Hebri: ರಸ್ತೆಗೆ ಮರ ಎಳೆದು ಹಾಕಿದ ಕಾಡಾನೆ
Team Udayavani, Sep 14, 2024, 10:52 PM IST
ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಅಭಯಾರಣ್ಯದ ಪರಿಸರದ ನೆಲ್ಲಿಕಟ್ಟೆ ದೇವಸ್ಥಾನ ಬೆಟ್ಟು ಶೇಡಿಕಂತ್ ಪರಿಸರದಲ್ಲಿ ಮತ್ತೆ ಕಾಡಾನೆ ಹಾವಳಿ ಹೆಚ್ಚಾಗಿದೆ.
ನೆಲ್ಲಿಕಟ್ಟೆಯಿಂದ ಮೇಗದ್ದೆಗೆ ಹೋಗುವ ರಸ್ತೆಯ ದೇವಸ್ಥಾನ ಬೆಟ್ಟು ಶೇಡಿಕಂತ ರಸ್ತೆ ಬದಿಯಿದ್ದ ಬೈನೆ ಮರವನ್ನು ಕಾಡಾನೆ ರಸ್ತೆಗೆ ದೂಡಿ ಹಾಕಿದ್ದು, ಬೆಳಗ್ಗಿನ ಹೊತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಭಯಭೀತ ಜನರು:
ಹೆಬ್ರಿಯಿಂದ ನೆಲ್ಲಿಕಟ್ಟೆ ತನಕ ಮಾತ್ರ ಬಸ್ಸಿನ ವ್ಯವಸ್ಥೆ ಇದ್ದು, ಅಲ್ಲಿಂದ ಮೇಗದ್ದೆ ತನಕ ಸುಮಾರು 5 ಕಿ. ಮೀ. ನಡೆದುಕೊಂಡೇ ಬರಬೇಕು. ಶಾಲಾ ಮಕ್ಕಳಿಗಾಗಿ ಅರಣ್ಯ ಇಲಾಖೆಯ ವಲಯ ವನ್ಯಜೀವಿ ವಿಭಾಗ ವಾಹನ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಇತರರು ತೀವ್ರ ತೊಂದರೆಗೆ ಸಿಲುಕಿದ್ದಾರೆ.
ಭಯಬೇಡ :
ಅರಣ್ಯ ಪರಿಸರದಲ್ಲಿ ಆನೆ ಓಡಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಯಾವುದೇ ಖಾಸಗಿ ಜಮೀನನ್ನು ಹಾನಿ ಮಾಡಿದ ಘಟನೆ ನಡೆದಿಲ್ಲ. ಇಲಾಖೆ ಆನೆಯ ಚಲನವಲನನ್ನು ಗಮನಿಸುತ್ತಿದೆ. ಸಮಸ್ಯೆ ಉಲ್ಬಣಗೊಂಡಲ್ಲಿ ಕ್ರಮ ಕೈಗೊಳ್ಳುವುದಾಗಿ ವನ್ಯಜೀವಿ ಭಾಗದ ಅರಣ್ಯ ಅಧಿಕಾರಿ ಚಿದಾನಂದಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.