Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ


Team Udayavani, Sep 15, 2024, 1:48 PM IST

Maravanthe- ತ್ರಾಸಿ ಬೀಚ್‌: ಬಂಡೆಗಳು ಜಾರುತ್ತಿದ್ದರೂ ಪ್ರವಾಸಿಗರ ಮೋಜಿನಾಟ

ಕುಂದಾಪುರ: ವಿಶ್ವ ವಿಖ್ಯಾತ ತ್ರಾಸಿ – ಮರವಂತೆ ಬೀಚ್‌ ಮಳೆಗಾಲದಲ್ಲಿ ಪ್ರವಾಸಿಗರನ್ನು ಹೆಚ್ಚಾಗಿಯೇ ಸೆಳೆಯುತ್ತಿದೆ. ಹೆದ್ದಾರಿಗೆ ಹೊಂದಿಕೊಂಡಿರುವ ಬೀಚ್‌ ಆಕರ್ಷಣೀಯ ಕೇಂದ್ರ ಬಿಂದು. ಆದರೆ ಈಗ ನಿರಂತರ ಮಳೆಯಿಂದಾಗಿ ತಡೆಗೋಡೆಗೆ ಹಾಕಲಾದ ಬಂಡೆಗಳಲ್ಲಿ ಪಾಚಿ ಕಟ್ಟಿದ್ದು, ಅದರಲ್ಲಿಯೇ ನಿಂತು ಪ್ರವಾಸಿಗರು ಮೋಜಿನಾಟ ಆಡುತ್ತಿರುವುದು ಆತಂಕ ಸೃಷ್ಟಿಸಿದೆ.

ಹೆದ್ದಾರಿಯಲ್ಲಿ ಸಂಚರಿಸುವ ಪ್ರವಾಸಿಗರು ಇಲ್ಲಿನ ಸೌಂದರ್ಯಕ್ಕೆ ಮನಸೋತು, ವಾಹನಗಳಿಂದ ಇಳಿದು ಬರುವುದು ಸರ್ವೇ ಸಾಮಾನ್ಯ. ಆದರೆ ಈಗಂತೂ ಕೆಲವರು ಜಾರುತ್ತಿರುವ ಬಂಡೆಗಳಿಗೂ ಇಳಿದು, ಎಚ್ಚರಿಕೆಗಾಗಿ ಕಟ್ಟಿರುವ ರಿಬ್ಬನ್‌ಗಳನ್ನು ದಾಟಿ, ಮುಂದೆ ತೆರಳಿ, ಸೆಲ್ಫಿ, ಅಲೆಗಳ ಜತೆಗೆ ಹುಚ್ಚಾಟ ನಡೆಸುತ್ತಿರುವುದು ಕಂಡು ಬರುತ್ತಿದೆ. ಇನ್ನು ಕೆಲವರಂತೂ ನೀರಿಗೆ ಇಳಿದು ಆಟ ಆಟವಾಡುವ ದೃಶ್ಯವೂ ಕಾಣುತ್ತಿದೆ.

ತ್ರಾಸಿ-ಮರವಂತೆ ಬೀಚ್‌ನಲ್ಲಿ ಅಂದಾಜು 90 ಕೋ. ರೂ. ವೆಚ್ಚದಲ್ಲಿ ನಡೆದಿರುವ ‘ಟಿ’ಆಕಾರದ ತಡೆಗೋಡೆ ಮರವಂತೆ ಬೀಚ್‌ನ ಸೌಂದರ್ಯವನ್ನು ಮತ್ತಷ್ಟು ಇಮ್ಮಡಿಗಳಿಸಿದೆ. ಈ ಮಾರ್ಗವಾಗಿ ಸಂಚರಿಸುವವರು ಒಂದರೆಕ್ಷಣ ನಿಂತು, ಕಡಲ ಅಲೆಗಳ ಸೌಂದರ್ಯವನ್ನು ಆಸ್ವಾದಿಸುವುದು ಸಾಮಾನ್ಯ. ಆದರೆ ಟೆಟ್ರಾಫೈಡ್‌ನಿಂದ ನಿರ್ಮಿಸಲಾದ ತಡೆಗೋಡೆಯಲ್ಲಿ ಪಾಚಿಯಿಂದಾಗಿ ಜಾರುತ್ತಿದ್ದು, ಅಲೆ ಮತ್ತು ಕಡಲ ಸೌಂದರ್ಯ ಸವಿಯಲು ಇಲ್ಲಿ ಹೆಜ್ಜೆ ಇರಿಸುವ ಪ್ರವಾಸಿಗರು ಎಚ್ಚರ ವಹಿಸುವುದು ಅತ್ಯವಶ್ಯಕ.

ಎಚ್ಚರಿಕೆ ವಹಿಸಿ..
ತ್ರಾಸಿ- ಮರವಂತೆಯಲ್ಲಿ ತಡೆಗೋಡೆಯ ಬಂಡೆಗಳು ಪಾಚಿಗಟ್ಟಿ, ಜಾರುತ್ತಿರುವುದರಿಂದ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅತೀ ಅವಶ್ಯಕ. ಈ ಹಿಂದೆಯೇ ಎಚ್ಚರಿಕೆ ಫಲಕ, ರಿಬ್ಬನ್‌ಗಳನ್ನು ಕಟ್ಟಲಾಗಿದೆ. ಪ್ರವಾಸಿ ಮಿತ್ರರನ್ನು ನಿಯೋಜಿಸಿದ್ದೇವೆ. ಇನ್ನಷ್ಟು ಅಗತ್ಯ ಕ್ರಮಗಳನ್ನು ಆದಷ್ಟು ಶೀಘ್ರ ಕೈಗೊಳ್ಳಲಾಗುವುದು.
– ಕುಮಾರ ಸಿ.ಯು., ಸಹಾಯಕ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ ಉಡುಪಿ

ಎಚ್ಚರಿಕೆಗಿಲ್ಲ ಬೆಲೆ
ತ್ರಾಸಿ-ಮರವಂತೆ ಬೀಚ್‌ನುದ್ದಕ್ಕೂ ಪೊಲೀಸ್‌ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಎಚ್ಚರಿಕೆಯ ನಾಮಫಲಕ, ಕೆಲವು ಸಂಘ-ಸಂಸ್ಥೆಗಳ ವತಿಯಿಂದ ಕೆಲ ತಡೆಗೋಡೆಗಳಿಗೆ ಕೆಂಪು ರಿಬ್ಬನ್‌ಗಳನ್ನು ಅಳವಡಿಸಲಾಗಿದೆ. ಆದರೆ ಇಲ್ಲಿಗೆ ಬರುವ ಪ್ರವಾಸಿಗರು ಮಾತ್ರ ಈ ಎಚ್ಚರಿಕೆ ಫಲಕಕ್ಕೆ ಬೆಲೆಯೇ ಕೊಡುತ್ತಿಲ್ಲ. ಇದನ್ನು ತಿಳಿ ಹೇಳಲು ಅಥವಾ ಕಲ್ಲು ಬಂಡೆಗಳಿಗೆ ಇಳಿಯದಂತೆ ಎಚ್ಚರಿಸಲು ಇಲ್ಲಿ ಬೆರಳಣಿಕೆಯಷ್ಟು ಪ್ರವಾಸಿ ಮಿತ್ರರು ಮಾತ್ರವಿದ್ದಾರೆ. ಆರೇಳು ಕಿ.ಮೀ. ದೂರದ ಕಡಲ ಕಿನಾರೆಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯ ಪ್ರವಾಸಿ ಮಿತ್ರರು, ಹೆಚ್ಚಿನ ಪ್ರವಾಸಿಗರಿರುವ ವೇಳೆ ಪೊಲೀಸರನ್ನು ನಿಯೋಜಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಳೆದ ವರ್ಷ ದುರಂತ…
ಜೂನ್‌ನಿಂದ ಈವರೆಗೂ ನಿರಂತರ ಮಳೆಯಾಗುತ್ತಿರುವುದರಿಂದ, ಈ ಬಾರಿ ಹಿಂದಿನ ವರ್ಷಗಳಿಗಿಂತಲೂ ಹೆಚ್ಚಿನ ಮಳೆಯಾಗಿದ್ದರಿಂದ ಈ ತಡೆಗೋಡೆಯ ಕಲ್ಲುಗಳು ಅಲೆಗಳ ಹೊಡೆತಕ್ಕೆ ಸಿಲುಕಿ ಹಸುರು ಪಾಚಿಗಳಿಂದ ಆವರಿಸಿಕೊಂಡಿದೆ. ಬಂಡೆಗಳಲ್ಲಿ ದಪ್ಪನಾದ ಪಾಚಿ ಕುಳಿತಿದೆ. ಕಡಲ ಸೌಂದರ್ಯ ವೀಕ್ಷಿಸಲೆಂದು ಬರುವ ಮಂದಿ ತಡೆಗೋಡೆ ಕಲ್ಲಿನ ಮೇಲೆ ಹೆಜ್ಜೆಯಿರಿಸಿ ಮೈಮರೆತರೆ ಅಪಾಯವನ್ನು ಮೈ ಮೇಲೆ ಎಳೆದುಕೊಂಡಂತೆಯೇ ಸರಿ. ಇದಲ್ಲದೆ ಈ ಕಲ್ಲು ಬಂಡೆಗಳಿಗೆ ಭಾರೀ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತವೆ. ಇಲ್ಲಿ ಸುರಕ್ಷತಾ ಕ್ರಮವಾಗಿ ಕಡಲಿಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ಆದರೂ ದೂರದ ಊರುಗಳಿಂದ ಬರುವ ಪ್ರವಾಸಿಗರು, ಎಚ್ಚರಿಕೆಯನ್ನೂ ಲೆಕ್ಕಿಸದೇ, ನೀರಿಗಿಳಿದು, ಆಟ ಆಡುತ್ತಿರುವುದು ಆತಂಕ ಮೂಡಿಸಿದೆ. ಇಲ್ಲಿನ ಕಡಲ ತೀರದಲ್ಲಿ ನೀರಿಗಿಳಿಯುವುದು ಹೆಚ್ಚು ಅಪಾಯಕಾರಿ. ಕಳೆದ ವರ್ಷ ಇದೇ ಮರವಂತೆ ಬೀಚ್‌ನಲ್ಲಿ ಯುವಕನೊಬ್ಬ ನೀರಿಗಿಳಿದು ಮೊಬೈಲ್‌ನಲ್ಲಿ ಫೋಟೋ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಅಲೆಗಳ ಅಬ್ಬರಕ್ಕೆ ಕೊಚ್ಚಿಕೊಂಡು ಹೋದ ದುರಂತ ಘಟನೆಯೂ ನಡೆದಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.