Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ

ಪುರಾತನ ದೇಗುಲದ ವಾಸ್ತುವಿಗೆ ಧಕ್ಕೆಯಾಗುವುದನ್ನು ತಪ್ಪಿಸಲು ಈ ಕ್ರಮ

Team Udayavani, Sep 14, 2024, 7:15 AM IST

Perduru-Highway

ಹೆಬ್ರಿ: ಪೆರ್ಡೂರಿನ ಸಾವಿರ ವರ್ಷಗಳ ಇತಿಹಾಸದ ಅನಂತ ಪದ್ಮನಾಭ ದೇವಾಲಯದ ನಾಗವನ ಹಾಗೂ ವಾಸ್ತು ಪರಿಧಿಗೆ ಧಕ್ಕೆ ಆಗ ದಂತೆ ರಾಷ್ಟ್ರೀಯ ಹೆದ್ದಾರಿ-169ಎ ಕಾಮಗಾರಿ ನಡೆಸಲು ಸಾಧ್ಯವೇ ಎಂದು ಪರಿಶೀಲಿಸಲು ಹೆದ್ದಾರಿ ಇಲಾಖೆಗೆ ಹೈಕೋರ್ಟ್‌ ಸಲಹೆ ನೀಡಿದೆ.

ಮಲ್ಪೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಪೆರ್ಡೂರು ಭಾಗದಲ್ಲಿ ದೇವಸ್ಥಾನಕ್ಕೆ ತಾಗಿಕೊಂಡು ಹಾದು ಹೋಗುವ ನೀಲನಕ್ಷೆ ತಯಾರಾಗಿದೆ. ಇದನ್ನು
ಸ್ಥಳೀಯರಾದ ರಂಜಿತ್‌ ಪ್ರಭು ಕೋರ್ಟ್‌ನಲ್ಲಿ ಪ್ರಶ್ನಿಸಿ, ದೇಗುಲಕ್ಕೆ ಧಕ್ಕೆ ಯಾಗುವುದನ್ನು ತಡೆ ಯುವಂತೆ ಮನವಿ ಮಾಡಿದ್ದರು. ಪ್ರಸ್ತುತ ದೇವಸ್ಥಾನದ ಆಡಳಿತ ಮಂಡಳಿಯೂ ನ್ಯಾಯಾ ಲಯದ ಮೆಟ್ಟಿಲೇರಿದೆ. ನಕ್ಷೆ ಪ್ರಕಾರ ಹೆದ್ದಾರಿಯು ದೇವಾಲಯದ ರಥಬೀದಿ, ನಾಗವನ ಇರುವ ಜಾಗದಲ್ಲೇ ಹಾದು ಹೋಗಲಿದೆ.
ಇದರಿಂದ ದೇವಾಲಯವು ಮೂಲ ಸ್ವರೂಪವನ್ನು ಕಳೆದುಕೊಳ್ಳಲಿದೆ ಹಾಗೂ ವಾಸ್ತುವಿಗೆ ಧಕ್ಕೆ ಅಗಲಿದೆ. ಆದ್ದರಿಂದ ಪರ್ಯಾಯ ಸಾಧ್ಯತೆ ಬಗ್ಗೆ ಪರಿಶೀಲಿಸಲು ಸಲಹೆ ನೀಡುವಂತೆ ನ್ಯಾಯವಾದಿ ಕೇತನ್‌ ಕುಮಾರ್‌ ಬಂಗೇರ ಅವರು ದೇಗುಲದ ಪರವಾಗಿ ಮನವಿ ಮಾಡಿದ್ದರು.

ಬದಲಿ ಮಾರ್ಗಕ್ಕೆ ಸೂಚನೆ
ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಪುರಾತನ ಇತಿಹಾಸ ಹೊಂದಿರುವ ದೇವಸ್ಥಾನ ಗಳನ್ನು ರಕ್ಷಿಸಬೇಕಿದೆ. ಈ ಭಾಗದಲ್ಲಿ ಪರ್ಯಾಯ ಮಾರ್ಗದ ಸಾಧ್ಯತೆ ಬಗ್ಗೆ ಪರಿಶೀಲಿಸಬೇಕು. ಬೆಂಗಳೂರಿನ ಕೋರ್ಟ್‌ ಪಕ್ಕದ ಕಟ್ಟಡ ನೆಲಸಮಕ್ಕೆ ವಿರೋಧ ಇದೆ. ದೇವಸ್ಥಾನಕ್ಕೆ ಧಕ್ಕೆ ಅಗುವುದನ್ನು ತಡೆಯಲು ಸಾಧ್ಯ ವಿಲ್ಲವೇ ಎಂದು ಪ್ರಶ್ನಿಸಿದೆ. ರಸ್ತೆ ಅಗಲ ಗೊಳಿಸುವುದು ಅಥವಾ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡುವಾಗ ದೇವಾಲಯ ಸಹಿತ ಧಾರ್ಮಿಕ ಕಟ್ಟಡಗಳಿಗೆ ಧಕ್ಕೆ ಆಗುವುದಾದರೆ ಅಂತಹ ಸಂದರ್ಭಗಳಲ್ಲಿ ಸಂಬಂಧಿಸಿದ ಪ್ರಾಧಿಕಾರ ಪರ್ಯಾಯ ಮಾರ್ಗ ಗಳನ್ನು ಬಳಸಬಹುದು ಎಂದರು.

ಬದಲಿ ಮಾರ್ಗ
ಪೆರ್ಡೂರು ಮೇಲ್ಪೇಟೆಯಿಂದ ದೇವಸ್ಥಾನಕ್ಕೆ ಸಂಬಂಧಪಟ್ಟ ಖಾಲಿ ಜಾಗದ ಮೂಲಕ ಹಾದು ಬಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪರ್ಯಾಯ ಮಾರ್ಗವನ್ನು ಬಳಸಬಹು ದು ಎಂದು ಸ್ಥಳೀಯರು ಹೆದ್ದಾರಿ ಇಲಾಖೆಗೆ ತಿಳಿಸಿದ್ದಾರೆ. ಇಲ್ಲೂ ದೇವಸ್ಥಾನದ ಶೇ. 80ರಷ್ಟು ಜಾಗ ರಸ್ತೆಗೆ ಹೋಗುತ್ತದೆ. ಆದರೆ ದೇಗು ಲದ ವಾಸ್ತುವಿಗೆ ಹಾನಿಯಾಗದು. ಇಲಾಖೆಯ ನಕ್ಷೆ ಪ್ರಕಾರ ಕಾಮಗಾರಿ ನಡೆದರೆ ಹಲವು ಅಂಗಡಿ, ಮನೆಗಳು, ರಾಮ ಮಂದಿರ, ನಾಗಬನಕ್ಕೂ ಧಕ್ಕೆಯಾಗುವುದಲ್ಲದೆ, ದೇವಸ್ಥಾನದ ವಾಸ್ತು ಭಿನ್ನವಾಗಲಿದೆ.

“ದೇಗುಲ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು.” –ಕೋಟ ಶ್ರೀನಿವಾಸ ಪೂಜಾರಿ , ಸಂಸದರು, ಉಡುಪಿ -ಚಿಕ್ಕಮಗಳೂರು ಕ್ಷೇತ್ರ

ದೇವಸ್ಥಾನದ ವಾಸ್ತು ಉಳಿಸಲು ಕೈಜೋಡಿಸಿ
“ಪೆರ್ಡೂರು ದೇವಸ್ಥಾನದ ವಾಸ್ತು ಮತ್ತು ಮೂಲ ಸ್ವರೂಪವನ್ನು ಉಳಿಸಲು ಭಕ್ತರು ಹಾಗೂ ಗ್ರಾಮಸ್ಥರೆಲ್ಲರೂ ಕೈಜೋಡಿಸ ಬೇಕಿದೆ. ಹೈಕೋರ್ಟ್‌ನ ನ್ಯಾಯಾಧೀಶರೂ ದೇವಸ್ಥಾನದ ಪರ ಅಭಿಪ್ರಾಯ ವ್ಯಕ್ತಪಡಿಸಿರುವುದು ಶ್ಲಾಘನೀಯ.” – ರಂಜಿತ್‌ ಪ್ರಭು, ಸ್ಥಳೀಯರು

 

– ಹೆಬ್ರಿ ಉದಯ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.