Demonstration of divine worship: ಚರ್ಚೆ ಹುಟ್ಟುಹಾಕಿದ ದೈವಾರಾಧನೆಯ ಕಲ್ಜಿಗ ಸಿನೆಮಾ!
Team Udayavani, Sep 14, 2024, 7:09 AM IST
ಮಂಗಳೂರು: ಶುಕ್ರವಾರ ಬಿಡುಗಡೆಯಾದ “ಕಲ್ಜಿಗ’ ಸಿನೆಮಾದಲ್ಲಿ ದೈವಾರಾಧನೆಯ ದೃಶ್ಯ ಬಳಸಲಾಗಿದೆ ಎಂಬ ಆರೋಪ ಚರ್ಚೆಗೆ ಗ್ರಾಸವಾಗಿದೆ.
ತುಳುನಾಡಿನ ಕಾರಣಿಕ ಶಕ್ತಿ ಕೊರಗಜ್ಜ ಬಗ್ಗೆ ಸಿನೆಮಾದಲ್ಲಿ ದೃಶ್ಯ ಪ್ರದರ್ಶಿಸಿದ್ದು ತಪ್ಪು ಎಂದು ಮಂಗಳೂ ರಿನ ದೈವಾರಾಧನೆ ಸಂರಕ್ಷಣ ಟ್ರಸ್ಟ್ ಹಾಗೂ ಇತರ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಘಟನೆ ಪ್ರಮುಖರು ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. “ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಭಕ್ತಿಯಿಂದ ಪೂಜಿಸುವ ಆಚರಣೆಯನ್ನು ಈ ರೀತಿ ಪ್ರದರ್ಶಿಸಬಾರದು’ ಎಂದವರು ಹೇಳಿದರು.
ಈ ಮಧ್ಯೆ, ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ನಡೆಸಿ ಸುದ್ದಿಗಾರರ ಜತೆಗೆ ಮಾತನಾಡಿದ ನಟ ಅರ್ಜುನ್ ಕಾಪಿಕಾಡ್ “ನಾವು ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದು, ಪ್ರೇಕ್ಷಕರು ಪ್ರೀತಿ ನೀಡುತ್ತಿದ್ದಾರೆ. ಅಜ್ಜನ ಕುರಿತು ಅಪಪ್ರಚಾರ ಮಾಡಿಲ್ಲ. ಯಾರಿಗಾದರೂ ಮನಸ್ಸಿಗೆ ಬೇಸರವಾಗಿದ್ದಲ್ಲಿ, ಅವರು ಯಾವ ಸ್ಥಳಕ್ಕೆ ಬರುತ್ತಾರೋ ಅಲ್ಲಿಗೆ ಮುಂಚಿತವಾಗಿ ತಾನೇ ಬಂದು ನಿಂತು ಮಾತನಾಡುವೆ. ಸಿನೆಮಾ ನೋಡದೆ ವಿವಾದ ಬೇಡ. ಇಡೀ ಚಿತ್ರತಂಡ ಅಜ್ಜನ ಭಕ್ತರಾಗಿರುವುದರಿಂದ ಅಜ್ಜನ ದಯೆ ಸದಾ ನಮ್ಮ ಬೆನ್ನಲ್ಲಿ ಇರುವಂತೆ ಪ್ರಾರ್ಥನೆ ಮಾಡಿದ್ದೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.