Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ


Team Udayavani, Sep 14, 2024, 4:01 PM IST

ct-ravi

ಚಿಕ್ಕಮಗಳೂರು: ರಾಹುಲ್ ಗಾಂಧಿ (Rahul Gandhi) ಲೋಕಸಭೆ ವಿರೋಧ ಪಕ್ಷದ ನಾಯಕರೋ, ಭಾರತ ವಿರೋಧಿ ನಾಯಕರೋ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T Ravi) ಪ್ರಶ್ನಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರು ಎಂಬ ಅನುಮಾನ ಕಾಡುತ್ತಿದೆ. ಭಾರತಕ್ಕೆ ಚೀನಾ, ಪಾಕಿಸ್ತಾನ ವಿರೋಧಿ ಆದರೆ, ರಾಹುಲ್ ಹೇಳಿಕೆ, ಚಟುವಟಿಕೆ ಭಾರತಕ್ಕೆ ವಿರೋಧಿಯಂತಿದೆ ಎಂದರು.

ಅಮೆರಿಕಾದಲ್ಲಿ ರಾಹುಲ್ ಗಾಂಧಿಯವರು ಇಲಿಯಾಸ್ ಓಮರ್ ಎಂಬ ಭಾರತ ವಿರೋಧಿ ಸಂಸದರನ್ನು ಭೇಟಿಯಾಗಿದ್ದಾರೆ. ಇಂಗ್ಲೆಂಡಿಗೆ ಭೇಟಿ ನೀಡಿದಾಗ ಭಾರತ ವಿರೋಧಿಗಳನ್ನು ಭೇಟಿ ಮಾಡುತ್ತಾರೆ. ಅಮೆರಿಕಾದಲ್ಲಿ ಭಾರತ ವಿರೋಧಿಗಳ ಜತೆ ಮಾತುಕತೆ ಮಾಡುತ್ತಾರೆ. ಚೀನಾವನ್ನು ಹೊಗಳುತ್ತಾರೆ. ಹೊರದೇಶದಲ್ಲಿ ಭಾರತವನ್ನು ತೆಗಳುತ್ತಾರೆ ಎಂದು ರಾಹುಲ್ ಗಾಂಧಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಗಣಪತಿ ಮೆರವಣಿಗೆಯಲ್ಲಿದ್ದವರು ಯಾವ ಮುಸ್ಲಿಂ ಮೇಲು ತಲ್ವಾರ್ ಝಳಪಿಸಿಲ್ಲ, ಮಸೀದಿ ಮೇಲೆ ಕಲ್ಲು ತೂರಿಲ್ಲ. ತಲ್ವಾರ್ ಝಳಪಿಸಿದ್ದು ಕಲ್ಲು ತೂರಿದ್ದು ಮುಸ್ಲಿಂ ಮತಾಂಧರು ಎಂದರು.

ಮತಾಂಧರ ಮೇಲೆ ಕ್ರಮ ಆಗಬೇಕಿತ್ತು. ಈ ಹೇಡಿ ಸರ್ಕಾರ ಗಣಪತಿ ಕೂರಿಸಿದವರನ್ನೇ ಎ1 ಮಾಡಿದೆ. 1 ರಿಂದ 18 ಆರೋಪಿಗಳು ಶಾಂತಿಯುತ ಮೆರವಣಿಗೆ ಮಾಡಿದವರು. ಓಲೈಕೆ ರಾಜನೀತಿ ಪರಿಣಾಮ ಮತಾಂಧತೆಗೆ ಕೊನೆ ಇಲ್ಲದಂತಾಗಿದೆ ಎಂದು ದೂರಿದರು.

ಗಣಪತಿ ಮೆರವಣಿಗೆ ಬರಬಾರದು ಎನ್ನಲು ಅವರು ಯಾರು? ಮೊದಲು ಅವರನ್ನು ಒದ್ದು ಒಳಗೆ ಹಾಕಬೇಕಿತ್ತು. ಸರ್ಕಾರ ಗಣಪತಿ ಕೂರಿಸಿದವರನ್ನು ಎ1 ಮಾಡಿದ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲ ಶಾಂತಿ ಸಭೆಗೆ ಮಾಧ್ಯಮ ನಿರ್ಬಂಧ ಮತ್ತು ಮುತಾಲಿಕ್ ಆಗಮನಕ್ಕೆ ನಿರ್ಬಂಧ ಸಂಬಂಧ ಮಾತನಾಡಿದ ಅವರು, ಲಾಡೆನ್ ಬಂದರೆ ಹಮಾರ ಆದ್ಮಿ ಎಂದು ಬಿಟ್ಟುಕೊಳ್ಳುತ್ತಾರೆ. ಮುತಾಲಿಕ್ ಹೋದರೆ ಇವರಿಗೆ ಸಂಕಟ. ಬಾಂಬ್ ಹಾಕುವವನು, ತಾಲಿಬಾನಿಗಳು ಬಂದರೇ, ನಮ್ದುಕೆ ಜನ ನಮ್ಗೆ ಓಟ್ ಹಾಕ್ತಾರೆ ಅಂತ ಕಾಂಗ್ರೆಸ್ ನವರು ತಲೆ ಮೇಲೆ ತೋಪಿ ಹಾಕ್ಕೊಂಡು ಕರೆದುಕೊಳ್ಳುತ್ತಾರೆ. ತಾಲಿಬಾನಿಗಳು ಇವರೋ ಅವರೋ ಯಾರು ಎಂಬ ವ್ಯತ್ಯಾಸನೇ ಗೊತ್ತಾಗದಂಗೆ ನಾಟಕ ಮಾಡುತ್ತಾರೆ. ಮಾಧ್ಯಮಗಳನ್ನು ಹೊರಗಿಟ್ಟು ಶಾಂತಿಸಭೆ ಮಾಡುವುದು ತಮ್ಮ ಹುಳುಕು ಮುಚ್ಚಿಕೊಳ್ಳಲಿಕ್ಕಾ ಎಂದು ಪ್ರಶ್ನಿಸಿದ ಅವರು ಇಂಟಾಲರೆನ್ಸ್ ಮೈಂಡ್ ಸೆಟ್ ಸರಿಪಡಿಸಲಿ ಆಗ ಶಾಂತಿ ನೆಲೆಸುತ್ತದೆ ಎಂದರು.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.