Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

ಪುರಸಭೆ ವ್ಯಾಪ್ತಿಯ ರಸ್ತೆಗಳಲ್ಲಿ ಡಾಮರು ಕಿತ್ತುಹೋಗಿ ಗುಂಡಿ ಸಾಮ್ರಾಜ್ಯ

Team Udayavani, Sep 16, 2024, 12:51 PM IST

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯ ಹಲವೆಡೆಗಳಲ್ಲಿ  ರಸ್ತೆಗಳ ಡಾಮರು ಕಿತ್ತು ಹೋಗಿ ವಾಹನಗಳು ಸಂಚರಿಸುವುದೇ ಕಷ್ಟವಾಗಿದೆ. ದೊಡ್ಡ ದೊಡ್ಡ ಗುಂಡಿಗಳು ಬಾಯೆ¤ರೆದು ಕೂತಿದ್ದು, ವಾಹನ ಸವಾರರಿಗೆ ಹೊಂಡ ತಪ್ಪಿಸಿ ಸಾಗುವುದು ಸವಾಲಾಗಿದೆ.

ಮಳೆಗಾಲ ಆರಂಭದ ಪೂರ್ವದಲ್ಲಿ  ನಗರದೊಳಗಿನ ರಸ್ತೆಗಳು ಹಲವು ಕಡೆಗಳಲ್ಲಿ  ಸಂಪೂರ್ಣ ಹದಗೆಟ್ಟಿತ್ತು. ವಾಹನ ಸವಾರರು, ನಾಗರಿಕರ ಆಕ್ರೋಶ  ಮುಗಿಲು ಮುಟ್ಟಿತ್ತು. ಕೊನೆಗೂ ಎಚ್ಚೆತ್ತು ಕೊಂಡ ಪುರಸಭೆ  ಹದಗೆಟ್ಟ ರಸ್ತೆಗಳ ದುರಸ್ತಿಗೆ ಮುಂದಾಗಿತ್ತು.  ಹೊಂಡ ಗುಂಡಿಯ ರಸ್ತೆಗಳು ಮುಚ್ಚಿಕೊಂಡು ಸಂಚಾರ ಸುಗಮವಾಗಿತ್ತು. ಆದರೆ ಬಳಿಕ  ಮಳೆ  ಧಾರಾಕಾರ ಸುರಿದ ಪರಿಣಾಮ  ರಸ್ತೆಯ  ಡಾಮರು ಕಿತ್ತು ಹೋಗಿದೆ.

ಈಗ ಮಳೆ ಕಡಿಮೆಯಾಗಿದೆ. ಆದರೆ, ಹೊಂಡ ಮುಚ್ಚುವ ಕೆಲಸ ಇನ್ನೂ ಶುರುವಾಗಿಲ್ಲ.   ಇನ್ನು ದುರಸ್ತಿಗೆ ಎಷ್ಟು ಸಮಯ ಕಾಯಬೇಕು ಎನ್ನುವ  ಪ್ರಶ್ನೆ ನಗರದ ವಾಹನ ಸವಾರದ್ದಾಗಿದೆ.

ಕಾರ್ಕಳ ನಗರದ ಪ್ರಮುಖ ರಸ್ತೆಗಳಷ್ಟೆ ಅಲ್ಲ  ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳ ಹಲವೆಡೆಗಳ ಸಂಪರ್ಕ ರಸ್ತೆ ಗಳು  ಹದಗೆಟ್ಟಿವೆ.  ಈ ರಸ್ತೆಗಳಲ್ಲಿ ಸಂಚಾರ ಕೂಡ ತ್ರಾಸದಾಯಕವಾಗಿದೆ. ಈ ಬಗ್ಗೆಯೂ ವಾರ್ಡ್‌ಗಳಿಂದ ದೂರುಗಳು ಕೇಳಿ ಬರುತ್ತಿವೆ.

ಯಾವ್ಯಾವ ರಸ್ತೆಗಳಿಗೆ ಹಾನಿ?
ಕಾರ್ಕಳ ನಗರದಿಂದ ಉಡುಪಿ ಭಾಗಕ್ಕೆ ತೆರಳುವ ಹೆದ್ದಾರಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಸಾಲ್ಮರದ ವರೆಗೆ ಕಾಬೆಟ್ಟು ಭಾಗಕ್ಕೆ ತಿರುವಲ್ಲಿ ತನಕ ಅಲ್ಲಲ್ಲಿ  ಡಾಮರು ಕಿತ್ತು ಹೋಗಿ ಗುಂಡಿಗಳು ಬಿದ್ದಿವೆ.

ತಾಲೂಕು ಕಚೇರಿ ಜಂಕ್ಷನ್‌ನಿಂದ ಉಡುಪಿ ಭಾಗಕ್ಕೆ  ಸಂಚರಿಸುವ ರಸ್ತೆಯ ಬಂಗ್ಲೆಗುಡ್ಡೆ ಮುಖ್ಯ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ.

ತಾಲೂಕು ಕಚೇರಿ ಮುಂಭಾಗದ ಅರಣ್ಯ ಇಲಾಖೆ ವಸತಿಗೃಹಗಳ ಪಕ್ಕದಲ್ಲೆ  ಸರ್ವಜ್ಞವೃತ್ತದ ಕಡೆಗೆ ತೆರುವ ರಸ್ತೆಯೂ ಹಾನಿಗೊಳಗಾಗಿದೆ.

ನಗರದ ಮೂರು ಮಾರ್ಗದಿಂದ ಆನೆಕೆರೆ ಭಾಗಕ್ಕೆ ತೆರಳುವ ರಸ್ತೆಯ ಡಾಮರು ಕಿತ್ತು ಹೋಗಿದೆ.

ಅನಂತಶಯನದಿಂದ  ರಾಘವೇಂದ್ರ ಮಠದ ಕಡೆಗೆ ಹಾದು ಹೋದ ರಸ್ತೆಯೂ ಹೊಂಡಮಯ.

ಮಾರುಕಟ್ಟೆ ಮಾರ್ಗವಾಗಿ ಕಲ್ಲೊಟ್ಟೆ ಸಂಪರ್ಕಿಸಿ ಬಂಡಿಮಠ ಸಂಪರ್ಕಿಸುವ ರಸ್ತೆಯೂ ಕೆಟ್ಟಿದೆ.

ರಸ್ತೆ ಕೆಟ್ಟರೆ ಎಲ್ಲರಿಗೂ ತೊಂದರೆ
ರಸ್ತೆಗಳು ಹದಗೆಟ್ಟಿರುವುದರಿಂದ ವಾಹನ ಸವಾರರಿಗೆ  ಮಾತ್ರವಲ್ಲ, ಪಾದಚಾರಿಗಳಿಗೆ ಮತ್ತು ಅಂಗಡಿಗಳಿಗೂ ತೊಂದರೆಯಾಗಿದೆ.

ಪುರಸಭೆ ಸಹಿತ ಸರಕಾರಿ ಕಚೇರಿಗಳು ಇರುವ ರಸ್ತೆಗಳೂ ಹಾಳೆದ್ದು  ಹೋಗಿವೆ. ಹೀಗಾಗಿ ಇಲ್ಲಿಗೆ ಬರುವ ಸಾವಿರಾರು ಮಂದಿಗೆ ಕಿರಿಕಿರಿಯಾಗುತ್ತಿದೆ.

ಮೂರು ಮಾರ್ಗದಿಂದ ಮಾರುಕಟ್ಟೆ ಸಂಪರ್ಕ ರಸ್ತೆ ಕಿರಿದಾಗಿದ್ದು, ಲಘು ವಾಹನಗಳು ಗುಂಡಿ ತಪ್ಪಿಸಿ ಓಡಾಡುವುದು, ನರೂ ಅವುಗಳಿಂದ ತಪ್ಪಿಸಿಕೊಳ್ಳಬೇಕಾದ ಪ್ರಮೇಯ ಬಂದಿದೆ.

ಹೊಸ ಅಧ್ಯಕ್ಷ, ಉಪಾಧ್ಯಕ್ಷರಿಗೆ  ಎದುರಾದ ಮೊದಲ ಸವಾಲು
ಕಾರ್ಕಳ ಪುರಸಭೆಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ರಸ್ತೆ ಸಮಸ್ಯೆ ನಿರ್ವಹಣೆಯೇ ಮೊದಲ ಸವಾಲಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟು  ಸಾರ್ವನಿಕರ ಆಕ್ರೋಶಕ್ಕೆ ತುತ್ತಾಗುವ ಮುಂಚಿತವೇ ರಸ್ತೆ ಕಿತ್ತು ಹೋದ ಡಾಮರು ದುರಸ್ತಿಗೆ ಕ್ರಮ ವಹಿಸಬೇಕಾಗಿದೆ.

ಕ್ರಿಯಾಯೋನೆ ಸಿದ್ಧಪಡಿಸಿದ್ದೇವೆ
ನಗರ ಹದಗೆಟ್ಟ ರಸ್ತೆಗಳ ತುರ್ತು ದುರಸ್ತಿಗೆ ಕ್ರಿಯಾ ಯೋನೆ ಸಿದ್ಧಪಡಿಸಿದ್ದೇವೆ. ತಾತ್ಕಾಲಿಕವಾಗಿ ದುರಸ್ತಿಗೊಳಿಸಲಿದ್ದೇವೆ. ನಗರೊಳಗಿನ ರಸ್ತೆಗಳಷ್ಟೆ ಅಲ್ಲ 23 ವಾರ್ಡ್‌ಗಳಲ್ಲಿ  ಹದಗೆಟ್ಟ ರಸ್ತೆಗಳನ್ನೂ ರಿಪೇರಿ ಮಾಡುತ್ತೇವೆ.
-ಯೋಗೀಶ್‌ ದೇವಾಡಿಗ,  ಅಧ್ಯಕ್ಷರು, ಕಾರ್ಕಳ ಪುರಸಭೆ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.