Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ


Team Udayavani, Sep 16, 2024, 1:50 PM IST

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

ನಟಿ ರೀಷ್ಮಾ ನಾಣಯ್ಯ (Reeshma Nanaiah) ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ ಎರಡು ಸಿನಿಮಾಗಳು. ಅದೂ ಸ್ಟಾರ್‌ ಸಿನಿಮಾಗಳು ಎಂಬುದು ವಿಶೇಷ. ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಬಲಗಾಲಿಟ್ಟು ಬಂದ ಬೆಡಗಿ ರೀಷ್ಮಾ ಈಗ “ಯು-ಐ’ (UI) ಹಾಗೂ “ಕೆ.ಡಿ’ (KD) ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಈ ಎರಡೂ ಚಿತ್ರಗಳಲ್ಲೂ ರೀಷ್ಮಾ ನಟಿಸಿದ್ದು, ಈಗಾಗಲೇ ಯು-ಐ ಚಿತ್ರದ ಹಾಡು ಭರ್ಜರಿ ಹಿಟ್‌ ಆಗಿದೆ.

ತಮ್ಮ ಕುರಿತು ಮಾತನಾಡುವ ರೀಷ್ಮಾ, “ನಾನೊಬ್ಬಳು ಅದೃಷ್ಟವಂತೆ. ಎರಡು ಸ್ಟಾರ್‌ ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ. ಯು-ಐ ಉಪೇಂದ್ರ ಅವರ ಡೈರೆಕ್ಷನ್‌ ಎಂದಾಗ ಸ್ವಲ್ಪ ಭಯ ಆಯ್ತು. ಅಂಥ ಲೆಜೆಂಡರಿ ಡೈರೆಕ್ಟರ್‌ ಅವರು. ಚಿತ್ರಕ್ಕೆ ಉಪೇಂದ್ರ ಅವರಿಗೆ ಮುಗ್ಧ ತರುಣಿಯ ಪಾತ್ರ ಬೇಕಿತ್ತು. ಕಥೆ ಹೇಳಿದ್ರು. ಸಾಕಷ್ಟು ಲುಕ್‌ ಟೆಸ್ಟ್‌ ಮಾಡಿದ್ರು. ಆಗ ಅವರಿಗೆ ಸೂಕ್ತವೆನಿಸಿ ನನ್ನನ್ನು ಆಯ್ಕೆ ಮಾಡಿದ್ರು. ಚಿತ್ರೀಕರಣ ಶುರುವಾದಾಗ ಹೆದರಿಕೊಂಡಿದ್ದೆ. ಆದರೆ, ಮೂರ್‍ನಾಲ್ಕು ಶಾಟ್‌ ಆದ ಮೇಲೆ ಎಲ್ಲವೂ ಹೊಂದಾಣಿಕೆಯ ಆಯಿತು. ಯಾಕಂದ್ರೆ ಉಪೇಂದ್ರ ಅವರು ಚೆನ್ನಾಗಿ ಹೇಳಿಕೊಡುತ್ತಾರೆ. ಎಲ್ಲವನ್ನು ಬಹಳ ಸಹನೆಯಿಂದ ಕಲಿಸುತ್ತಾರೆ. ಅವರನ್ನು ನೋಡಿ ಕಲಿತಿದ್ದು ಬಹಳ’ ಎಂದರು.

ಕೆಡಿ ಚಿತ್ರದ ಬಗ್ಗೆ ಮಾತನಾಡುವ ರೀಷ್ಮಾ, “ಕೆಡಿ ಚಿತ್ರಕ್ಕೆ ಒಂದು ತಿಂಗಳು ಲುಕ್‌ ಟೆಸ್ಟ್‌ ನಡಿತು. ರಿಹರ್ಸಲ್‌ ಆಯ್ತು. ಚಿತ್ರದಲ್ಲಿ ನನ್ನ ಪಾತ್ರವೇ ದೊಡ್ಡ ಸವಾಲು. ನನ್ನ ವ್ಯಕ್ತಿತ್ವದ ತದ್ವಿರುದ್ಧ ಪಾತ್ರವಿದು. ಸಾಕಷ್ಟು ಗೊಂದಲ ಇತ್ತು. ತಯಾರಿ ಮಾಡಿಕೊಂಡೇ ಸೆಟ್‌ಗೆ ಬರುತ್ತಿದ್ದೇನೆ. ಚಿತ್ರ ಸದ್ಯಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ಹಾಡುಗಳ ಚಿತ್ರೀಕರಣ ನಡೆಯುತ್ತಿದೆ. ನಟ ಧ್ರುವ ತುಂಬಾ ಸಫೋರ್ಟ್‌ ಮಾಡುತ್ತಾರೆ. ಯಾವುದೇ ಅಹಂ ತೋರಿಸದ ವ್ಯಕ್ತಿತ್ವ ಅವರದ್ದು. ಇಲ್ಲಿನ ತಂಡದ ಕೆಲಸ ಚೆನ್ನಾಗಿದೆ. ಹಾಗಾಗಿ ಸಿನಿಮಾ ಕೂಡ ಚೆನ್ನಾಗಿಯೇ ಬರುತ್ತೆ. ಎಲ್ಲಕ್ಕಿಂತ ರಮೇಶ್‌, ರವಿಚಂದ್ರನ್‌, ಸಂಜಯ್‌ ದತ್‌, ಶಿಲ್ಪಾ ಶೆಟ್ಟಿ ಈ ಎಲ್ಲ ಸ್ಟಾರ್‌ಗಳ ಜೊತೆ ನಟಿಸುತ್ತಿದ್ದೀನಿ. ಇದೇ ದೊಡ್ಡದು ನನಗೆ. ಹಾಗಾಗಿ ಇನ್ನೂ ಅಚ್ಚರಿಯ ಗುಂಗಿನಲ್ಲೇ ಇದ್ದೇನೆ’ ಎನ್ನುತ್ತಾರೆ ರೀಷ್ಮಾ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.