BJP ಭಿನ್ನಮತ ಸ್ಫೋಟ ಬೆನ್ನಲ್ಲೇ ದಿಲ್ಲಿಗೆ ಹಾರಿದ ಬಿ.ವೈ ವಿಜಯೇಂದ್ರ
ಅಮಿತ್ ಶಾ ಭೇಟಿ ಸಾಧ್ಯತೆ ; ಬಿಎಸ್ವೈ ಭೇಟಿಯಾದ ಶೆಟ್ಟರ್
Team Udayavani, Sep 14, 2024, 6:45 AM IST
ಬೆಂಗಳೂರು: ಆರ್ಎಸ್ಎಸ್ ಸಮನ್ವಯ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಲ್ಲಿಗೆ ಪ್ರಯಾಣ ಬೆಳೆಸಿದ್ದು, ಈ ಬೆಳವಣಿಗೆ ಯಡಿಯೂರಪ್ಪ ಬಣದಲ್ಲಿ ಆಕ್ರೋಶ ಮಡುಗಟ್ಟುವುದಕ್ಕೆ ಕಾರಣವಾಗಿದೆ.
ವಿಜಯೇಂದ್ರ ಅವರ ಹಠಾತ್ ದಿಲ್ಲಿ ಭೇಟಿಯ ಉದ್ದೇಶ ಏನೆಂಬುದು ಇನ್ನೂ ದೃಢಪಟ್ಟಿಲ್ಲ. ದಿಲ್ಲಿಯಿಂದ ವಾಪಸಾಗುವುದಕ್ಕೆ ಮುನ್ನ ಅವರು ಅಮಿತ್ ಶಾ ಭೇಟಿಗೆ ಪ್ರಯತ್ನ ನಡೆಸುವರು ಎಂದು ಹೇಳಲಾಗುತ್ತಿದೆ. ವಿಜಯೇಂದ್ರ ವಿರೋಧಿ ಬಣದ ಪ್ರಸ್ತಾವ ಆಧರಿಸಿ ಬಿಜೆಪಿ ಹೈಕಮಾಂಡ್ ವಾಲ್ಮೀಕಿ ಪಾದಯಾತ್ರೆಗೂ ಅನುಮತಿ ನೀಡಿದೆ.
ಜತೆಗೆ ಆರ್ಎಸ್ಎಸ್ ನಾಯಕರ ಸಮ್ಮುಖದಲ್ಲೇ ಅತೃಪ್ತರು ದೊಡ್ಡ ಧ್ವನಿ ಎತ್ತಿರುವುದು ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರಿಗೆ ಆದ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪಕ್ಷವನ್ನು ಕಟ್ಟಿ ನಿಲ್ಲಿಸಿದ ಮಾಸ್ ಲೀಡರ್ ವಿರುದ್ಧ ಮಾತನಾಡುವ ಜತೆಗೆ ಯಡಿಯೂರಪ್ಪನವರನ್ನು ಪಕ್ಷದ ವೇದಿಕೆಗೆ ಕರೆದರೆ ಅವಮಾನವಾಗುತ್ತದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಸಭೆಯಲ್ಲಿ ಹೇಳಿರುವುದು ಅವರ ಆಪ್ತರಲ್ಲಿ ತೀವ್ರ ಬೇಸರ ಸೃಷ್ಟಿಸಿದೆ.
ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಸಭೆ ನಡೆಸಿ ಇದಕ್ಕೆ ಸೂಕ್ತ ತಿರುಗೇಟು ನೀಡಬೇಕೆಂಬ ಪ್ರಸ್ತಾಪ ವ್ಯಕ್ತವಾಗಿದೆಯಾದರೂ ಸದ್ಯಕ್ಕೆ ಇಂಥ ಯಾವುದೇ ಪ್ರಯತ್ನ ಬೇಡ ಎಂದು ಸೂಚನೆ ನೀಡಲಾಗಿದೆ.
ಸುಮಾರು ನಾಲ್ಕೂವರೆ ಗಂಟೆಗಳ ಕಾಲ ನಡೆದ ಈ ಸಭೆಯ ಬಳಿಕ ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಒಂದೂ ಮಾತನಾಡದ ಶೆಟ್ಟರ್, ಬಳಿಕ ಯಡಿಯೂರಪ್ಪ ಭೇಟಿ ಮಾಡಿರುವುದು ಕೂಡ ಚರ್ಚೆಗೆ ಕಾರಣವಾಗಿದೆ.
ಈ ಮಧ್ಯೆ ಅರವಿಂದ ಲಿಂಬಾವಳಿ ನೇತೃತ್ವದ ನಿಯೋಗದಲ್ಲಿ ಯಡಿಯೂರಪ್ಪ ಬಣದ ಸದಸ್ಯರಾಗಲಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಂಘಟನಾತ್ಮಕ ಜವಾಬ್ದಾರಿ ಇರುವವರಾಗಲಿ ಇರಲಿಲ್ಲ. ಸಂಘದ ಸಭೆಯ ಬಳಿಕವೂ ಸಮನ್ವಯ ಕಾಣಿಸಿಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.