Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

ಸಿಸಿ ಕ್ಯಾಮರ ದೃಶ್ಯಗಳ ಆಧರಿಸಿ ಕ್ಷಿಪ್ರವಾಗಿ ಮಾಹಿತಿ ಕಲೆ ಹಾಕಿ ಆರೋಪಿಗಳ ಬಂಧಿಸಿದ ಪೊಲೀಸರು

Team Udayavani, Sep 16, 2024, 11:54 AM IST

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

ಸುರತ್ಕಲ್‌: ಕಾಟಿಪಳ್ಳ 3ನೇ ಬ್ಲಾಕ್‌ನಲ್ಲಿರುವ ಮಜ್ಜಿದುಲ್ಲಾ ಹುದಾಜುಮ್ಮಾ ಮಸೀದಿಗೆ ರವಿವಾರ ರಾತ್ರಿ ಕಲ್ಲು ಬಿಸಾಡಿ ಗಾಜುಗಳನ್ನು ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಪೊಲೀಸರು ಕದ್ರಿಯಲ್ಲಿ ಬಂಧಿಸಿದ್ದಾರೆ.

ಕಟ್ಲ ಆಶ್ರಯ ಕಾಲನಿ ನಿವಾಸಿಗಳಾದ ಭರತ್‌ ಶೆಟ್ಟಿ, ಚೆನ್ನಪ್ಪ ಶಿವಾನಂದ ಛಲವಾದಿ, ಚೇಳಾರಿನ ನಿತಿನ್‌ ಹಡಪ, ಮುಂಚೂರಿನ ಸುಜಿತ್‌ ಶೆಟ್ಟಿ, ಹೊಸಬೆಟ್ಟುವಿನ ಅಣ್ಣಪ್ಪ, ಕಾಟಿಪಳ್ಳ ನಿವಾಸಿ ಪ್ರೀತಂ ಬಂಧಿತರು. ರವಿವಾರ ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಮಸೀದಿಗೆ ದೀಪಾಲಂಕಾರ ಮಾಡಿ, ಮಸೀದಿಯ ಒಳಗಡೆ ಕಾರ್ಯಕರ್ತರೆಲ್ಲ ಕೆಲಸ ಮಾಡಿಕೊಂಡಿದ್ದು, ರಾತ್ರಿ ಕಿಡಿಗೇಡಿಗಳು ಎರಡು ಬೈಕ್‌ಗಳಲ್ಲಿ ಜನತಾ ಕಾಲನಿಯ ಶ್ಮಶಾನದ ಕಡೆಯಿಂದ ಬಂದವರು ಮಸೀದಿಯ ಹಿಂಭಾಗದ ರಸ್ತೆಯ ಕಡೆಯಿಂದ ಆಗಮಿಸಿ ಕಿಟಕಿ ಗಾಜುಗಳಿಗೆ ಕಲ್ಲು ಬಿಸಾಡಿ ಪರಾರಿಯಾಗಿದ್ದರು.

ಕಾರು, ಬೈಕ್‌, ಮೊಬೈಲ್‌ ವಶಕ್ಕೆ
ಹಿಂದೂ-ಮುಸ್ಲಿಂ ಜನಾಂಗದ ನಡುವೆ ದ್ವೇಷವನ್ನು ಉಂಟು ಮಾಡುವ ಉದ್ದೇಶದಿಂದ ಈ ರೀತಿ ಮಸೀದಿಗೆ ಕಲ್ಲು ಬಿಸಾಡಿ ಹಾನಿ ಮಾಡಿದ್ದಾಗಿದೆ ಎಂದು ಮಸೀದಿ ಅಧ್ಯಕ್ಷ ಕೆ.ಎಚ್‌. ಅಬ್ದುಲ್‌ ರಹಿಮಾನ್‌ ನೀಡಿದ ದೂರಿನಂತೆ ಸುರತ್ಕಲ್‌ ಪೊಲೀಸರು ಕಾರ್ಯಾಚರಣೆ ನಡೆಸಿದರು. ಸಿಸಿ ಟಿವಿ ದೃಶ್ಯಗಳನ್ನು ಆಧರಿಸಿ ಮಾಹಿತಿ ಕಲೆ ಹಾಕಿ ಕ್ಷಿಪ್ರವಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ್ದ 1 ಸ್ವಿಫ್ಟ್‌ ಕಾರು, 2 ಬೈಕ್‌ ಹಾಗೂ 4 ಮೊಬೈಲ್‌ ಫೋನ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವಿಶೇಷ ತಂಡ ರಚನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರವಾಲ್‌ ವಿಶೇಷ ತಂಡ ರಚಿಸಿ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್‌ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ಆವರ ನೇತೃತ್ವದಲ್ಲಿ ಸುರತ್ಕಲ್‌ ಪೊಲೀಸ್‌ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ, ಜನಾರ್ದನ್‌ ನಾಯ್ಕ ಮತ್ತು ಎಚ್‌.ಸಿ. ಉಮೇಶ್‌ ಕೊಟ್ಟಾರಿ, ಎಚ್‌.ಸಿ. ಅಣ್ಣಪ್ಪ ವಂಡ್ರೆ, ಎಚ್‌.ಸಿ. ದಿಲೀಪ್‌ರಾಜೇ ಅರಸ್‌, ಪಿ.ಸಿ. ಕಾರ್ತಿಕ್‌ ಕುಲಾಲ್‌, ಪಿ.ಸಿ. ವಿನೋದ್‌ ಕುಮಾರ್‌, ಪಿ.ಸಿ. ಮಂಜುನಾಥ್‌ ಆಯಟ್ಟಿ ಅವರ ತಂಡ ಕಾರ್ಯಾಚರಣೆ ನಡೆಸಿದೆ.

ನಾಗಮಂಗಲದ ಘಟನೆಯಿಂದ ಆಕ್ರೋಶ?
ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನ ಶೋಭಾಯಾತ್ರೆಯ ವೇಳೆ ಕಲ್ಲು ತೂರಾಟ ನಡೆಸಿ ಹಿಂದೂ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿದ್ದರಿಂದ ಆರು ಮಂದಿ ಆಕ್ರೋಶಿತರಾಗಿ ಅವಕಾಶಕ್ಕಾಗಿ ಕಾಯುತ್ತಿದ್ದರೆ ಆಥವಾ ಶರಣ್‌ ಪಂಪ್‌ವೆಲ್‌ ಅವರಿಗೆ ಬಿ.ಸಿ. ರೋಡಿನ ವ್ಯಕ್ತಿಯೋರ್ವ ಬೆದರಿಕೆ ಹಾಕಿದ್ದರಿಂದ ಈ ಕೃತ್ಯ ಎಸಗಿದ್ದರೆ ಎಂಬುದರ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.