ಗುತ್ತಿಗೆ ಆಧಾರಿತ KSRTC ಬಸ್ ಚಾಲಕರ ಸಂಬಳ ಕಡಿತ,ಅಸಮಾಧಾನ; ಕರ್ತವ್ಯಕ್ಕೆ ಗೈರಾದ ಚಾಲಕರು
Team Udayavani, Sep 14, 2024, 11:25 AM IST
ಸುಳ್ಯ: ಕೆ.ಎಸ್.ಆರ್.ಟಿ.ಸಿ.ಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳದಲ್ಲಿ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದರಿಂದ ಅಸಮಾಧಾನಗೊಂಡಿರುವ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಸೆ.14ರ ಶನಿವಾರ ಪ್ರತಿಭಟಿಸುತ್ತಿದ್ದಾರೆ.
ಸುಳ್ಯ ಕೆ.ಎಸ್.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು.
ಅವರು ನೇಮಿಸುವ ಸಂದರ್ಭದಲ್ಲಿ ಚಾಲಕರ ಬೇಡಿಕೆಯಂತೆ ಸಂಬಳ ಕಡಿತ ಮಾಡುವುದಿಲ್ಲ, ಮತ್ತಿತರ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ ಇದೀಗ ತಿಂಗಳ ಸಂಬಳದಲ್ಲಿ 5 ಸಾವಿರಕ್ಕೂ ಅಧಿಕ ಹಣ ಕಡಿತ ಮಾಡಲಾಗಿದ್ದು, ಕೆಲವರಿಗೆ 10 ಸಾವಿರದವರೆಗೆ ಕಡಿತ ಮಾಡಲಾಗಿದೆ. ಇನ್ನಿಬ್ಬರಿಗೆ ಸಂಬಳವೇ ಬಂದಿಲ್ಲ ಎಂದು ಚಾಲಕರು ಆರೋಪಿಸಿದ್ದಾರೆ.
ಸುಳ್ಯ ಘಟಕ ವ್ಯಾಪ್ತಿಯಲ್ಲಿ ಸುಮಾರು 9 ಚಾಲಕರಿಗೆ ಅನ್ಯಾಯ ಆಗಿದೆ ಎಂದು ಅವರು ಕೆಲಸಕ್ಕೆ ಗೈರಾಗಿ ಪ್ರತಿಭಟಿಸುತ್ತಿದ್ದಾರೆ. ಕೆ.ಎಸ್.ಆರ್.ಟಿಸಿ. ಅಧಿಕಾರಿಗಳು ಕೂಡ ಈ ಮೊದಲು ಭರವಸೆ ನೀಡಿದಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಡಿಸಿ ಕಚೇರಿ ಮುಂಭಾಗ ಪ್ರತಿಭಟಿಸಲು ಮಡಿಕೇರಿ, ಸುಳ್ಯ, ಪುತ್ತೂರು ಘಟಕದ ಸಂತ್ರಸ್ತ ಚಾಲಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.