Bengaluru: ಅಕ್ರಮ ಸಂಬಂಧ ಪ್ರಶ್ನಿಸಿದ ಅಮ್ಮನ ಕೊಲೆಗೈದ ಪುತ್ರಿ, ಆಕೆಯ ಪ್ರಿಯಕರ

ಪತಿ, ಇಬ್ಬರು ಮಕ್ಕಳಿದ್ದರೂ ಪ್ರಿಯಕರನ ಜತೆ ಅಕ್ರಮ ಸಂಬಂಧ ; ಹೊಂಗಸಂದ್ರದಲ್ಲಿ ಘಟನೆ, ಇಬ್ಬರು ಆರೋಪಿಗಳ ಬಂಧನ

Team Udayavani, Sep 14, 2024, 8:31 AM IST

3-bng-crime

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪುತ್ರಿಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ತಾಯಿಯ ಕುತ್ತಿಗೆ ಬಿಗಿದು ಕೊಲೆಗೈದಿರುವ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಮೃತಳ ಪುತ್ರಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಂಗಸಂದ್ರ ನಿವಾಸಿ ಜಯಲಕ್ಷ್ಮೀ (48) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಮೃತಳ ಪುತ್ರಿ ಪವಿತ್ರಾ (28) ಮತ್ತು ಆಕೆಯ ಪ್ರಿಯಕರ ಲವನೀಶ್‌ (20) ಎಂಬವರನ್ನು ಬಂಧಿಸಲಾಗಿದೆ. ಸೆ.11ರಂದು ಆರೋಪಿಗಳು ಜಯಲಕ್ಷ್ಮೀ ಅವರನ್ನು ಕೊಲೆಗೈದಿದ್ದರು.

ಮೃತ ಜಯಲಕ್ಷ್ಮೀ ಕುಟುಂಬ ಜತೆ ಹೊಂಗಸಂದ್ರದಲ್ಲಿ ವಾಸವಾಗಿದ್ದು, ಪುತ್ರಿ ಪವಿತ್ರಾಗೆ ಜಯಲಕ್ಷ್ಮೀ ಸಹೋದರ ಸುರೇಶ್‌ ಎಂಬುವರ ಜತೆ 11 ವರ್ಷಗಳ ಹಿಂದೆಯೇ ಮದುವೆಯಾಗಿದ್ದು, ದಂಪತಿಗೆ 10 ಮತ್ತು 6 ವರ್ಷದ ಇಬ್ಬರು ಮಕ್ಕಳು ಇದ್ದಾರೆ. ಪತಿ ಸುರೇಶ್‌ ಮನೆ ಮುಂಭಾಗದ ಮಳಿಗೆಯಲ್ಲಿ ಪ್ರಾವಿಜನ್‌ ಸ್ಟೋರ್‌ ಇಟ್ಟುಕೊಂಡಿದ್ದಾರೆ. ಇನ್ನು ಇದೇ ಕಟ್ಟಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನವನೀಶ್‌, ಲೆಥ್‌ ಮಿಷನ್‌ ಕೆಲಸ ಮಾಡುತ್ತಿದ್ದ. ಈ ಮಧ್ಯೆ ನವನೀಶ್‌ ಮತ್ತು ಪವಿತ್ರಾ ನಡುವೆ ಪ್ರೇಮಾಂಕುರವಾಗಿದ್ದು, ಇಬ್ಬರು ಅಕ್ರಮ ಸಂಬಂಧ ಹೊಂದಿದ್ದರು. ಈ ವಿಚಾರ ತಿಳಿದ ಗಂಡ ಸುರೇಶ್‌ ಮತ್ತು ತಾಯಿ ಜಯಲಕ್ಷ್ಮೀ ನವನೀಶ್‌ನನ್ನು ಮನೆ ಖಾಲಿ ಮಾಡಿಸಿದ್ದರು. ಅದರಿಂದ ಆರೋಪಿ ಮನೆ ಸಮೀಪದಲ್ಲೇ ಮತ್ತೂಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ಪೊಲೀಸರು ಹೇಳಿದರು.

15 ದಿನಗಳ ಹಿಂದೆ ಪತಿ ಸುರೇಶ್‌ ಮತ್ತು ತಾಯಿ ಜಯಲಕ್ಷ್ಮೀ ಕಾರ್ಯನಿಮಿತ್ತ ಹೊರಗಡೆ ಹೋಗಿದ್ದರು. ಈ ವೇಳೆ ಪ್ರಿಯಕರನನ್ನು ಪವಿತ್ರಾ ಮನೆಗೆ ಕರೆಸಿಕೊಂಡಿದ್ದಳು. ಅದೇ ವೇಳೆ ಮನೆಗೆ ಬಂದ ಜಯಲಕ್ಷ್ಮೀ ಪವಿತ್ರಾಗೆ ಹೊಡೆದು ಬುದ್ಧಿವಾದ ಹೇಳಿದ್ದು, ಲವನೀಶ್‌ಗೂ ಹೊಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೇ ವಿಚಾರವಾಗಿ ನಿತ್ಯ ತಾಯಿ-ಮಗಳ ನಡುವೆ ಜಗಳ ನಡೆಯುತ್ತಿತ್ತು.

ಅದರಿಂದ ಕೋಪಗೊಂಡಿದ್ದ ಪವಿತ್ರಾ, ಸೆ.11ರಂದು ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ತಾಯಿ ಜಯಲಕ್ಷ್ಮೀ ಕೊಲೆಗೈಯಲು ನಿರ್ಧರಿಸಿ, ಪ್ರಿಯಕರ ಲವನೀಶ್‌ ನನ್ನು ಕರೆಸಿಕೊಂಡಿದ್ದಾಳೆ. ಬಳಿಕ ಇಬ್ಬರು ಟವೆಲ್‌ನಿಂದ ಕುತ್ತಿಗೆ ಬಿಗಿದು ಜಯಲಕ್ಷ್ಮೀ ಕೊಲೆಗೈದು, ಶೌಚಾಲಯ ಸಮೀಪದ ಮಲಗಿಸಿದ್ದಾರೆ. ನಂತರ ಲವನೀಶ್‌ ಮನೆಯಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ದೂರು ದಾಖಲಿಸಿಕೊಂಡು ಲವನೀಶ್‌ ಹಾಗೂ ಪವಿತ್ರಾಳನ್ನು ಬಂಧಿಸಿದ್ದಾರೆ.

ಕಾಲು ಜಾರಿ ಬಿದ್ದು ಸಾವು ಎಂದು ಕಥೆ ಕಟ್ಟಿದ್ದ ಪುತ್ರಿ! ಮನೆಯಲ್ಲಿ ಜಯಲಕ್ಷ್ಮೀಯನ್ನು ಕೊಂದ ಬಳಿಕ “ನಮ್ಮ ತಾಯಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಎಂದು ಪುತ್ರಿ ಪವಿತ್ರಾ ಕಥೆ ಕಟ್ಟಿದ್ದಾಳೆ. ಮಹಿಳೆ ಸಾವು ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಗುರುವಾರ ಸಂಜೆ ವರದಿಯಲ್ಲಿ ಕುತ್ತಿಗೆ ಬಿಗಿದು ಸಾವು ಎಂದು ವರದಿ ಬಂದಿತ್ತು. ಅದರಿಂದ ಅನುಮಾನಗೊಂಡ ಪೊಲೀಸರು, ಶುಕ್ರವಾರ ಪವಿತ್ರಾಳನ್ನು ವಶಕ್ಕೆ ಪಡೆದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಪ್ರಿಯಕರನ ಜತೆ ಸೇರಿ ಎಸಗಿದ ಕೊಲೆ ರಹಸ್ಯ ಬಾಯಿಬಿಟ್ಟಿದ್ದಾಳೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.