Vande Bharath New Train: ಕರ್ನಾಟಕದ 9ನೇ ವಂದೇ ಭಾರತ್ಗೆ ಸೆ.16ರಂದು ಪ್ರಧಾನಿ ಚಾಲನೆ
ಹುಬ್ಬಳ್ಳಿ-ಪುಣೆ ರೈಲು ಸೇರಿ 5 ವಂದೇ ಭಾರತ್ ಎಕ್ಸ್ಪ್ರೆಸ್ಗೆ ಹಸುರು ನಿಶಾನೆ
Team Udayavani, Sep 15, 2024, 6:25 PM IST
ಹೊಸದಿಲ್ಲಿ: ಪುಣೆ-ಹುಬ್ಬಳಿ ವಂದೇ ಭಾರತ್ ಸೇರಿ 5 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸಂಚರಿಸಲಿರುವ ವಂದೇ ಭಾರತ್ ರೈಲುಗಳ ಸಂಖ್ಯೆ 9ಕ್ಕೆ ಏರಿಕೆಯಾಗಲಿದೆ.
ಇದೇ ವೇಳೆ ಪ್ರಧಾನಿ ಮೋದಿಯವರು ರವಿವಾರದಿಂದ ಮಂಗಳವಾರದವರೆಗೆ ಗುಜರಾತ್, ಝಾರ್ಖಂಡ್, ಒಡಿಶಾಗಳಿಗೆ ಭೇಟಿ ನೀಡಿ 12,560 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸೆ.15ರಂದು ಮೋದಿ ಝಾರ್ಖಂಡ್ಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು 5 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸುರು ನಿಶಾನೆ ತೋರಿಸಲಿದ್ದಾರೆ. ಬಳಿಕ ಅವರು ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಪ್ರಧಾನಿ ಮೋದಿ ಅವರು ವಂದೇ ಭಾರತ್ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಸೆ.16ರಂದು ಗಾಂಧಿನಗರದಲ್ಲಿ ನಂತರ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ವಂದೇಭಾರತ್ಗೆ ಕಲ್ಲು: ಐವರ ಬಂಧನ
ಪ್ರಧಾನಿ ರವಿವಾರ ಚಾಲನೆ ನೀಡಬೇಕಿದ್ದ ದುರ್ಗ-ವಿಶಾಖಪಟ್ಟಣಂ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ರೈಲಿನ ಪ್ರಯೋಗಿಕ ಸಂಚಾರದ ವೇಳೆ ಘಟನೆ ನಡೆದಿದ್ದು, ಈ ಸಂಬಂಧಿಸಿದಂತೆ ಛತ್ತೀಸ್ಗಢದ ಮಹಸುಮುಂದ್ನಲ್ಲಿ 5 ಮಂದಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.