Khata-Khat: ಜೀವನ ಖಟಾ-ಖಟ್ ಅಲ್ಲ, ಅದಕ್ಕೆ ಪರಿಶ್ರಮ ಬೇಕು…: ರಾಹುಲ್ ಗೆ ಜೈಶಂಕರ್ ಟಾಂಟ್
Team Udayavani, Sep 14, 2024, 12:21 PM IST
ಹೊಸದಿಲ್ಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S Jaishankar) ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ದ ಟೀಕೆ ಮಾಡಿದ್ದು, ಜೀವನವು “ಖಟಾ-ಖಟ್” (ಸುಲಭವಾದ ಕೆಲಸ) ಅಲ್ಲ. ಅದಕ್ಕೆ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯ ಅಗತ್ಯವಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗಳಿಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡುವುದಾಗಿ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪದೇ ಪದೇ “ಖಟಾ-ಖಟ್” ಪದವನ್ನು ಬಳಸಿದ್ದರು.
ಸ್ವಿಟ್ಜರ್ಲೆಂಡ್ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿರುವ ಮೂಲಸೌಕರ್ಯ ಅಭಿವೃದ್ಧಿ ಕುರಿತು ಮಾತನಾಡುತ್ತಾ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್, “ನೀವು ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ನಿರ್ಮಿಸುವವರೆಗೆ, ಆ ನೀತಿಗಳನ್ನು ಜಾರಿಗೆ ತರುವವರೆಗೆ, ಅದು ಕಠಿಣ ಕೆಲಸವಾಗಿದೆ. ಜೀವನವು ‘ಖಟಾ-ಖಟ್’ ಅಲ್ಲ, ಜೀವನವು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಾಗಿದೆ” ಎಂದರು.
“ಕೆಲಸವನ್ನು ಹೊಂದಿರುವ ಮತ್ತು ಅದರಲ್ಲಿ ಶ್ರಮಿಸಿದ ಯಾರಿಗಾದರೂ ಅದು ತಿಳಿದಿದೆ. ಹಾಗಾಗಿ ಇದು ನಿಮಗೆ ನನ್ನ ಸಂದೇಶವಾಗಿದೆ, ನಾವು ಶ್ರಮ ಪಡಬೇಕು” ಎಂದು ಜೈಶಂಕರ್ ಹೇಳಿದರು.
ಒಂದು ದೇಶವು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸದೆ ದೊಡ್ಡ ಶಕ್ತಿಯಾಗಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.
“ನಾವು ಅದಕ್ಕೆ ಅಸಮರ್ಥರು, ನಾವು ಅದನ್ನು ಪ್ರಯತ್ನಿಸಬಾರದು ಎಂದು ಹೇಳುವ ಜನರಿದ್ದಾರೆ. ನೀವು ನಿಜವಾಗಿಯೂ ಉತ್ಪಾದನೆಯಿಲ್ಲದೆ ವಿಶ್ವದ ಪ್ರಮುಖ ಶಕ್ತಿಯಾಗಬಹುದೇ? ಏಕೆಂದರೆ ಒಂದು ಪ್ರಮುಖ ಶಕ್ತಿಗೆ ತಂತ್ರಜ್ಞಾನದ ಅಗತ್ಯವಿದೆ. ಯಾರೂ ಉತ್ಪಾದನೆ ಅಭಿವೃದ್ಧಿಪಡಿಸದೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ” ಎಂದು ಜೈಶಂಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.