Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ

Team Udayavani, Sep 14, 2024, 7:27 AM IST

Police

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು ಇದೇ ಮೊದಲು!

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾ ನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.

4 ಮಂದಿ ಎಸ್‌ಐಗಳು
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿ ರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಕಾನೂನು ಸುಳಿಯಲ್ಲಿ ಸಿಲುಕಿರುವುದು ಮುಂತಾದವು ಎಸ್‌ಐಗಳ ಅಮಾನತಿಗೆ ಕಾರಣಗಳು.

ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್‌ಪಿ ಅವರ ಗಮನಕ್ಕೆ ತರಬಹುದು. ಎಸ್‌ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್‌ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್‌ಸ್ಟೆಬಲ್‌ಗ‌ಳ ವಿರುದ್ಧ ಆರೋಪ ಬಂದಾಗ ಎಸ್‌ಐಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್‌ಪಿ ವರದಿ ನೀಡಬೇಕು.

ಅರ್ಧ ವೇತನ
ಅಮಾನತು ಆದೇಶ ಕನಿಷ್ಠ 1 ತಿಂಗಳಿನಿಂದ ಗರಿಷ್ಠ ಎಷ್ಟು ಸಮಯದ ವರೆಗೂ ನೀಡ ಬಹುದು. ಅಮಾನತು ಗೊಂಡವರು ಅರ್ಧದಷ್ಟು ವೇತನ ಪಡೆಯುತ್ತಾರೆ.
ಈ ನಡುವೆ ತಮ್ಮ ಮೇಲಿನ ಆರೋಪ ಸುಳ್ಳು ಎಂಬ ಬಗ್ಗೆ ದಾಖಲೆಗಳಿದ್ದರೆ ಐಜಿಗೆ ಮಾಹಿತಿ ನೀಡುವ ಅವಕಾಶವೂ ಇದೆ.

ಕೆಲವರಿಂದಾಗಿ ಜಿಲ್ಲೆಗೂ ಕೆಟ್ಟ ಹೆಸರು
ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅನೈತಿಕ ಚಟುವಟಿಕೆ, ಮಟ್ಕಾ, ಜುಗಾರಿ, ವೇಶ್ಯಾವಾಟಿಕೆ, ಅಕ್ರಮ ಮರಳುಗಾರಿಕೆ ಪೊಲೀಸರಿಗೆ ತಿಳಿದಿದ್ದರೂ ಎಗ್ಗಿಲ್ಲದೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಂಧೆಕೋರರಿಗೆ ಪೊಲೀಸರೇ ಸಹಕಾರ ನೀಡಿದರೆ ಜಿಲ್ಲೆಗೂ ಕಪ್ಪು ಚುಕ್ಕೆಯಾಗುತ್ತದೆ. ಈ ಕಾರಣಕ್ಕೆ ಮೂಲದಲ್ಲೇ ಈ ಸಮಸ್ಯೆಯನ್ನು ಹೋಗಲಾಡಿಸಲು ಅಮಾನತು ಮಾಡಲಾಗುತ್ತಿದೆ. ಸಣ್ಣಪುಟ್ಟ ತಪ್ಪಿನಿಂದಾಗಿ ಅಮಾನತುಗೊಂಡವರು ಪಶ್ಚಾತ್ತಾಪ ಪಟ್ಟದ್ದೂ ಇದೆ. ಇಂತಹ ಪ್ರಕರಣದ ನೈಜತೆ ಪರಿಶೀಲಿಸಿ ಅವರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿದ್ದೂ ಇದೆ.

ಟಾಪ್ ನ್ಯೂಸ್

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.