![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 15, 2024, 1:04 PM IST
ರಾಯಚೂರು: ಮನೆ ಬಾಗಿಲು ಮುರಿದು ನುಗ್ಗಿದ ದುಷ್ಕರ್ಮಿಗಳು ಮನೆಯವರನ್ನು ಕಟ್ಟಿ ಹಾಕಿ ಚಿನ್ನಾಭರಣ, ಬೆಳ್ಳಿ, ಎರಡು ಲಕ್ಷ ರೂ. ನಗದು ದರೋಡೆ ಮಾಡಿದ ಘಟನೆ ರವಿವಾರ (ಸೆ.15) ಬೆಳಗಿನ ಜಾವ ನಡೆದಿದೆ.
ನಗರದ ಶ್ರೀ ಲಕ್ಷ್ಮಿ ನರಸಿಂಹ ಬಡಾವಣೆಯ ಬಸನಗೌಡ ಎಂಬುವವರ ಮನೆಯಲ್ಲಿ ದರೋಡೆ ಘಟನೆ ನಡೆದಿದೆ.
ಚಾಕು ತೋರಿಸಿ ಬೆದರಿಸಿದ ದರೋಡೆಕೋರರು 22 ತೊಲೆ ಬಂಗಾರ, 2 ಕೆಜಿ ಬೆಳ್ಳಿ, ಎರಡು ಲಕ್ಷ ನಗದು ದರೋಡೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಕೃತ್ಯ ಪೂರ್ವ ನಿಯೋಜಿತವಾಗಿರಬಹುದು ಎಂದು ಅಂದಾಜಿಸಲಾಗಿದೆ.
ದರೋಡೆಕೋರರ ಗ್ಯಾಂಗ್ ಕಪ್ಪು ಬಟ್ಟೆ ಧರಿಸಿ ದರೋಡೆಗೆ ಇಳಿದಿದೆ. ದರೋಡೆಗೆ ನಗ್ಗುವ ಮುನ್ನ ಆ ರಸ್ತೆಯ ಅಕ್ಕಪಕ್ಕದ ಮನೆಗಳಿಗೆ ಹೊರಗಿಂದ ಲಾಕ್ ಮಾಡಿದ್ದಾರೆ. ಅಲ್ಲದೆ ಆ ರಸ್ತೆಯಲ್ಲಿನ ಕಂಬಗಳ, ಮನೆಗಳ ಮುಂದಿನ ಲೈಟ್ ಗಳನ್ನು ಆಫ್ ಮಾಡಿದ್ದಾರೆ. ದರೋಡೆಕೋರರ ಈ ಒಂದು ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪಶ್ಚಿಮ ಠಾಣೆ ಪೊಲೀಸರು ಸ್ಥಳದಲ್ಲಿ ತನಿಖೆ ಆರಂಭಿಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದಲೂ ಶೊಧಕಾರ್ಯ ನಡೆದಿದ್ದು, ಈ ಒಂದು ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.