Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ
ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿ ಕೊಲೆಯಲ್ಲಿ ಅಂತ್ಯ.
Team Udayavani, Sep 15, 2024, 8:10 PM IST
ಹುಣಸೂರು: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಕತ್ತಿಯಿಂದ ಕುತ್ತಿಗೆ ಕಡಿದು ಹತ್ಯೆಗೈದಿರುವ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ ಗ್ರಾಮದ ಪಾಪನಾಯಕರ ಪುತ್ರಿ ರೋಜಾ(33) ಕೊಲೆಯಾದಾಕೆ. ಆರೋಪಿ ಪತಿ ದಿ.ಪೀರನಾಯಕನ ಪುತ್ರ ಸ್ವಾಮಿನಾಯಕ ಕೊಲೆ ಆರೋಪಿ.
ಘಟನೆ ವಿವರ:
ಬೆಂಕಿಪುರ ಗ್ರಾಮದ ಸ್ವಾಮಿನಾಯಕನಿಗೆ ಕಳೆದ 14ವರ್ಷಗಳ ಹಿಂದೆ ಅದೇ ಗ್ರಾಮದ ರೋಜಾಳೊಂದಿಗೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಸ್ವಾಮಿ ನಾಯಕ ಅಕ್ರಮ ಸಂಬಂಧದ ಬಗ್ಗೆ ದಂಪತಿಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ರೋಜಾ ಮೂರು ತಿಂಗಳ ಹಿಂದೆ ಅದೇ ಗ್ರಾಮದಲ್ಲಿರುವ ತನ್ನ ತಾಯಿ ಮನೆಗೆ ಹೋಗಿದ್ದಳು. ಭಾನುವಾರ ಬೆಳಗ್ಗೆ ಬೀದಿ ನಲ್ಲಿಯಲ್ಲಿ ರೋಜಾ ನೀರು ಹಿಡಿಯಲು ಹೋಗಿದ್ದ ವೇಳೆ ತೆಂಗಿನ ಕಾಯಿ ಕೀಳುವ ಕತ್ತಿ ಹಿಡಿದು ಬಂದ ಸ್ವಾಮಿನಾಯಕ ಏಕಾಏಕಿ ಬೆನ್ನು, ಕುತ್ತಿಗೆ ಮತ್ತಿತರ ಕಡೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ, ತೀವ್ರಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಜಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯದಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ. ವಿಷ್ಟುರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ಇತ್ತು ಪರಿಶೀಲಿಸಿದರು. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.