Kejriwal ರಾಜೀನಾಮೆ; ಮುಂದಿನ ದೆಹಲಿ ಸಿಎಂ ಯಾರು?: ಅತಿಶಿ ಪ್ರತಿಕ್ರಿಯೆ
ದಿಢೀರ್ ಘೋಷಣೆ ಉತ್ತರ ಸಿಗದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ...
Team Udayavani, Sep 15, 2024, 5:41 PM IST
ಹೊಸದಿಲ್ಲಿ: ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಮುಂದಿನ ಆಯ್ಕೆ ಯಾರು ಎಂಬ ವಿಚಾರ ಕುತೂಹಲ ಮೂಡಿಸಿದೆ. ಜಾಮೀನು ಪಡೆದು ಹೊರ ಬಂದ ಬಳಿಕ ದಿಢೀರ್ ರಾಜೀನಾಮೆ ಘೋಷಣೆಯು ಉತ್ತರ ಸಿಗದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪ್ರಮುಖವಾಗಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮೂಡಿದ್ದು, ದೆಹಲಿ ಸಚಿವೆ ಅತಿಶಿ ಕೂಡ ರಾಜೀನಾಮೆ ಘೋಷಣೆ ಕುರಿತು ಪ್ರತಿಕ್ರಿಯಿಸಿದ್ದು, ”ಆಮ್ ಆದ್ಮಿ ಪಕ್ಷದ ಸರಕಾರ ಅಧಿಕಾರದಲ್ಲಿ ಉಳಿಯುವವರೆಗೂ ಜನರಿಗಾಗಿ ಕೆಲಸ ಮಾಡುತ್ತದೆ, ಮುಂದಿನ ದೆಹಲಿ ಸಿಎಂ ಯಾರು ಎಂಬುದು ಮುಖ್ಯವಲ್ಲ” ಎಂದು ಹೇಳಿದ್ದಾರೆ.
”ಕೇಜ್ರಿವಾಲ್ ಪ್ರಾಮಾಣಿಕತೆಗೆ ಹೊಸ ಉದಾಹರಣೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಇದೇ ಮೊದಲ ಬಾರಿಗೆ ನಾಯಕರೊಬ್ಬರ ಪ್ರಾಮಾಣಿಕತೆಯ ಮೇಲೆ ನಂಬಿಕೆ ಇದ್ದರೆ ಅವರಿಗೆ ಮತ ನೀಡಿ ಎಂದು ಸಚಿವೆ ಅತಿಶಿ ಮನವಿ ಮಾಡಿದರು. ದೆಹಲಿ ಚುನಾವಣೆಗೆ ಇನ್ನೂ 6 ತಿಂಗಳಿಗಿಂತ ಕಡಿಮೆ ಸಮಯ ಇದ್ದು ಜನರು ನಿರ್ಧರಿಸುತ್ತಾರೆ” ಎಂದರು.
“ಕಳೆದ ಎರಡು ವರ್ಷಗಳಿಂದ, ಹಲವಾರು ದಾಳಿಗಳನ್ನು ನಡೆಸಲಾಯಿತು, ಆದರೆ ಅವರು ಭ್ರಷ್ಟಾಚಾರದ ಒಂದು ಪುರಾವೆಯನ್ನು ನೀಡಲು ಸಾಧ್ಯವಾಗಲಿಲ್ಲ, ಬಿಜೆಪಿಗೆ ಚುನಾವಣೆಗಳ ಭಯವಿದೆ, ಕೇಜ್ರಿವಾಲ್ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದು ಹೇಗೆ ಎಂಬುದು ಬಿಜೆಪಿಗೆ ತಿಳಿದಿದೆ, ದೆಹಲಿ ಜನರು ಆಕ್ರೋಶ ಗೊಂಡಿದ್ದಾರೆ. ಈಗ ಚುನಾವಣೆ ನಡೆದರೆ ದೆಹಲಿಯ ಜನರು ಒಂದೇ ಒಂದು ಸ್ಥಾನವನ್ನು ನೀಡುವುದಿಲ್ಲ ಎಂದು ಬಿಜೆಪಿಯವರಿಗೆ ತಿಳಿದಿದೆ. ಹಾಗಾಗಿ ಅವರು ಚುನಾವಣೆಯನ್ನು ಬಯಸುವುದಿಲ್ಲ. ಎಲ್ಲಾ 70 ಸ್ಥಾನಗಳು ಆಮ್ ಆದ್ಮಿ ಪಕ್ಷಕ್ಕೆ ಬರುತ್ತವೆ” ಎಂದು ಅತಿಶಿ ಹೇಳಿದರು.
ಸುನೀತಾಗೆ ಸಿಎಂ ಹುದ್ದೆ?
ಪತಿ ಜೈಲು ಸೇರಿಕೊಂಡಾಗಲೇ ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಆಮ್ ಆದ್ಮಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.