Mangalore: ಕಾರಿನ ಬ್ಯಾಟರಿಯಲ್ಲಿ ಸಮಸ್ಯೆ; ಪರಿಹಾರ ನೀಡಲು ಆದೇಶ
Team Udayavani, Sep 14, 2024, 10:59 PM IST
ಮಂಗಳೂರು: ಕಾರಿನ ಬ್ಯಾಟರಿಯಲ್ಲಿ ಉಂಟಾದ ಸಮಸ್ಯೆಗೆ ಸ್ಪಂದಿಸದ ಕಾರು ಮಾರಾಟ ಸಂಸ್ಥೆಯು ಕಾರಿನ ಮಾಲಕರಿಗೆ ಪರಿಹಾರ ನೀಡುವಂತೆ ಮಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಪುತ್ತೂರಿನ ಪಶುವೈದ್ಯೆ ಡಾ| ಉಷಾ ಅವರು ಮಂಗಳೂರಿನ ಬಿಜೈ ಮತ್ತು ಪುತ್ತೂರಿನ ಬೊಳುವಾರಿನಲ್ಲಿರುವ ಕಾರು ಮಾರಾಟ ಸಂಸ್ಥೆಯೊಂದರಿಂದ ಕಾರು ಖರೀದಿಸಿದ್ದರು. ಕಾರಿನ ವಾರಂಟಿಯ ಅವಧಿಯೊಳಗೆಯೇ ಬ್ಯಾಟರಿ ಸಮಸ್ಯೆ ಉಂಟಾಗಿತ್ತು. ಇದನ್ನು ಸಂಸ್ಥೆಯ ಗಮನಕ್ಕೆ ತಂದಿದ್ದರೂ ಸಂಸ್ಥೆಯವರು ಸ್ಪಂದಿಸಿರಲಿಲ್ಲ. ಇದರಿಂದ ಮೈಲೇಜ್, ಪಿಕಪ್ ಮತ್ತು ಇತರ ಸಮಸ್ಯೆಗಳು ಕೂಡ ಕಾಣಿಸಿಕೊಂಡಿದ್ದವು.
ಸಮಸ್ಯೆಗೆ ಸ್ಪಂದಿಸದ ಸಂಸ್ಥೆಯ ವಿರುದ್ಧ ಡಾ| ಉಷಾ ಅವರು ನ್ಯಾಯವಾದಿ ವಿಶ್ವನಾಥ್ ದೇವಸ್ಯ ಅವರ ಮೂಲಕ ಮಂಗಳೂರಿನ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿದಾರೆ ಡಾ| ಉಷಾ ಅವರಿಗೆ ಪರಿಹಾರ ನೀಡುವಂತೆ ಸಂಸ್ಥೆಗೆ ಆದೇಶ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.