Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

ಅಶ್ಲೀಲ ವೀಡಿಯೋ: ಸಹಾಯವಾಣಿಗೆ ಓರ್ವ ಸಂತ್ರಸ್ತೆಯಿಂದಷ್ಟೇ ದೂರು

Team Udayavani, Sep 16, 2024, 7:15 AM IST

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ ವೈರಲ್‌ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ತೆರೆದಿದ್ದ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಸಂತ್ರಸ್ತೆಯರು ಹಿಂದೇಟು ಹಾಕಿದ್ದಾರೆ.

ಹತ್ತಾರು ಮಹಿಳೆ ಯರ ಜತೆಗಿರುವ ನೂರಾರು ಖಾಸಗಿ ವೀಡಿಯೋ ವೈರಲ್‌ ಆಗಿರುವ ಆರೋಪ ಕೇಳಿ ಬಂದಿದ್ದರೂ ಪ್ರಜ್ವಲ್‌ ವಿರುದ್ಧ ಇದುವರೆಗೆ ದೂರು ನೀಡಿದ್ದು ಒಟ್ಟು ಕೇವಲ ನಾಲ್ವರು ಮಹಿಳೆಯರು ಮಾತ್ರ!

ಎಸ್‌ಐಟಿ ತೆರೆದಿದ್ದ ಸಹಾಯವಾಣಿಗೆ ಮೊದಲ ಒಂದು ವಾರದಲ್ಲಿ ಮೇಲಿಂದ ಮೇಲೆ ಕರೆಗಳು ಬರಲಾರಂಭಿಸಿದ್ದು, ಸಲಹೆ ನೀಡಲಷ್ಟೇ ಸೀಮಿತವಾಗಿತ್ತು. ಇತ್ತ ತನಿಖಾಧಿಕಾರಿಗಳು ನಿರ್ಭೀತಿಯಿಂದ ದೂರು ನೀಡಿ ಎಂದ ಕೂಡಲೇ ಅತ್ತ ಕರೆ ಕಡಿತಗೊಳಿಸುತ್ತಿದ್ದರು. ಸಹಾಯವಾಣಿ ಮೂಲಕ ಇದುವರೆಗೆ ಓರ್ವ ಮಹಿಳೆ ಯಷ್ಟೇ ಪ್ರಜ್ವಲ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೂರು ನೀಡಿದ್ದಾರೆ.

ಸಹಾಯವಾಣಿಯೂ ಸ್ವಿಚ್‌ ಆಫ್!
ನೂರಾರು ಅಶ್ಲೀಲ ವೀಡಿಯೋಗಳು ವೈರಲ್‌ ಆಗಿವೆ ಎಂಬ ಸುದ್ದಿ ಬಿರುಗಾಳಿಯಂತೆ ಹರಿದಾಡಿದರೂ ಇದುವರೆಗೆ ಕೇವಲ ನಾಲ್ವರು ಮಹಿಳೆಯರಷ್ಟೇ ಪ್ರಜ್ವಲ್‌ ವಿರುದ್ಧ ಕೊಟ್ಟ ದೂರುಗಳ ಆಧಾರದಲ್ಲಿ 4 ಪ್ರತ್ಯೇಕ ಎಫ್ಐಆರ್‌ ದಾಖಲಾಗಿವೆ. ಸದ್ಯ ಸಹಾಯವಾಣಿ ನಂಬರ್‌ ಕೂಡ ಸ್ವಿಚ್‌ ಆಫ್ ಆಗಿದೆ.

ತನಿಖಾಧಿಕಾರಿಗಳು ಹತ್ತಾರು ಮಹಿಳೆಯರು ದೂರು ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಮುಜುಗರಕ್ಕೊಳಗಾಗಿ ದೂರು ನೀಡದಿದ್ದಾಗ ಸ್ವತಃ ಎಸ್‌ಐಟಿ ತನಿಖಾಧಿಕಾರಿಗಳೇ ವೀಡಿಯೋದಲ್ಲಿರುವ ಮಹಿಳೆಯರ ಮುಖಚಹರೆ ಪತ್ತೆ ಹಚ್ಚಿ ಗೌಪ್ಯವಾಗಿ ಸಂಪರ್ಕಿಸಿ ಪ್ರಶ್ನಿಸಲು ಮುಂದಾಗಿದ್ದರು. ಇನ್ನು ಕೆಲವು ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಯರಿಗೆ ನೋಟಿಸ್‌ ಕಳುಹಿಸಲಾಗಿತ್ತು. ಆದರೆ ಈ ಪೈಕಿ ಬಹುತೇಕ ಮಹಿಳೆಯರು ತಾವು ಸ್ವ ಇಚ್ಛೆಯಿಂದಲೇ ಲೈಂಗಿಕ ಸಂಪರ್ಕ ಹೊಂದಿರುವುದಾಗಿ ಹೇಳಿ ಪ್ರಕರಣದಿಂದ ನುಣುಚಿಕೊಂಡು ತಮ್ಮ ಹೆಸರು ಮುನ್ನೆಲೆಗೆ ಬಾರದಂತೆ ಎಚ್ಚರಿಕೆ ವಹಿಸಿದ್ದಾರೆ. ಇನ್ನು ಕೆಲವು ಮಹಿಳೆಯರು ಮುಜುಗರಕ್ಕೆ ಒಳಗಾಗಿ ತನಿಖಾಧಿಕಾರಿಗಳ ಮುಂದೆ ದಯವಿಟ್ಟು ನಮ್ಮ ಬಳಿ ಬರಬೇಡಿ ಎಂಬಿತ್ಯಾದಿ ಹೇಳಿಕೆ ಕೊಟ್ಟು ಪ್ರಕರಣದಿಂದ ದೂರ ಉಳಿದಿದ್ದಾರೆ ಎಂದು ತಿಳಿದು ಬಂದಿದೆ.

4ನೇ ಪ್ರಕರಣದ
ತನಿಖೆ ಯಾವ ಹಂತದಲ್ಲಿದೆ?
ಪ್ರಜ್ವಲ್‌ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಹಾಯವಾಣಿ ಮೂಲಕ ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ ಎಸ್‌ಐಟಿಯು ಐಪಿಸಿ ಸೆಕ್ಷನ್‌ 354ರಡಿ ದಾಖಲಿಸಿಕೊಂಡ ಪ್ರಕರಣದಲ್ಲಿ ಲೈಂಗಿಕ ಕಿರುಕುಳ ನೀಡಿರುವ ವೀಡಿಯೋ, ಸಂತ್ರಸ್ತೆಯ ಹೇಳಿಕೆ, ಸಿಡಿಆರ್‌ ಮೂಲಕ ಆಕೆಯ ಜತೆಗೆ ಮೊಬೈಲ್‌ನಲ್ಲಿ ನಡೆಸಿ ರುವ ಸಂಭಾಷಣೆ ದಾಖಲಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ಈ ಪ್ರಕರಣದಲ್ಲೂ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ. ಒಂದೇ ಅಶ್ಲೀಲ ವೀಡಿಯೋದ ಹಲವು ತುಣುಕು ವೈರಲ್‌ ಮಾಡಿರುವ ಆರೋಪವೂ ಕೇಳಿಬಂದಿದೆ. ಇದನ್ನು ಹೊರತುಪಡಿಸಿ ವೀಡಿಯೋದಲ್ಲಿದ್ದಾರೆ ಎನ್ನಲಾದ ಬಹುತೇಕ ಮಹಿಳೆಯರು ದೂರು ನೀಡದ ಹಿನ್ನೆಲೆಯಲ್ಲಿ ವೈರಲ್‌ ಆಗಿರುವ ಇತರ ಅಶ್ಲೀಲ ವೀಡಿಯೋ ಗಳು ಗಣನೆಗೆ ಬರುವುದಿಲ್ಲ. ಹೀಗಾಗಿ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ.

“ಹಾಸನದ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯ ಕಲೆ ಹಾಕಿ ತನಿಖೆ ನಡೆಸಿದ್ದೇವೆ. ಅಶ್ಲೀಲ ವೀಡಿಯೋ ಸೆರೆಹಿಡಿದಿದ್ದಾರೆ ಎನ್ನಲಾದ ನೈಜ ಮೊಬೈಲ್‌ ಪತ್ತೆಯಾಗಿಲ್ಲ. ಸಹಾಯವಾಣಿಗೆ ಆರಂಭದಲ್ಲಿ ಕರೆಗಳು ಬಂದಿದ್ದವು.”
-ಬಿ.ಕೆ. ಸಿಂಗ್‌, ಎಸ್‌ಐಟಿ ತಂಡದ ಮುಖ್ಯಸ್ಥ

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.