BJP: ಬಿಜೆಪಿಗೆ ಮತ್ತೆ ರಾಜ್ಯ ಸಂಘಟನಾ ಕಾರ್ಯದರ್ಶಿ ನೇಮಕ?


Team Udayavani, Sep 15, 2024, 12:46 PM IST

6

ಬೆಂಗಳೂರು: ಪಕ್ಷದಲ್ಲಿ ಬಣ ರಾಜಕಾರಣ ಮಡುಗಟ್ಟುತ್ತಿರುವ ಹಿನ್ನೆಲೆಯಲ್ಲಿ ನಾಯಕರಿಗೆ ಮೂಗುದಾರ ಹಾಕಿ ಸಂಘಟನೆಯನ್ನು ಹಿಡಿತಕ್ಕೆ ತರುವುದಕ್ಕಾಗಿ ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನು ನಿಯೋಜನೆ ಮಾಡುವುದಕ್ಕೆ ಆರ್‌ಎಸ್‌ ಎಸ್‌ ಮುಖಂಡರು ಚಿಂತನೆ ನಡೆಸಿದ್ದಾರೆ.

ಈ ಮೂಲಕ ಹೊಯ್ದಾಟವನ್ನು ನಿಯಂತ್ರಣಕ್ಕೆ ತರುವುದಕ್ಕೆ ಸಂಘ ನಿರ್ಧರಿಸಿದೆ. ಒಂದು ವರ್ಷದ ಹಿಂದಷ್ಟೆ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಜಿ.ವಿ. ರಾಜೇಶ್‌ ಅವರನ್ನು ಸಂಘ ಪರಿವಾರ “ನಿಗೂಢ’ ಎಂಬಂತೆ ವಾಪಸ್‌ ಕರೆಸಿಕೊಂಡು ಸಾಮರಸ್ಯದ ಜವಾಬ್ದಾರಿ ನೀಡಿತ್ತು. ಸಂಘದ ಎಲ್ಲ ವಿಭಾಗದಲ್ಲಿ ಮಾಡಿದ ಬದಲಾವಣೆಯ ಜತೆಯಲ್ಲಿ ರಾಜೇಶ್‌ ಕೂಡಾ ಬಿಜೆಪಿಯಿಂದ ನಿರ್ಗಮಿಸಿದ್ದರು. ಅವರನ್ನು ನಿಯೋಜಿಸಿದಷ್ಟೇ ವೇಗವಾಗಿ ವಾಪಸ್‌ ಕರೆಸಿ ಕೊಂಡಿ ದ್ದೇಕೆ? ಎಂಬುದು ಬಿಜೆಪಿಯಲ್ಲಿ ಬಗೆಹರಿಯದ ರಹಸ್ಯವಾಗಿಯೇ ಉಳಿದಿದೆ.

ಇದರ ಜತೆಗೆ ಪಕ್ಷದ ಸಂಘಟನಾತ್ಮಕ ನೆಲೆಯಲ್ಲಿ ಆಯಕಟ್ಟಿನದು ಎಂದು ಪರಿ ಗಣಿಸಲ್ಪಟ್ಟ ವಿಭಾಗೀಯ ಕಾರ್ಯದರ್ಶಿ ಹುದ್ದೆಯನ್ನೂ ಖಾಲಿ ಬಿಡಲಾಗಿದ್ದು, ಈಗ ಆ ಎಲ್ಲ ಸ್ಥಾನ ಗಳನ್ನು ಭರ್ತಿ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ.

ಮುನ್ಸೂಚನೆ ಕೊಟ್ಟ ಸಂಘ: ಬಿಜೆಪಿ ಉನ್ನತ ಮೂಲಗಳ ಪ್ರಕಾರ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆರ್‌ಎಸ್‌ಎಸ್‌ ಪ್ರಚಾರಕರನ್ನು ಸದ್ಯಕ್ಕೆ ನಿಯೋಜನೆ ಮಾಡುವುದು ಬೇಡ ಎಂಬ ನಿಲುವನ್ನು ಸಂಘದ ಹಿರಿಯರು ಈ ಹಿಂದೆ ತೆಗೆದುಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಈ ಹುದ್ದೆಯನ್ನು ಇಷ್ಟು ದಿನಗಳ ಕಾಲ ಖಾಲಿ ಇಟ್ಟಿರಲಿಲ್ಲ. ಆದರೆ, ಪಕ್ಷದ ನಾಯಕರ ಮಧ್ಯೆ ಸೃಷ್ಟಿಯಾಗಿರುವ ಭಿನ್ನಮತ ದಿನೇ ದಿನೆ ಹೆಚ್ಚುತ್ತಿರುವುದರಿಂದ ದಿನನಿತ್ಯದ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡುವುದಕ್ಕೆ ಒಬ್ಬ ಹಿರಿಯರ ಅಗತ್ಯವಿದೆ ಎಂಬ ನಿಲುವಿಗೆ ಸಂಘದ ಹಿರಿಯರು ಬಂದಿದ್ದಾರೆ. ಜತೆಗೆ ಸಂಘಟನಾತ್ಮಕ ಚಟುವಟಿಕೆಯೂ ಬಿಜೆಪಿಯಲ್ಲಿ ಕುಸಿತ ಕಾಣುತ್ತಿದೆ ಎಂದು ಆತಂಕಗೊಂಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ 2 ದಿನಗಳ ಹಿಂದೆ ನಡೆದ ಸಭೆಯಲ್ಲಿ ಸಂಘದ ಹಿರಿಯರು ಬೇಸರವನ್ನೂ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

“ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಲ್ಲದೆ ಹೋದರೂ ಪಕ್ಷ ಮುಂದೆ ಬರುತ್ತದೆ ಎಂಬ ಅತಿಯಾದ ವಿಶ್ವಾಸವನ್ನು ನಾಯಕರು ಮೈಗೂಡಿಸಿಕೊಂಡಿದ್ದಾರೆ. ಇಂತಹ ಪ್ರವೃತ್ತಿ ಯಿಂದಲೇ ಪಕ್ಷ ಹಾಗೂ ಸಂಘಟನೆಯ ಮಧ್ಯೆ ಬಿರುಕು ಕಾಣಿಸಿಕೊಂಡಿದೆ. ಇದಕ್ಕೆ ಇಲ್ಲಿಯೇ ಬ್ರೇಕ್‌ ಹಾಕೋಣ’ ಎಂದು ಹೇಳುವ ಮೂಲಕ ಮತ್ತೆ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನು ನಿಯೋಜನೆ ಮಾಡುವ ಮುನ್ಸೂಚನೆ ನೀಡಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಅಧ್ಯಕ್ಷರಿಗೆ ಬೇಡವಾಗಿತ್ತೇ ಸಂಘಟನಾ ಕಾರ್ಯದರ್ಶಿ?: ಸಂಘದ ಅಲಿಖೀತ ನಿಯಮದ ಪ್ರಕಾರ ಅವಧಿ ಮುಕ್ತಾಯಕ್ಕೆ ಮುನ್ನ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ. ಆದರೆ, ಯತ್ನಾಳ್‌ ಸೇರಿದಂತೆ ಹಿರಿಯರು ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ 2 ಬಣದ ಮಧ್ಯೆ ಸಮತೋಲನ ತರುವುದಕ್ಕಾಗಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಭರ್ತಿ ಮಾಡುವುದಕ್ಕೆ ಸಂಘ ಮುಂದಾಗಿದೆ. ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಬಾರದೆಂಬ ನಿಲುವನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಂದಿದ್ದಾರೆ. ಒಂದು ಮನೆಯಲ್ಲಿ 2 ಅಧಿಕಾರ ಕೇಂದ್ರಗಳಿದ್ದರೆ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲ ಸೃಷ್ಟಿಯಾಗುತ್ತದೆ. ರಾಜ್ಯಾಧ್ಯಕ್ಷರ ಯಶಸ್ಸಿನಲ್ಲಿ ಸಂಘಟನಾ ಕಾರ್ಯದರ್ಶಿ “ದಾಯಭಾಗ’ ಬೇಡುತ್ತಾನೆಂಬ ಕಾರಣಕ್ಕೆ ಈ ಹುದ್ದೆ ಭರ್ತಿ ಮಾಡುವುದು ಬೇಡ ಎಂಬ ನಿಲುವು ಅವರದ್ದಾಗಿತ್ತು ಎನ್ನಲಾಗಿದೆ.

  ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

suicide (2)

Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.