MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

ಜಾತಿನಿಂದನೆ, ಹಣ ಸುಲಿಗೆ, ಜೀವ ಬೆದರಿಕೆ ಪ್ರಕರಣ

Team Udayavani, Sep 16, 2024, 7:10 AM IST

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

ಬೆಂಗಳೂರು: ಗುತ್ತಿಗೆದಾರ ಮತ್ತು ಬಿಬಿಎಂಪಿ ಮಾಜಿ ಸದಸ್ಯರಿಗೆ ಜಾತಿನಿಂದನೆ, ಹಣ ಸುಲಿಗೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧನಕ್ಕೆ ಒಳ ಗಾಗಿರುವ ಆರ್‌. ಆರ್‌. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿ ಕಾವಲ್‌ ಠಾಣೆ ಪೊಲೀಸರು ನ್ಯಾಯಾ ಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 2 ದಿನ ಪೊಲೀಸ್‌ ಕಸ್ಟಡಿಗೆ ಪಡೆದಿದ್ದಾರೆ.

ಮುನಿರತ್ನ ಅವರನ್ನು ಅಶೋಕನಗರ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಳಪಡಿಸಲಾಗಿದೆ. ವಿಚಾರಣೆ ವೇಳೆ ವೈರಲ್‌ ಆಗಿರುವ ಆಡಿಯೋದಲ್ಲಿರುವ ಧ್ವನಿ ತಮ್ಮದಲ್ಲ ಎಂದು ಮುನಿರತ್ನ ಹೇಳಿದ್ದಾಗಿ ತಿಳಿದುಬಂದಿದೆ.ಶನಿವಾರ ಸಂಜೆ ಕೋಲಾರದ ನಂಗಲಿ ಗ್ರಾಮದ ಬಳಿ ಮುನಿರತ್ನ ಅವರನ್ನು ಬಂಧಿಸಿ ನಗರಕ್ಕೆ ಕರೆತಂದು ತಡರಾತ್ರಿಯೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಗಜಾನನ ಭಟ್‌ ಅವರ ನಿವಾಸಕ್ಕೆ ಹಾಜರು ಪಡಿಸಿ, 2 ದಿನಗಳ ಕಾಲ ವಶಕ್ಕೆ ಪಡೆಯಲಾಯಿತು. ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಹೆಚ್ಚಿನ ವಿಚಾರಣೆಗಾಗಿ ಅಶೋಕನಗರ ಠಾಣೆಗೆ ಕರೆದೊಯ್ಯಲಾಗಿತ್ತು.

ಒಂದೂವರೆ ತಾಸು ವಿಚಾರಣೆ
ಶೇಷಾದ್ರಿಪುರ ಉಪವಿಭಾಗದ ಎಸಿಪಿ ಪ್ರಕಾಶ್‌ ತಡರಾತ್ರಿಯೇ ಮುನಿರತ್ನ ಅವರನ್ನು ಒಂದೂವರೆ ತಾಸು ಕಾಲ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ರವಿವಾರ ಬೆಳಗ್ಗೆ ಮತ್ತೂಮ್ಮೆ ತೀವ್ರವಾಗಿ ವಿಚಾರಣೆ ನಡೆಸಿದ್ದು, ಪಾಲಿಕೆ ಸದಸ್ಯ ವೇಲುನಾಯಕರ್‌ಗೆ ಜಾತಿನಿಂದನೆ ಮಾಡಿದ್ದು ನಿಜವೇ? ಎಷ್ಟು ವರ್ಷಗಳಿಂದ ವೇಲು ಪರಿಚಯವಿದ್ದಾರೆ? ನಿಮ್ಮಿಬ್ಬರ ನಡುವೆ ಯಾವ ವಿಚಾರಕ್ಕೆ ಗಲಾಟೆ ಆಗಿತ್ತು? ಗುತ್ತಿಗೆದಾರ ಚೆಲುವರಾಜು ಅವರಿಂದ ಲಂಚ ಕೇಳಿದ್ದೀರಾ? ಯಾವ ಕಾಮಗಾರಿ ಗುತ್ತಿಗೆ ಸಂಬಂಧ ಅವರಿಂದ ಕಮಿಷನ್‌ ಕೇಳಿದ್ದಿರಿ? ಚೆಲುವರಾಜು ತಮ್ನನ್ನು ಭೇಟಿಯಾದಾಗ ವೇಲು ನಾಯಕರ್‌ ಬಗ್ಗೆ ಅಶ್ಲೀಲ ಪದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದು ನಿಜವೇ? ಆ ಆಡಿಯೋವನ್ನು ಚೆಲವರಾಜು ವೇಲು ನಾಯಕರ್‌ಗೆ ಕೇಳಿಸಿದ್ದಾರೆ, ಹಾಗಾದರೆ, ಆ ಆಡಿಯೋದಲ್ಲಿರುವುದು ನಿಮ್ಮ ಧ್ವನಿಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಎಸಿಪಿಯವರು ಕೇಳಿದ್ದಾರೆ.

ಧ್ವನಿ ನನ್ನದಲ್ಲ
ಅದಕ್ಕೆ ಉತ್ತರಿಸಿರುವ ಮುನಿರತ್ನ, ಆ ಆಡಿಯೋದಲ್ಲಿ ಇರುವುದು ನನ್ನ ಧ್ವನಿಯಲ್ಲ. ನಾನು ಎಂಎಲ್‌ಎ. ಆ ರೀತಿ ಮಾತನಾಡಲಿಲ್ಲ. ನನ್ನ ವಿರುದ್ಧ ಪಿತೂರಿ ಹಾಗೂ ಷಡ್ಯಂತ್ರ ಮಾಡಿದ್ದಾರೆ. ರಾಜಕೀಯ ದ್ವೇಷದಿಂದಲೇ ಈ ರೀತಿ ಪ್ರಕರಣ ದಾಖಲಿಸಿದ್ದಾರೆ. ದೂರುದಾರ ಚೆಲವರಾಜು ತನಗೆ ಪರಿಚಿತ ವ್ಯಕ್ತಿ. ಆದರೆ ಆತನನ್ನು ನಿಂದಿಸಿಲ್ಲ. ಹಲ್ಲೆಯೂ ಮಾಡಿಲ್ಲ. ವೇಲುನಾಯಕರ್‌ಗೂ ಜಾತಿ ನಿಂದನೆ ಮಾಡಿಲ್ಲ. ಯಾರೋ ಮಿಮಿಕ್ರಿ ಮಾಡುವ ವ್ಯಕ್ತಿಗಳ ಮೂಲಕ ಈ ಆಡಿಯೋವನ್ನು ತನ್ನ ರಾಜಕೀಯ ವೈರಿಗಳು ಸೃಷ್ಟಿಸಿದ್ದಾರೆ ಎಂದಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಧ್ವನಿ ಮಾದರಿ
ಎಫ್ಎಸ್‌ಎಲ್‌ಗೆ
ಮುನಿರತ್ನ ಅವರ ಧ್ವನಿ ಮಾದರಿ ಯನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸ ಲಾಗಿದೆ. ಜತೆಗೆ ಆಡಿಯೋವನ್ನು ಕೂಡ ಕಳುಹಿಸಲಾಗಿದೆ. ಪ್ರಾಥಮಿಕ ವರದಿ ಪ್ರಕಾರ, ಆಡಿಯೋದಲ್ಲಿರುವ ಧ್ವನಿ ಬಂಧಿತ ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿಗೆ ಹೋಲಿಕೆ ಆಗುತ್ತಿದೆ. ಆದರೆ ವರದಿ ಬಂದ ಅನಂತರವೇ ಸತ್ಯ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.