Ronny Movie Review: ಬಣ್ಣದ ಕನಸಿಗೆ ರಕ್ತ ಲೇಪನ


Team Udayavani, Sep 14, 2024, 10:44 AM IST

Ronny

ಜೀವನವೇ ಹಾಗೆ, ಅಂದು ಕೊಂಡಿದ್ದು ಯಾವುದೂ ಆಗುವುದಿಲ್ಲ. ಎಲ್ಲವೂ ಸುಸೂತ್ರವಾಗಿ ಸಾಗುವಾಗ ಒಂದಿಲ್ಲೊಂದು ಅಡಚಣೆ ಎದುರಾಗುತ್ತಲೇ ಇರುತ್ತವೆ. ಕೆಲ ಆಕಸ್ಮಿಕ ಘಟನೆಗಳು ಬದುಕಿನ ದಿಕ್ಕನ್ನೇ ಬದಲಿಸುತ್ತವೆ. ಇದೇ ಎಳೆಯನ್ನು ಕಥೆಯನ್ನಾಗಿ ಪೋಣಿಸಿದ್ದಾರೆ ನಿರ್ದೇಶಕ ಗುರುತೇಜ್‌ ಶೆಟ್ಟಿ. ಈ ವಾರ ತೆರೆಕಂಡಿರುವ “ರಾನಿ’ ಚಿತ್ರ (Ronny Movie), ಮೇಲ್ನೋಟಕ್ಕೆ ರೌಡಿಸಂ, ಭೂಗತಲೋಕ ಎಂದೆಲ್ಲ ಬಿಂಬಿತವಾದರೂ ಇಲ್ಲಿ ಕಥಾನಾಯಕನ ಸಂವೇದನೆಯನ್ನು ಮನಮುಟ್ಟುವಂತೆ ತೋರಿಸಿದ್ದಾರೆ.

ರಾಘವ ಅಲಿಯಾಸ್‌ ರಾನಿ ಚಿತ್ರದ ಕಥಾನಾಯಕ. ಅವನ ಬದುಕಿನ ವ್ಯಥೆಯೇ ಈ ಸಿನಿಮಾದ ಮೂಲ ವಿಷಯ. ಸಿನಿಮಾ ಎಂಬ ಬಣ್ಣದ ಲೋಕದಲ್ಲಿ ಮಿಂಚಿ, ದೊಡ್ಡ ಸ್ಟಾರ್‌ ಆಗಬೇಕೆಂಬ ಕನಸು ಹೊತ್ತ ನಾಯಕನಿಗೆ ಜೊತೆಯಾಗುತ್ತಾಳೆ ನಾಯಕಿ. ತನ್ನ ಕನಸಿನಂತೆ ಸಿನಿಮಾದಲ್ಲಿ ಕ್ಯಾಮರಾ ಮುಂದೆ ನಟಿಸಬೇಕಿದ್ದ ನಾಯಕ ದುರ್ಘ‌ಟನೆಯೊಂದರಲ್ಲಿ ಸಿಲುಕುತ್ತಾನೆ. ಮುಂದೇನಾಗುತ್ತದೆ ಎಂಬುದನ್ನು ತೆರೆಮೇಲೆ ನೋಡಿದರೆ ಚೆಂದ.

ಬಹುತೇಕ ಚಿತ್ರಗಳಲ್ಲಿ ನಾಯಕ ನಟಿಯ ಪಾತ್ರಗಳನ್ನು ಸೀಮಿತ ಗೊಳಿಸಲಾಗುತ್ತದೆ. ಆದರೆ ರಾನಿ ಹಾಗಲ್ಲ. ಇಲ್ಲಿ ಬರುವ ಮೂರೂ ನಾಯಕಿಯರು ಕಥೆಗೆ ಹೊಸ ತಿರುವು ನೀಡುತ್ತಾರೆ. ನಾಯಕನ ಪಾತ್ರದ ತೂಕಕ್ಕೆ ಸರಿಸಮವಾಗಿ ನಾಯಕಿಯರದ್ದೂ ಇರುವುದು ವಿಶೇಷ ಎನ್ನಬಹುದು.

ಕಥೆ ಸಾಗುತ್ತಿದ್ದಂತೆ ಅಲ್ಲಲ್ಲಿ ಗೊಂದಲಗಳೂ ಸೃಷ್ಟಿಯಾದರೂ, ಕ್ಲೈಮಾಕ್ಸ್‌ನಲ್ಲಿ ಉತ್ತರ ಕಂಡುಕೊಳ್ಳಬಹುದು. ಎರಡು ಟ್ರ್ಯಾಕ್‌ನಲ್ಲಿ ಆರಂಭವಾಗುವ ಕಥೆ, ಪ್ರೇಕ್ಷಕ ನಿರೀಕ್ಷಿಸದ ಅಂತ್ಯವನ್ನು ಕಾಣುತ್ತದೆ. ಸಾಮಾನ್ಯ ಕಥೆಯೊಂದನ್ನು ತಾಂತ್ರಿಕ ಅಂಶಗಳು ಮುನ್ನಡೆಸಿಕೊಂಡು ಹೋಗುತ್ತವೆ. ನಿರ್ದೇಶಕ ಗುರುತೇಜ್‌ ಶೆಟ್ಟಿ ಇಲ್ಲಿ ಜಾಣ್ಮೆ ತೋರಿದ್ದಾರೆ.

ಕ್ಲಾಸ್‌ ಪಾತ್ರಗಳಿಂದ ಮನೆಮಾತಾಗಿದ್ದ ನಟ ಕಿರಣ ರಾಜ್‌, ಮಾಸ್‌ ಅವತಾರದಲ್ಲೂ ನಟಿಸಬಲ್ಲೆ ಎಂದು ರಾನಿ ಮೂಲಕ ಸಾಬೀತು ಪಡಿಸಿದ್ದಾರೆ. ಇಲ್ಲಿ ಅವರದ್ದು ಒಂದೇ ಪಾತ್ರ ಎರಡೂ ಛಾಯೆ. ರಾದ್ಯಾ ಹಾಗೂ ಸಮೀಕ್ಷಾ ತಮ್ಮ ನಟನೆ ಮೂಲಕ ಭರವಸೆ ಮೂಡಿಸಿದ್ದಾರೆ. ಅಪೂರ್ವ ಅವರ ಪೊಲೀಸ್‌ ಪಾತ್ರ ಗಮನ ಸೆಳೆಯುತ್ತದೆ. ರವಿಶಂಕರ್‌ ಅವರ ಖಳನಟನೆ ಬಗ್ಗೆ ಎರಡು ಮಾತಿಲ್ಲ.

ಸಂಭಾಷಣೆ ಹಾಗೂ ಛಾಯಾಗ್ರಹಣ ಚಿತ್ರದ ಪ್ಲಸ್‌ ಪಾಯಿಂಟ್‌. ಉಳಿದಂತೆ ಧರ್ಮಣ್ಣ ಕಡೂರ್‌, ಸೂರ್ಯ ಕುಂದಾಪುರ, ಯಶ್‌ ಶೆಟ್ಟಿ, ಉಗ್ರಂ ಮಂಜು ನಟಿಸಿದ್ದಾರೆ. ಕ್ಲಾಸ್‌ ಹಾಗೂ ಮಾಸ್‌ ಎರಡೂ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗುತ್ತಾನೆ ರಾನಿ.

ನಿತೀಶ ಡಂಬಳ

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

Vikasa Parva Movie Review

Vikasa Parva Movie Review: ಜೀವನ ಪಾಠದ ‘ವಿಕಾಸ ಯಾತ್ರೆ’

kaalapatthar

Kaalapatthar movie review: ಶಿಲೆಯ ಸುತ್ತದ ಸೆಳೆತವಿದು..

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

My Hero Movie Review

My Hero Movie Review; ಸೂಕ್ಷ್ಮ ಸಂದೇಶದ ಆಪ್ತ ಸಿನಿಮಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.