Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
ಮೂರ್ತಿಗೆ ಮಾಲಾರ್ಪಣೆಗೈಯುವ ವೇಳೆ ಯುವಕನ ಕಿತಾಪತಿಯಿಂದ ಈ ದುರ್ಘಟನೆ!
Team Udayavani, Sep 15, 2024, 10:54 PM IST
ದಾವಣಗೆರೆ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಹಿಳೆಯೊಬ್ಬರ ಮೇಲೆ ಜೆಸಿಬಿ ಹರಿದು ಗಂಭೀರ ಗಾಯಗೊಂಡರೆ ಇತರ ಐದಾರು ಮಂದಿಗೆ ತೀವ್ರ ಗಾಯಗಳಾದ ಘಟನೆ ರವಿವಾರ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಶ್ರೀ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಗ್ರಾಮದ ಯುವಕನೊಬ್ಬ ಜೆಸಿಬಿಯಲ್ಲಿ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡಲು ಮುಂದಾಗಿದ್ದ ಜೆಸಿಬಿ ಸರಿಯಾಗಿ ಚಾಲನೆ ಮಾಡಲಾಗದ ಆ ಯುವಕ ಬ್ರೇಕ್ ಹಾಕುವ ಬದಲು ಎಕ್ಸಲೇಟರ್ ಒತ್ತಿದ್ದರಿಂದ ಅದು ಗುಂಪಿನಲ್ಲಿದ್ದವರತ್ತ ತಿರುಗಿದೆ. ಜೆಸಿಬಿ ತಿರುಗಿದ ಭರದಲ್ಲಿ ಗಾಡಿಯ ಚಕ್ರವು ಬಸಮ್ಮ ಎಂಬ ಮಹಿಳೆಯ ಹೊಟ್ಟೆಯ ಮೇಲೆ ಹರಿದಿದೆ.
ಅಲ್ಲದೇ, ಸಮೀಪವಿದ್ದ ಗ್ರಾಮದ ದೇವಸ್ಥಾನದ ಹಳೆಯ ಗೋಡೆಗೆ ಬಡಿದಿದ್ದರಿಂದ ಗೋಡೆ ಬಿದ್ದು 8 ವರ್ಷದ ಸಿರಿ ಎಂಬ ಬಾಲಕಿ ಸೇರಿದಂತೆ ಐದಾರು ಮಂದಿಗೆ ತೀವ್ರ ಗಾಯವಾಗಿದೆ. ಬಳಿಕ ಹರಸಾಹಸ ಮಾಡಿ, ಜೆಸಿಬಿ ನಿಲ್ಲಿಸಿದ್ದಾರೆ. ಚಕ್ರಕ್ಕೆ ಸಿಲುಕಿದ್ದ ಮಹಿಳೆ ಬಸಮ್ಮನನ್ನು ಗ್ರಾಮಸ್ಥರು ತಕ್ಷಣವೇ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಮಲೇಬೆನ್ನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗಂಭೀರ ಗಾಯಗೊಂಡಿರುವ ಬಸಮ್ಮನಿಗೆ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಒದಗಿಸಲಾಗಿದೆ. ಗ್ರಾಮದ ಯುವಕರು ತಕ್ಷಣವೇ ಗಣೇಶ ಮೂರ್ತಿ ಒಯ್ದು ವಿಸರ್ಜಿಸಿದ್ದಾರೆ. ಜೆಸಿಬಿ ವಶಕ್ಕೆ ಪಡೆದ ಮಲೇಬೆನ್ನೂರು ಪೊಲೀಸರು ಜೆಸಿಬಿ ಚಾಲನೆ ಮಾಡಿದ ಯುವಕನ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.