Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
Team Udayavani, Sep 15, 2024, 12:42 PM IST
ಬೆಂಗಳೂರು: ದುಷ್ಕರ್ಮಿಗಳು ಚಿನ್ನಾಭರಣ ಮಳಿಗೆಯೊಂದರ ಕಬ್ಬಿಣದ ಶಟರ್ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬನ ಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬನಶಂಕರಿ 2ನೇ ಹಂತದ ಬಿಡಿಎ ಕಾಂಪ್ಲೆಕ್ಸ್ ಎದುರಿನ 21ನೇ ಮುಖ್ಯರಸ್ತೆಯ ರಾಜಲಕ್ಷ್ಮೀ ಜ್ಯುವೆಲ್ಲರಿ ಅಂಗಡಿಯಲ್ಲಿ ಸೆ.5ರಂದು ಮುಂಜಾನೆ 1 ಗಂಟೆಯಿಂದ 2 ಗಂಟೆ ಅಂತರದಲ್ಲಿ ಘಟನೆ ನಡೆದಿದೆ. ಜ್ಯುವೆಲ್ಲರಿ ಅಂಗಡಿ ಮಾಲಿಕ ಗೋದಾರಾಮ್ ಚೌಧರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸೆ.5ರಂದು ಮುಂಜಾನೆ ಸುಮಾರು 1 ಗಂಟೆಗೆ ಇಬ್ಬರು ಅಪರಿಚಿತರು ಜ್ಯುವೆಲ್ಲರಿ ಅಂಗಡಿ ಬಳಿ ಬಂದಿದ್ದು, ಬಳಿಕ ತಾವು ತಂದಿದ್ದ ಚಿಕ್ಕ ಬ್ಯಾಗ್ನಿಂದ ಗ್ಯಾಸ್ ಕಟರ್ ತೆಗೆದು ಅಂಗಡಿ ಶೆಟರ್ ಬಾಗಿಲು ಕತ್ತರಿಸಲು ಮುಂದಾಗಿದ್ದಾರೆ. ಇದೇ ಸಮಯಕ್ಕೆ ಪಕ್ಕದ ಅಂಗಡಿಯಲ್ಲಿ ಮಲಗಿದ್ದ ಯುವಕರು ಎಚ್ಚರಗೊಂಡು ಹೊರಗೆ ಬಂದು ನೋಡಿದಾಗ ಅಂಗಡಿ ಬಾಗಿಲ ಬಳಿ ಬೆಳಕು ಕಾಣಿಸಿದೆ. ಈ ವೇಳೆ ಆ ಯುವಕರು ಕಳ್ಳ ಕಳ್ಳ ಎಂದು ಜೋರಾಗಿ ಕೂಗಿದ್ದಾರೆ. ಅದರಿಂದ ಗಾಬರಿಗೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಅಂಗಡಿ ಶೆಟರ್ ಬಾಗಿಲು ಕತ್ತರಿಸುವ ದೃಶ್ಯ ಘಟನಾ ಸ್ಥಳದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಜ್ಯುವೆಲ್ಲರಿ ಅಂಗಡಿ ಮಾಲಿಕ ನೀಡಿದ ದೂರಿನ ಮೇರೆಗೆ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.