Kolkata Trainee Doctor Case: ಮೆಡಿಕಲ್ ಕಾಲೇಜು ಮಾಜಿ ಪ್ರಾಂಶುಪಾಲ, ಠಾಣಾಧಿಕಾರಿಯ ಬಂಧನ
Team Udayavani, Sep 15, 2024, 8:11 AM IST
ಕೋಲ್ಕತ್ತಾ: ಇಲ್ಲಿನ ಟ್ರೈನಿ ವೈದ್ಯೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ ಪ್ರಕರಣದಲ್ಲಿ ಇದೀಗ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಘಟನೆ ನಡೆದಿದ್ದ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಹಾಗೂ ಘಟನೆಯ ಪ್ರಾಥಮಿಕ ತನಿಖೆ ನಡೆಸಿದ್ದ ಠಾಣಾಧಿಕಾರಿಯನ್ನು ಶನಿವಾರ (ಸೆ.14) ರಾತ್ರಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವಿಕೆ ಮತ್ತು ಸಾಕ್ಷ್ಯ ನಾಶದ ಕಾರಣದಿಂದ ಅವರ ಬಂಧನವಾಗಿದೆ ಎಂದು ವರದಿಯಾಗಿದೆ.
ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಪೊಲೀಸ್ ಅಧಿಕಾರಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಹಾಳುಮಾಡಲು ಪ್ರಯತ್ನಿಸಿದ್ದರು. ಇದು ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿಭಟನಾ ನಿರತ ವೈದ್ಯರು ಶನಿವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಸಿಎಂ ನಿವಾಸಕ್ಕೆ ತೆರಳಿದ್ದರು. ಆದರೆ ಮಾತುಕತೆಯನ್ನು ನೇರಪ್ರಸಾರ ಮಾಡುವದಕ್ಕೆ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಭೇಟಿಯಾಗದೆ ಹಿಂತಿರುಗಿದ್ದರು. ಇದಾದ ಕೆಲವೇ ಸಮಯದಲ್ಲಿ ಈ ಬಂಧನವಾಗಿದೆ.
ಸಂದೀಪ್ ಘೋಷ್ ವಿರುದ್ದ ಹಣಕಾಸಿನ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ಆತನ ವಿರುದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನೂ ದಾಖಲಿಸಿದೆ.
ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ ನಲ್ಲಿ ಆಗಸ್ಟ್ 9ರಂದು ಈ ಅಮಾನವೀಯ ಘಟನೆ ನಡೆದಿತ್ತು. ಟ್ರೈನಿ ವೈದ್ಯೆಯ ದೇಹ ತೊರೆತ ಬಳಿಕ ನಡೆದ ತನಿಖೆಯಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.