Democracy Day; ಇಂದು 2,500 ಕಿ.ಮೀ. ಮಾನವ ಸರಪಳಿ

ವಿಶ್ವದಾಖಲೆ ಆಚರಣೆಗೆ ಕರುನಾಡು ಸಜ್ಜು

Team Udayavani, Sep 15, 2024, 6:00 AM IST

1-manava

ಬೆಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನದ ಆಚರಣೆಗಾಗಿ ಸಡಗರ-ಸಂಭ್ರಮದಿಂದ ಕರುನಾಡು ಸಜ್ಜಾಗಿದ್ದು, ಇದರ ಅಂಗವಾಗಿ ರವಿವಾರ ಬೀದರ್‌ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಹಾಗೂ 10 ಲಕ್ಷ ಗಿಡ ನೆಡುವ ಮೂಲಕ ಹೊಸ ದಾಖಲೆ ಬರೆಯಲು ರಾಜ್ಯ ಸರಕಾರ ಸನ್ನದ್ಧವಾಗಿದೆ.

ರವಿವಾರ ಬೆಳಗ್ಗೆ 9 ಗಂಟೆಗೆ ವಿಧಾನ
ಸೌಧದ ಮುಂಭಾಗದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ ಚಾಲನೆ ನೀಡಲಿದ್ದು, ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಲಾಗುತ್ತದೆ. ಅನಂತರ ಮಾನವ ಸರಪಳಿ ನಿರ್ಮಾಣವಾಗಲಿದ್ದು, ಬಳಿಕ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಶನಿವಾರ ಸಂಜೆ ಈ ಕುರಿತು ಮಾಹಿತಿ ನೀಡಿದ ಸಮಾಜ ಕಲ್ಯಾಣ ಸಚಿವ ಡಾ| ಎಚ್‌.ಸಿ. ಮಹದೇವಪ್ಪ, 2007ರ ಸೆ. 15ರಂದು ವಿಶ್ವಸಂಸ್ಥೆಯು “ಪ್ರಜಾಪ್ರಭುತ್ವ ದಿನ’ವನ್ನು ಘೋಷಿಸಿದ್ದು, ಅದರ ಅಂಗವಾಗಿ ಸಮಾಜ ಕಲ್ಯಾಣ, ಪೌರಾಡಳಿತ, ಗ್ರಾಮೀಣಾಭಿ ವೃದ್ಧಿ, ಶಿಕ್ಷಣ ಮತ್ತಿತರ ವಿವಿಧ ಇಲಾಖೆಗಳು ಸೇರಿ ವಿಶಿಷ್ಟ ಕಾರ್ಯಕ್ರಮ ವನ್ನು ರೂಪಿಸಿವೆ ಎಂದರು.

3 ಕೋಟಿ ಜನರ ಸಹಭಾಗಿತ್ವ
2023ರ ಸೆ. 15ರಂದು ರಾಜ್ಯಾದ್ಯಂತ 2.30 ಕೋಟಿ ಜನರು ಸಂವಿಧಾನದ ಪೀಠಿಕೆ ಓದುವ ಮೂಲಕ ದಾಖಲೆ ಬರೆದಿದ್ದರು. ಈ ಬಾರಿ ಬೀದರ್‌ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲು ನಿರ್ಧರಿಸಿದ್ದು, ಕನಿಷ್ಠ 25 ಲಕ್ಷ ಜನರು ಇದರಲ್ಲಿ ಭಾಗಿಯಾಗಲಿದ್ದಾರೆ. ಇದುವರೆಗೆ 14 ಲಕ್ಷ ಜನರು ನೋಂದಣಿ ಮಾಡಿ ಕೊಂಡಿದ್ದಾರೆ. ಅಲ್ಲದೆ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 3 ಕೋಟಿ ಜನರು ಭಾಗವಹಿಸುವ ಅಂದಾಜಿದೆ.

ಕೆನರಾ ಬ್ಯಾಂಕ್‌, ಕರ್ಣಾಟಕ ಬ್ಯಾಂಕ್‌, ರೋಟರಿ ಕ್ಲಬ್‌, ರೈತ ಸಂಘ ಗಳು, ನಾಗರಿಕ ಸಂಘ-ಸಂಸ್ಥೆಗಳು ಕೈ ಜೋಡಿಸಿವೆ ಎಂದು ವಿವರಿಸಿದರು.

ಸಮ ಸಮಾಜದ ನಿರ್ಮಾಣ
ಅಸಮಾನತೆ ತೊಡಗಿಸಿ, ಸಮ ಸಮಾಜದ ಗುರಿ ತಲುಪಲು, ಸರ್ವಾಂ ಗೀಣ ಅಭಿವೃದ್ಧಿಗೆ ಪ್ರಬಲ ಅಸ್ತ್ರವಾಗಿ ರುವ ಪ್ರಜಾಸತ್ತಾತ್ಮಕ ಅಧಿಕಾರ ಬಳಕೆ ಆಗಬೇಕು. ಭಾರತವು ಅತ್ಯಂತ ಬಲಿಷ್ಠ ಪ್ರಜಾಸತ್ತಾತ್ಮಕ ರಾಷ್ಟ್ರ ಎಂಬ ಸಂದೇಶವು ವಿಶ್ವಕ್ಕೆ ರವಾನೆಯಾಗಬೇಕು. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಪ್ರತಿ ಜಿಲ್ಲಾ, ತಾಲೂಕು ಕೇಂದ್ರ ಗಳಲ್ಲೂ ಮಾನವ ಸರಪಳಿ ಜೋಡಣೆ ಆಗಲಿದ್ದು, ಸಮುದ್ರದಲ್ಲೂ ಮಾನವ ಸರಪಳಿ ರಚನೆ ಆಗಲಿದೆ. ಎಂದು ಸಚಿವ ಮಹದೇವಪ್ಪ ಅವರು ವಿವರಿಸಿದರು.

ಕರಾವಳಿಯಲ್ಲಿ

ದ. ಕನ್ನಡ: ಸುಮಾರು 130 ಕಿ.ಮೀ. ಉದ್ದದ ಮಾನವ ಸರಪಳಿ
ಉಡುಪಿ: ಲಕ್ಷ ಜನರು ಭಾಗಿ, ಸುಮಾರು 107 ಕಿ.ಮೀ. ಉದ್ದ

ವಿಶ್ವ ದಾಖಲೆ ಬರೆಯುವು ದಷ್ಟೇ ಈ ಕಾರ್ಯಕ್ರಮದ ಉದ್ದೇಶವಲ್ಲ. ಇತ್ತೀಚೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿವೆ. ಅಸಮಾನತೆ ತೊಲಗಿಸಿ, ಸಮ ಸಮಾಜದ ಗುರಿ ತಲುಪಲು, ಸರ್ವಾಂಗೀಣ ಅಭಿವೃದ್ಧಿಗೆ ಪ್ರಬಲ ಅಸ್ತ್ರವಾಗಿರುವ ಪ್ರಜಾಸತ್ತಾತ್ಮಕ ಅಧಿಕಾರ ಬಳಕೆ ಆಗಬೇಕು. ಅದಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
– ಡಾ| ಎಚ್‌.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

suicide (2)

Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.