Bengaluru: ಕದ್ದ ಮಾಲನ್ನು ಅಡ ಇಡುತ್ತಿದ್ದ ಪತ್ನಿ: 20 ಲಕ್ಷ ಚಿನ್ನಾಭರಣ ವಶ
Team Udayavani, Sep 14, 2024, 11:38 AM IST
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮನೆ ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ನಿವಾಸಿ ನಾಗರಾಜ್ ಅಲಿಯಾಸ್ ರಿಹಾನ್ (32) ಬಂಧಿತ. ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ 300 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ. ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ನಾಗರಾಜ್, ವೃತ್ತಿಪರ ಕಳ್ಳನಾಗಿದ್ದಾನೆ. 2 ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಯ ಒತ್ತಾಯದ ಮೇರೆಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದು ರಿಹಾನ್ ಎಂದು ಹೆಸರು ಬದಲಾಯಿಸಿ ಕೊಂಡಿದ್ದಾನೆ. ಇನ್ನು ಈತನ ಕಳವು ಕೃತ್ಯಕ್ಕೆ ಆಕೆಯೂ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಳು. ಈತ ಕಳವು ಮಾಡುತ್ತಿದ್ದ ಚಿನ್ನಾಭರಣಗಳನ್ನು ಆಕೆಯೇ ಫೈನಾನ್ಸ್ ಮತ್ತು ಜ್ಯುವೆಲ್ಲರಿ ಶಾಪ್ಗಳಲ್ಲಿ ಅಡಮಾನ ಇಡುತ್ತಿದ್ದಳು. ಬಂದ ಹಣದಲ್ಲಿ ದಂಪತಿ ಐಷಾರಾಮಿ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.