Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

ಅಡ್ಡಾದಿಡ್ಡಿ ಓಡಾಡುವ ವಾಹನಗಳು; ಪಾದಚಾರಿಗಳಿಗೆ ರಸ್ತೆ ದಾಟುವುದು ಸವಾಲು ಅಪಘಾತಗಳಿಗೆ ಆಹ್ವಾನ

Team Udayavani, Sep 15, 2024, 2:07 PM IST

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

ಕೊಟ್ಟಾರ ಚೌಕಿ: ರಾಷ್ಟ್ರೀಯ ಹೆದ್ದಾರಿ ಮೂಲಕ ಉಡುಪಿ ಭಾಗದಿಂದ ಮಂಗಳೂರು ನಗರ ಪ್ರವೇಶಿಸುವ ಪ್ರಮುಖ ಜಂಕ್ಷನ್‌ ಆಗಿರುವ ಕೊಟ್ಟಾರ ಚೌಕಿಯಲ್ಲಿ ರಸ್ತೆ ಅಭಿವೃದ್ಧಿಯಾದರೂ, ಸಂಚಾರ ವ್ಯವಸ್ಥೆಯಲ್ಲಿರುವ ಗೊಂದಲದಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಾಹನಗಳ ಅಡ್ಡಾದಿಡ್ಡಿ ಸಂಚಾರ, ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳು, ಎಲ್ಲಿ ದಾಟಬೇಕು ಎಂದು ಗೊಂದಲಕ್ಕೆ ಒಳಗಾಗುವ ಪಾದಚಾರಿಗಳಿಂದಾಗಿ  ಕೊಟ್ಟಾರ ಚೌಕಿ  ಅಪಘಾತ ವಲಯವಾಗಿಯೂ ಬದಲಾಗಿದೆ.  ಮೊದಲ ಬಾರಿ ವಾಹನ ಚಲಾಯಿಸಿಕೊಂಡು ಬರುವವರಂತೂ ಅತಿ ಹೆಚ್ಚು ಗೊಂದಲಕ್ಕೆ ಒಳಗಾಗುತ್ತಾರೆ.

ಪಾದಚಾರಿಗಳಿಗೆ ಅವಕಾಶವೇ ಇಲ್ಲ
ಕೊಟ್ಟಾರ ಚೌಕಿ ಪ್ರಮುಖ ಜಂಕ್ಷನ್‌ ಆಗಿರುವುದರಿಂದ ಅಂಗಡಿಗಳು, ಹೊಟೇಲ್‌, ಉದ್ಯೋಗ ಸಂಸ್ಥೆಗಳು ಎಲ್ಲವನ್ನೂ ಒಳಗೊಂಡಿದೆ. ದಿನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಇಲ್ಲಿ ಅಡ್ಡಾಡುತ್ತಾರೆ. ಆದರೆ ಹೆದ್ದಾರಿ, ಸರ್ವಿಸ್‌ ರಸ್ತೆಗಳನ್ನು ದಾಟುವುದು ಜನರಿಗೆ ತ್ರಾಸದಾಯಕವಾಗಿ ಪರಿಣಮಿಸಿದೆ. ಪಾದಚಾರಿಗಳಿಗೆ ರಸ್ತೆ ದಾಟಲು ಝೀಬ್ರಾ ಕ್ರಾಸಿಂಗ್‌ ಕೂಡಾ ಇಲ್ಲ. ಸಂಚಾರ ವಿಭಾಗದ ಪೊಲೀಸರನ್ನು ನಿಯೋಜಿಸಿದರೂ, ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡುಗಳನ್ನು ಮಾಡದ ಹೊರತು ನಿಯಂತ್ರಣ ಸಾಧ್ಯವಿಲ್ಲ. ಈ ಬಗ್ಗೆ ಹಲವು ಸಭೆಗಳಲ್ಲಿ ವಿಚಾರ ಪ್ರಸ್ತಾಪವಾದರೂ, ಸಂಬಂಧಪಟ್ಟವರು ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಏನೇನು ಸಮಸ್ಯೆ?

ಸದ್ಯನಗರದ ಕಡೆಯಿಂದ ಕೂಳೂರು ಕಡೆಗೆ ತೆರಳುವ ವಾಹನಗಳು ಮಾತ್ರ ಯಾವುದೇ ಅಡ್ಡಿ ಆತಂಕ ಇಲ್ಲದೆ ನೇರವಾಗಿ ಸಾಗಬಹುದಾಗಿದೆ.

ಕೊಟ್ಟಾರದಿಂದ ಕುಂಟಿಕಾನ ಕಡೆಗೆ, ಮಾಲಾಡಿ ರಸ್ತೆಗೆ ತೆರಳುವ ವಾಹನಗಳು ಬಲಕ್ಕೆ ತಿರುಗಿದ ಕೂಡಲೇ ಹೆದ್ದಾರಿಯಲ್ಲಿ ಕೂಳೂರು ಕಡೆಯ ವಾಹನ ಮುಖಾಮುಖೀಯಾಗುತ್ತವೆ. ಜತೆಗೆ ಕೂಳೂರು ಕಡೆಯಿಂದ ನಗರ ಪ್ರವೇಶಿಸುವ ವಾಹನಗಳೂ ಎದುರಾಗುತ್ತವೆ.

ಕುಂಟಿಕಾನ ಕಡೆಯಿದ ಬಂದು ಕೊಟ್ಟಾರ ಚೌಕಿ ಫ್ಲೈ ಓವರ್‌ನ ಎಡಬದಿಯ ಸರ್ವಿಸ್‌ ರಸ್ತೆಯಲ್ಲಿ ಬರುವ ಕೆಲವು ವಾಹನಗಳು ಕೂಳೂರು ಕಡೆಗೆ ತೆರಳಲು ಮುಖ್ಯರಸ್ತೆಯನ್ನು ದಾಟಿ ಹೋಗುತ್ತಿದ್ದು, ಇದರಿಂದಲೂ ಅಪಘಾತಕ್ಕೆ ಕಾರಣವಾಗುವ ಸಾಧ್ಯತೆಯೇ ಹೆಚ್ಚು.

ವಿರುದ್ಧ ದಿಕ್ಕಿನಲ್ಲಿ ಸಂಚಾರದ ಅಪಾಯ
ಮಾಲೆಮಾರ್‌ ಕಡೆಯಿಂದ ನಗರಕ್ಕೆ ಬರುವ ಬಹುತೇಕ ವಾಹನಗಳು ಕುಂಟಿಕಾನವಾಗಿ ಸಾಗುವ ಬದಲು, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಕೊಟ್ಟಾರ ಚೌಕಿಯಲ್ಲಿ ಹೆದ್ದಾರಿ ದಾಟಿ ಮುಂದೆ ಸಾಗುತ್ತದೆ. ಮುಖ್ಯವಾಗಿ ಕಾರು, ಆಟೋ, ದ್ವಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ವಿರುದ್ಧ ದಿಕ್ಕಿನಲ್ಲಿಯೇ ಸಂಚರಿಸುವುದು ಕಂಡುಬರುತ್ತದೆ.

ಕೊಟ್ಟಾರ ಚೌಕಿ ಜಂಕ್ಷನ್‌ನಲ್ಲಿ ವಾಹನ ಸಂಚಾರ ವ್ಯವಸ್ಥೆ ಸುಧಾರಣೆಗೆ ಸಂಬಂಧಿಸಿದಂತೆ ಹೆದ್ದಾರಿ ಇಲಾಖೆ, ಮಹಾನಗರ ಪಾಲಿಕೆಯವರ ಸಹಕಾರದಲ್ಲಿ ಕ್ರಮ ವಹಿಸಲಾಗುವುದು. ಯಾವ ರೀತಿ ಸಂಚಾರ ಮಾರ್ಪಾಡು ಮಾಡಿದರೆ ಗೊಂದಲ ನಿವಾರಿಸಬಹುದು ಎನ್ನುವ ಬಗ್ಗೆ ಸಾರ್ವಜನಿಕರೂ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು.- ಬಿ.ಪಿ. ದಿನೇಶ್‌ ಕುಮಾರ್‌, ಡಿಸಿಸಿ ಅಪರಾಧ ಮತ್ತು ಸಂಚಾರ ವಿಭಾಗ

ಏನೇನು ಆಗಬೇಕಿದೆ?

  • ಜಂಕ್ಷನ್‌ ಭಾಗದಲ್ಲಿ ಸಿಗ್ನಲ್‌ ಲೈಟ್‌ಗಳ ಅಳವಡಿಕೆ
  • ಪಾದಚಾರಿಗಳಿಗೆ ಝೀಬ್ರಾ ಕ್ರಾಸಿಂಗ್‌
  • ಮಾಲೆಮಾರ್‌ ಕಡೆಯಿಂದ ಬರುವ ವಾಹನಗಳಿಗೆ ಪ್ರತ್ಯೇಕ ಸರ್ವಿಸ್‌ ರಸ್ತೆ ಬೇಕು.
  • ಹೆದ್ದಾರಿಯನ್ನು ದಾಟಿ ಹೋಗುವ ವಾಹನಗಳ ಪಥ ಬದಲಾವಣೆ ಅಗತ್ಯ

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.