Akhilesh Yadav ವಿವಾದ: ಮಠಾಧೀಶರು, ಮಾಫಿಯಾ ಒಂದೇ
Team Udayavani, Sep 14, 2024, 6:23 AM IST
ಲಕ್ನೋ: ಹಿಂದೂ ಮಠಾಧೀಶರು ಮತ್ತು ಮಾಫಿಯಾಗಳು ಒಂದೇ ರೀತಿ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ಬಿಜೆಪಿ ಸರಕಾರದ ಅವಧಿಯಲ್ಲಿ ಯಾರನ್ನು ನಕಲಿ ಎನ್ಕೌಂಟರ್ನಲ್ಲಿ ಮುಗಿಸಲಾಗುತ್ತದೋ ಗೊತ್ತಾಗುತ್ತಿಲ್ಲ. ಉತ್ತರ ಪ್ರದೇಶವನ್ನು ದೇಶದ ನಕಲಿ ಎನ್ಕೌಂಟರ್ಗಳ ರಾಜಧಾನಿಯನ್ನಾಗಿ ಬಿಜೆಪಿ ಮಾಡಿದೆ. ಹಿಂದೂ ಮಠಾಧಿಪತಿಗಳು ಮತ್ತು ಮಾಫಿಯಾಗಳ ನಡುವೆ ವ್ಯತ್ಯಾಸ ಇಲ್ಲ ಎಂದು ಅಖಿಲೇಶ್ ಟೀಕಿಸಿದ್ದರು.
“ಡಿಎಂಕೆ ನಾಯಕರು ಹಿಂದೂ ಧರ್ಮವನ್ನು ಅವಮಾನಿಸಿದ ಬಳಿಕ, ಕಾಂಗ್ರೆಸ್ ನಾಯಕರು ಹಿಂದೂಗಳು ಹಿಂಸಾಚಾರಿಗಳು ಎಂದು ಹಣೆಪಟ್ಟಿ ಕಟ್ಟಿದರು. ಇದೀಗ ಎಸ್ಪಿ ಸರದಿ’ ಎಂದು ಬಿಜೆಪಿ ನಾಯಕ ಶೆಹಜಾದ್ ಪೂನಾವಾಲ ಟೀಕಿಸಿದ್ದಾರೆ. ಆಗ್ರಾದ ಮನ್ಕಾಮೇಶ್ವರ್ ದೇಗುಲದ ಮಹಾಂತ ಯೋಗೇಶ್ ಪುರಿ ಹೇಳಿಕೆ ಖಂಡಿಸಿದ್ದಾರೆ. ಅವರ ತಂದೆಯವರು 1992ರಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಿ ಕೊಲ್ಲಿಸುವಂತೆ ಆದೇಶ ನೀಡಿದ್ದು ನೆನಪಿದೆಯೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್ ಸರ್ಕಾರ್ ರಾಜೀನಾಮೆ
Train ಹಳಿಯ ಮೇಲೆ ರಾಡ್: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.