Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್‌ ಮಾನವ ಸರಪಳಿ

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರವರೆಗೆ 2,500 ಕಿ.ಮೀ. ಮಾನವ ಸರಪಳಿ 20 ಲಕ್ಷ ಜನ ಭಾಗಿ

Team Udayavani, Sep 16, 2024, 12:01 AM IST

Democracy Day ವಿಶ್ವದಾಖಲೆಯ ಪುಟ ಸೇರಿದ ಬೃಹತ್‌ ಮಾನವ ಸರಪಳಿ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನ ಬಸವ ಕಲ್ಯಾಣದಿಂದ ಚಾಮರಾಜನಗರ
ದವರೆಗೆ ಏಕಕಾಲದಲ್ಲಿ ನಿರ್ಮಾಣ ಗೊಂಡ ವಿಶ್ವದ ಅತಿದೊಡ್ಡ ಮಾನವ ಸರಪಳಿ ರವಿವಾರ ನಿರೀಕ್ಷೆಯಂತೆ ವಿಶ್ವದಾಖಲೆಯ ಪುಟ ಸೇರಿತು.

ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಒಳಗೊಂಡಂತೆ ವಿವಿಧ ಇಲಾಖೆಗಳು, ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಪ್ರಜಾಪ್ರಭುತ್ವದ ಅರಿವಿಗಾಗಿ ನಿರ್ಮಿಸಲಾದ ಮಾನವ ಸರಪಳಿಗೆ ವಿದ್ಯಾರ್ಥಿಗಳು, ಸರಕಾರಿ ನೌಕರರು, ಸಾರ್ವಜನಿಕರು, ಮಹಿಳೆಯರು ಹೀಗೆ ನಾನಾ ವಲಯದಿಂದ ನೋಂದಣಿ ಮಾಡಿಸಿಕೊಂಡು ಕೈಜೋಡಿಸಿದರು.

ಈ ಮೂಲಕ ಇದೊಂದು “ಸೌಹಾರ್ದ ಸರಪಳಿ’ಯಾಗಿ ರೂಪುಗೊಂಡಿತು.ಮೊದಲೇ ಯಾವ ಮಾರ್ಗದಲ್ಲಿ ಹಾದುಹೋಗಬೇಕು ಎಂಬುದನ್ನೂ ನಿರ್ಧರಿಸಿ, ಮಾನವ ಸರಪಳಿ ನಿರ್ಮಾಣದಲ್ಲಿ ಭಾಗವಹಿಸುವವರಿಗೆ ನಕ್ಷೆ ಪ್ರಕಾರ ಬಂದು ನಿಲ್ಲುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆಯಾ ಜಿಲ್ಲೆಗಳ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಲಾಗಿತ್ತು. ಅಂದಾಜು 2,500 ಕಿ.ಮೀ. ಉದ್ದದ ಈ ಸರಪಳಿಯಲ್ಲಿ ಸುಮಾರು 20 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ್ದರು. ಇದಕ್ಕಾಗಿ ಗಿನ್ನೆಸ್‌ ಬುಕ್‌ ಆಫ್ ರೆಕಾರ್ಡ್ಸ್‌ನಿಂದ ಸರ್ಕಾರಕ್ಕೆ ಪ್ರಶಂಸೆ ಪ್ರಮಾಣಪತ್ರ ಕೂಡ ಪ್ರದಾನ ಮಾಡಲಾಯಿತು.

ಈ ಅಪರೂಪದ ಮಾನವ ಸರಪಳಿಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಪ್ರಜಾಪ್ರಭುತ್ವ ದಿನಾಚರಣೆಯ ರಾಯಭಾರಿ ಹರೇಕಳ ಹಾಜಬ್ಬ, ಪೌರಕಾರ್ಮಿಕರಾದ ನಾಗಲಕ್ಷ್ಮೀ, ಮಂಜುಳಾ, ತೃತೀಯ ಲಿಂಗಿ ಪ್ರಿಯಾಂಕಾ, ಇಬ್ಬರು ಅಂಗವಿಕಲ ವಿದ್ಯಾರ್ಥಿಗಳು ಸಿದ್ದರಾಮಯ್ಯ ಅವರ ಎರಡೂ ಬದಿಯಲ್ಲಿ ನಿಂತು ಅರ್ಥಪೂರ್ಣಗೊಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್‌.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್‌, ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂ ರಾವ್‌ ಮೊದಲಾದವರಿದ್ದರು.

ಸಮಾನತೆ ಹಾದಿಯಲ್ಲಿ ಸರಕಾರ: ಸಿಎಂ
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 10 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು. ಅನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ಮೂಲ ಉದ್ದೇಶವೇ ಸಮಸಮಾಜ ನಿರ್ಮಾಣ. ಹಾಗಾಗಿಯೇ ಇಲ್ಲಿ ರಾಷ್ಟ್ರಪತಿಯಾಗಲಿ ಅಥವಾ ಪ್ರಧಾನಿಯಾಗಲಿ ಅಥವಾ ಸಫಾಯಿ ಕರ್ಮಚಾರಿಯಾಗಲಿ ಎಲ್ಲರಿಗೂ ಒಂದೇ ವೋಟು. ನಮ್ಮ ಸರಕಾರವೇನೋ ಸಮಾನತೆ ಸಾಧಿಸಿಬಿಟ್ಟಿದ್ದೇವೆ ಅಂತ ನಾನು ಹೇಳುವುದಿಲ್ಲ. ಆದರೆ ಆ ದಿಕ್ಕಿನಲ್ಲಿ ಸಾಗಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

ಟಾಪ್ ನ್ಯೂಸ್

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.