ ಚುನಾವಣ ಆಯೋಗ ಸಮರ್ಪಕ ಉತ್ತರ ಕೊಟ್ಟಿಲ್ಲ. ನಾವು ಪೂರಕ ದಾಖಲೆಗಳೊಂದಿಗೆ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಮತ್ತು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಶಾಸಕತ್ವ ರದ್ದುಪಡಿಸಬೇಕು. ಜತೆಗೆ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಫಲಿತಾಂಶ ತಡೆ ಹಿಡಿಯಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.