Udupi: ಬಾಲಕಿಯರ ಬಾಲಮಂದಿರ ಶಿಥಿಲ;ಸೋರುವ ಕಟ್ಟಡ; ಶೌಚಾಲಯ ವ್ಯವಸ್ಥೆಯೂ ಸರಿ ಇಲ್ಲದೆ ಪರದಾಟ


Team Udayavani, Sep 15, 2024, 2:27 PM IST

Udupi: ಬಾಲಕಿಯರ ಬಾಲಮಂದಿರ ಶಿಥಿಲ;ಸೋರುವ ಕಟ್ಟಡ; ಶೌಚಾಲಯ ವ್ಯವಸ್ಥೆಯೂ ಸರಿ ಇಲ್ಲದೆ ಪರದಾಟ

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯಾಚರಿಸುವ ನಿಟ್ಟೂರಿನ ಬಾಲಕಿಯರ ಬಾಲ ಮಂದಿರ ಕಟ್ಟಡ ಶಿಥಿಲವಾಗಿದೆ. ಈ ಕಟ್ಟಡದ ಪರಿಸ್ಥಿತಿ ಹೇಗಿದೆ ಎಂದರೆ, ಮಳೆಗಾಲದಲ್ಲಿ ನೀರು ಸೋರಿಕೆ, ಶೌಚಾಲಯ ವ್ಯವಸ್ಥೆ ಸರಿ ಇಲ್ಲದೆ ಇರುವುದರಿಂದ ಬಾಲಕಿಯರು ರಾತ್ರಿ ಮಗಲು ಬೇರೆ ಕಟ್ಟಡವನ್ನು ಆಶ್ರಯಿಸಬೇಕಾಗಿದೆ. ದೊಡ್ಡಣಗುಡ್ಡೆಯಲ್ಲಿರುವ ಬಾಲಕರ ಬಾಲಮಂದಿರಕ್ಕೂ ಸ್ವಂತ ಕಟ್ಟಡದ ವ್ಯವಸ್ಥೆ ಇಲ್ಲ.

19 ಬಾಲಕಿಯರಿದ್ದಾರೆ…
ತಂದೆ-ತಾಯಿ ಇಲ್ಲದ ಮಕ್ಕಳು, ಭಿಕ್ಷಾಟನೆ ವೇಳೆ ಸಿಕ್ಕಿಬಿದ್ದ‌ ಮಕ್ಕಳು ಸಹಿತ ವಿವಿಧ ಕಾರಣಗಳಿಂದ ಸಾಮಾಜಿಕ, ಕೌಟುಂಬಿಕ ಜೀವನದಲ್ಲಿ ಹೊರಗುಳಿದ 18 ವರ್ಷದೊಳಗಿನ ಮಕ್ಕಳಿಗೆ ಸರಕಾರದ ಬಾಲ ಮಂದಿರದಲ್ಲಿ  ಆಶ್ರಯ ನೀಡಲಾಗುತ್ತದೆ. ಪ್ರಸ್ತುತ  ನಿಟ್ಟೂರಿನ ಬಾಲಕಿಯರ ಬಾಲ ಮಂದಿರದಲ್ಲಿ ವಿವಿಧ ವಯೋಮಾನದ 19 ಮಕ್ಕಳಿದ್ದಾರೆ. ಬಾಲಕರ ಬಾಲ ಮಂದಿರದಲ್ಲಿ 8 ಮಕ್ಕಳಿದ್ದಾರೆ. ಇಲ್ಲಿ ಅವರಿಗೆ ವಸತಿ ಜತೆಗೆ ಶಿಕ್ಷಣ, ಊಟ, ಉಪಾಹಾರ, ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುತ್ತದೆ.

ರಾತ್ರಿ ಮಲಗಲು ಪರ್ಯಾಯ ವ್ಯವಸ್ಥೆ
ನಿಟ್ಟೂರಿನ ಕಟ್ಟಡ  ಮಳೆಗಾಲದಲ್ಲಿ ಸೋರುತ್ತಿತ್ತು. ಶೌಚಾಲಯ ವ್ಯವಸ್ಥೆಯು ಸಮರ್ಪಕವಾಗಿರದ ಹಿನ್ನೆಲೆಯಲ್ಲಿ ಮಕ್ಕಳ ವಾಸ್ತವ್ಯಕ್ಕೆ ಕಟ್ಟಡ ಯೋಗ್ಯವಾಗಿಲ್ಲ ಎಂಬುದನ್ನು ಅರಿತ ಮಕ್ಕಳ ರಕ್ಷಣಾಧಿಕಾರಿಗಳು, ನಿಲಯ ಅಧೀಕ್ಷಕರು ಪಕ್ಕದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ   ರಾತ್ರಿ ಮಲಗಲು ಮತ್ತು ಶೌಚಾಲಯ ವ್ಯವಸ್ಥೆ ಮಾಡಿದ್ದರು.

ಹೊಸ ಕಟ್ಟಡಕ್ಕೆ ಯೋಜನ ವರದಿ ಸಲ್ಲಿಕೆ
ಬಾಲಕರು ಮತ್ತು ಬಾಲಕಿಯರ ಬಾಲ ಮಂದಿರ ನಿರ್ಮಿಸಲು ಹೊಸ ಪ್ಲಾನ್‌ ತಯಾರಿಸಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಒಂದೇ ಜಾಗದಲ್ಲಿ 6 ಕೋ. ರೂ. ವೆಚ್ಚದಲ್ಲಿ ಎರಡು ಪ್ರತ್ಯೇಕ ಕಟ್ಟಡ ನಿರ್ಮಾಣ. ಇದರಲ್ಲಿ ಗ್ರಂಥಾಲಯ, ಸಭಾಂಗಣ, ಅಡುಗೆ ಕೋಣೆ, ಸ್ಟಡಿ ರೂಂ, ಶೌಚಾಲಯ ಮೊದಲಾದ ಮೂಲ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ತಯಾರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಕ್ಯಾನಿಂಗ್‌ ವರದಿ ಸಲ್ಲಿಕೆ
ಕಟ್ಟಡ ನಿರ್ಮಾಣಕ್ಕೆ ಪ್ಲ್ರಾನಿಂಗ್‌ ವರದಿಯನ್ನು ಇಲಾಖೆ ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಶೀಘ್ರ ಅನುದಾನ ಮಂಜೂರಾಗುವ ಸಾಧ್ಯತೆಯಿದೆ. ಸದ್ಯಕ್ಕೆ ನಿಟ್ಟೂರು ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ.
– ನಾಗರತ್ನಾ ನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಉಡುಪಿ ಜಿಲ್ಲೆ

-ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.