Kasaragodu: ವೃದ್ಧೆಯ ಕೊಂದು ಹೂತು ಹಾಕಿದ ಆರೋಪಿಗಳು ಮಣಿಪಾಲದಲ್ಲಿ ಸೆರೆ
Team Udayavani, Sep 14, 2024, 12:58 AM IST
ಕಾಸರಗೋಡು: ಕೊಚ್ಚಿ ನಿವಾಸಿ ಸುಭದ್ರಾ (73) ಅವರನ್ನು ಕೊಂದು ಮೃತದೇಹವನ್ನು ಹಿತ್ತಿಲಿನಲ್ಲಿ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ದಂಪತಿಯನ್ನು ಕರ್ನಾಟಕದ ಮಣಿಪಾಲದಿಂದ ಪೊಲೀಸರು ಬಂಧಿಸಿದ್ದಾರೆ.
ಕಾಟೂರು ಪಳ್ಳಿಪರಂಬಿಲ್ನ ಮ್ಯಾಥ್ಯೂಸ್ ಯಾನೆ ನಿತಿನ್(35) ಮತ್ತು ಪತ್ನಿ ಕರ್ನಾಟಕದ ಉಡುಪಿ ನಿವಾಸಿ ಶರ್ಮಿಳಾ(36)ನನ್ನು ಮಣ್ಣಾಂ ಚೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉಡುಪಿಯಲ್ಲಿದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಅವರ ಮೊಬೈಲ್ ಲೊಕೇಶನ್ ಕೇಂದ್ರೀಕರಿಸಿ ಪೊಲೀಸರು ಅವರ ಬೆನ್ನು ಬಿದ್ದಿದ್ದರು. ಸೆ.12ರಂದು ಬೆಳಗ್ಗೆ ಮಂಗಳೂರಿನಲ್ಲಿ ಶರ್ಮಿಳಾ ಫೋನ್ ಆನ್ ಆಗಿತ್ತು. ಕೂಡಲೇ ಪೊಲೀಸರು ಉಡುಪಿ ಹಾಗೂ ಮಂಗಳೂರು ಮೊದಲಾದೆಡೆ ಕೆಲವರನ್ನು ಸಂಪರ್ಕಿಸಿ ಆರೋಪಿಗಳ ಮೇಲೆ ನಿಗಾ ಇರಿಸುವಂತೆ ಸೂಚನೆ ನೀಡಿದ್ದರು.
ಮಧ್ಯಾಹ್ನ ಶರ್ಮಿಳಾ ಫೋನ್ ಮಣಿಪಾಲದಲ್ಲಿ ಕಾರ್ಯಾಚರಿಸಿದೆ. ಆಕೆ ಈ ಹಿಂದೆ ವಾಸಿಸಿದ್ದ ಪೆರಂಪಳ್ಳಿಯ ಮಹಿಳೆಯೊಬ್ಬರ ಮನೆಗೆ ಬಂದಿದ್ದನ್ನು ಪೊಲೀಸರು ತಿಳಿದುಕೊಂಡು ಅಲ್ಲಿಂದ ಅವರನ್ನು ಬಂಧಿಸಲಾಯಿತು. ಆರೋಪಿಗಳ ಶೋಧ ಕಾರ್ಯಕ್ಕೆ ಮಣಿಪಾಲ ಪೊಲೀಸರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.