ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ


Team Udayavani, Sep 15, 2024, 1:13 PM IST

8-koratagere

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಗ್ರಾಮದ ಅಂಚೆ ಕಚೇರಿ ಸಮೀಪವಿರುವ ಅರಳಿಮರ ಬಲಿಗಾಗಿ ಕಾದು ಕುಳಿತಿದ್ದು, ಪ್ರತಿನಿತ್ಯ ಸಾರ್ವಜನಿಕರು ಸಂಚರಿಸುವ ಜಾಗದಲ್ಲಿರುವ ಮರದಿಂದ ಅಪಾಯ ತಂದಿದೆ.

ಹೊಳವನಹಳ್ಳಿ ಗ್ರಾಮದ ಕ್ಯಾಮೇನಹಳ್ಳಿ ರಸ್ತೆಯಲ್ಲಿರುವ ಅಂಚೆ ಕಚೇರಿ, ಕಂದಾಯ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ನಿರ್ಮಾಣ ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕ ಹಾಗೂ ನೀರನ್ನು ಶೇಖರಿಸುವ ಓವರ್ ಟ್ಯಾಂಕ್ ಕೂಡ ಈ ಅರಳಿ ಮರಕ್ಕೆ ಬಲಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಅರಳಿ ಮರ ನೂರಾರು ವರ್ಷಗಳ ಹಳೆಯ ಮರವಾಗಿದ್ದು, ಸುಮಾರು 3 ಅಡಿ ವಾಲಿದೆ. ಮರದ ಬೇರುಗಳು ತುಂಡಾಗಿ ಭೂಮಿ ಬಾಯಿ ಬಿಟ್ಟಿದೆ ಎನ್ನಲಾಗಿದೆ.

ಪ್ರತಿನಿತ್ಯ ಶುದ್ದ ಕುಡಿಯುವ ನೀರಿನ ಘಟಕಕ್ಕೆ, ಅಂಚೆ ಕಚೇರಿಗೆ ಹಾಗೂ ಕಂದಾಯ ಇಲಾಖೆಗೆ ನೂರಾರು ಸಾರ್ವಜನಿಕರು ಆಗಮಿಸುತ್ತಾರೆ. ಮರವನ್ನು ಬೇಗ ತೆರವುಗೊಳಿಸದಿದ್ದರೆ ಸರ್ಕಾರಿ ಕಟ್ಟಡದ ಜೊತೆಗೆ ಸಾರ್ವಜನಿಕರು ಬಲಿಯಾಗುವ ಸಾಧ್ಯತೆ ಹೆಚ್ಚಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಅರಳಿ ಮರವನ್ನು ತೊರವುಗೊಳಿಸಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗ್ರಾ.ಪಂ. ಮಾಜಿ ಸದಸ್ಯೆ ಜಯರಾಮು ಮಾತನಾಡಿ, ಅರಳಿಮರ ಸಾಕಷ್ಟು ಹಳೆಯದಾಗಿದ್ದು, ಬೆಳಿಗ್ಗೆ ಮರದ ಸಮೀಪ ನೋಡಿದಾಗ ಬೇರುಗಳು ತುಂಡಾಗಿ ಭೂಮಿ ಬಾಯಿ ಬಿಟ್ಟಿದೆ. ತಕ್ಷಣ ಗ್ರಾ.ಪಂ. ಪಿಡಿಒ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಗೆ ಮಾಹಿತಿ ಮಾಡಿದ್ದಾರೆ. ಈ ಮರದ ಕೆಳಗೆ ನೂರಾರು ಜನರು ಓಡಾಡುತ್ತಾರೆ. ಮುಂದೆ ಯಾವುದೇ ಅಹಿತಕರ ಘಟನೆ ಸಂಭವಿಸುವ ಮುನ್ನ ಅರಳಿ ಮರವನ್ನು ತೆರವುಗೊಳಿಸಿ ಎಂದರು.

ಸ್ಥಳೀಯರಾದ ಶ್ರೀನಿವಾಸ್ ಮಾತನಾಡಿ, ನಾವು ದಿನ ಅರಳಿ ಮರದ ಕೆಳಗಿರುವ ಶುದ್ದ ಕುಡಿಯುವ ನೀರಿನ ಘಟಕದಿಂದ ನೀರು ತರತ್ತೇವೆ. ಈಗ ಮರ ವಾಲಿರುವುದರಿಂದ ನೀರು ತರಲು ಭಯವಾಗುತ್ತಿದೆ. ಈಗ ಅಲ್ಲಿಗೆ ನೀರು ತರಲು ಹೋಗುವ ದಾರಿಯನ್ನು ಕೂಡಾ ಮುಚ್ಚಲಾಗಿದೆ. ಅರಳಿ ಮರವನ್ನು ತೆರವುಗೊಳಿಸುವವರೆಗೂ ನಮಗೆ ಶುದ್ದ ಕುಡಿಯುವ ನೀರು ಇಲ್ಲ. ಅದ್ದರಿಂದ ಮರವನ್ನು ಆದಷ್ಟು ಬೇಗ ತೆರವುಗೊಳಿಸಿ ಎಂದು ಮನವಿ ಮಾಡಿದರು.

ಗ್ರಾ.ಪಂ. ಪಿಡಿಒ ವಸಂತ ಕುಮಾರ್ ಮಾತನಾಡಿ, ನನಗೆ ಬೆಳಿಗ್ಗೆ ಸಾರ್ವಜನಿಕರಿಂದ ಮರ ವಾಲಿದೆ ಎಂದು ಕರೆ ಬಂತು. ತಕ್ಷಣ ಸ್ಥಳಕ್ಕೆ ಆಗಮಿಸಿದೆ. ಮರ 2-3 ಅಡಿ ಅಂಚೆ ಕಚೇರಿಯ ಕಡೆ ವಾಲಿದೆ. ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ತುರ್ತಾಗಿ ಅರಳಿ ಮರವನ್ನು ತೆರವುಗೊಳಿಸುವಂತೆ ಪತ್ರದ ಮೂಲಕವೂ ಬರೆದಿದ್ದೇನೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆ ಮರದ ಕೆಳಗೆ ಹೋಗದಂತೆ ರಸ್ತೆ ಮುಚ್ಚಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಹಾಗೂ ಗ್ರಾ.ಪಂ. ಅಧಿಕಾರಿಗಳು ಅರಳಿ ಮರ ಬೀಳುವಂತ ಪರಿಸ್ಥಿತಿ ಇರುವುದರಿಂದ ಮರವನ್ನು ತೆರವುಗೊಳಿಸುವಂತೆ ದೂರವಾಣಿ ಮೂಲಕ ತಿಳಿಸಿದ್ದು, ಮೇಲಾಧಿಕಾರಿಗಳ ಗಮನಕ್ಕೆ ತಂದು ಅದಷ್ಟು ಬೇಗ ಮರವನ್ನು ತೆರವುಗೊಳಿಸಲಾಗುವುದು. ಮರವನ್ನು ತೆರವುಗೊಳಿಸುವವರೆಗೆ ಸಾರ್ವಜನಿಕರು ಮರದ ಕೆಳಗಡೆ ಹೋಗಬಾರದು ಎಂದು ಮನವಿ. -ಸುರೇಶ್, ವಲಯ ಅರಣ್ಯಾಧಿಕಾರಿ, ಕೊರಟಗೆರೆ

ಟಾಪ್ ನ್ಯೂಸ್

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.