Bengaluru: ಕೆಲಸಕ್ಕಿದ್ದ ಮನೆಯಲ್ಲೇ 53 ಲಕ್ಷ ರೂ. ಚಿನ್ನ ಕದ್ದಳು!
ಸಾಫ್ಟ್ವೇರ್ ಎಂಜಿನಿಯರ್ ಮನೆಯಲ್ಲಿ ವಜ್ರ, ಚಿನ್ನ, ಬೆಳ್ಳಿ ಕಳ್ಳತನ ; ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಬಯಲು
Team Udayavani, Sep 14, 2024, 1:15 PM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮಹಿಳೆಯನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಪಿಂಕಿ ದೇವಿ (30) ಬಂಧಿತೆ. ಆರೋಪಿತೆಯಿಂದ 53.50 ಲಕ್ಷ ರೂ. ಮೌಲ್ಯದ 13 ಗ್ರಾಂ ವಜ್ರ, 570 ಗ್ರಾಂ ಚಿನ್ನಾಭರಣಗಳು ಹಾಗೂ 470 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ವೈಟ್ಫೀಲ್ಡ್ನ ಚೈತನ್ಯ ಆರ್ಮಡಾಲ್ ವಿಲ್ಲಾ ನಿವಾಸಿ ಆಶಿತಾ ಬಿದ್ದಪ್ಪ ಎಂಬುವರು ಮನೆಯಲ್ಲಿ ಕಳ್ಳತನವಾಗಿತ್ತು.
ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿತೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಏನಿದು ಪ್ರಕರಣ?: ಕೊಡಗು ಮೂಲದ ಆಶಿತಾ ಬಿದ್ದಪ್ಪ ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ. ವೈಟ್ಫೀಲ್ಡ್ನ ಚೈತನ್ಯ ಆರ್ಮಡಾಲ್ ವಿಲ್ಲಾದಲ್ಲಿ ಕುಟುಂಬದ ಜತೆಗೆ ವಾಸವಾಗಿದ್ದಾರೆ. ಅವರ ಮನೆಯಲ್ಲಿ ಕಳೆದ 6 ತಿಂಗಳಿಂದ ಬಿಹಾರ ಮೂಲದ ಪಿಂಕಿ ದೇವಿ ಕೆಲಸ ಮಾಡಿಕೊಂಡಿದ್ದಳು. ಒಂದು ತಿಂಗಳ ಹಿಂದೆ ಆಶಿತಾ ಮನೆಯ ಕೊಠಡಿಯ ಕಬೋರ್ಡ್ನಲ್ಲಿ ಚಿನ್ನಾಭರಣ ಇರಿಸಿದ್ದರು. ಸೆ.3ರಂದು ಕಬೋರ್ಡ್ ತೆರೆದು ನೋಡಿದಾಗ ಚಿನ್ನಾಭರಣ ಕಳವುವಾಗಿರುವುದು ಕಂಡು ಬಂದಿದೆ.
ಕೂಡಲೇ ಕೊಠಡಿಯ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಮನೆಗೆಲಸದ ಪಿಂಕಿ ದೇವಿ ಕಬೋರ್ಡ್ ತೆರೆದು ಚಿನ್ನಾಭರಣ ಕಳವು ಮಾಡಿರುವ ದೃಶ್ಯ ಸೆರೆ ಆಗಿತ್ತು. ಈ ಸಂಬಂಧ ಆಶಿತಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ವಜ್ರ, ಚಿನ್ನದ ಸಹಿತ ಬಿಹಾರಕ್ಕೆ ತೆರಳಲು ಯತ್ನ: ಈ ದೂರಿನ ಮೇರೆಗೆ ತನಿಖೆಗೆ ಇಳಿದ ಪೊಲೀಸರು, ವೈಟ್ಫೀಲ್ಡ್ನ ಗಾಂಧಿಪುರದ ಓಂ ಶಕ್ತಿ ದೇವಸ್ಥಾನದ ಸಮೀಪದ ಮನೆಯಲ್ಲಿ ವಾಸವಿದ್ದ ಪಿಂಕಿ ದೇವಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, “ತಾನೇ ಕಳ್ಳತನ ಮಾಡಿರುವುದಾಗಿ’ ತಪ್ಪೊಪ್ಪಿಕೊಂಡಿದ್ದಾಳೆ. ಬಳಿಕ ಈಕೆ ನೀಡಿದ ಮಾಹಿತಿ ಮೇರೆಗೆ ಮನೆಯಲ್ಲೇ ಇರಿಸಿದ್ದ ವಜ್ರ, ಚಿನ್ನಾಭರಣಗಳು ಹಾಗೂ ಬೆಳ್ಳಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಲಾಗಿದೆ. ಮತ್ತೂಂದೆಡೆ ಆರೋಪಿ ಪಿಂಕಿ ದೇವಿ ಕಳ್ಳತನ ಕೃತ್ಯದ ಬಳಿಕವೂ ಮನೆ ಕೆಲಸಕ್ಕೆ ಹೋಗಿದ್ದಳು. ಅಲ್ಲದೆ ಶೀಘ್ರದಲ್ಲೇ ಕಳವು ಚಿನ್ನಾಭರಣಗಳನ್ನು ಬಿಹಾರಕ್ಕೆ ತೆಗೆದುಕೊಂಡು ಹೋಗಲು ಯೋಜನೆ ರೂಪಿಸಿದ್ದಳು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.