Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

ರಾಜ್ಯ ಬಜೆಟ್‌ ಗಾತ್ರದಷ್ಟಿದೆ ಶಾಸಕರ ಬೇಡಿಕೆ ಪಟ್ಟಿ

Team Udayavani, Sep 17, 2024, 6:30 AM IST

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಸೆ.17ರಂದು ಆಗಮಿಸಲಿದ್ದು, ಬೆಳಗ್ಗೆ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಪ್ರಿಯಾಂಕ್‌ ಖರ್ಗೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖೆವಾರು ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಿ ನೀಲನಕ್ಷೆ ತಯಾರಿಸುವ ಬಗ್ಗೆಯೂ ನಿರ್ಧರಿಸಲಾಗುವುದು.

ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆ ಪಟ್ಟಿ ನೋಡಿದರೆ ರಾಜ್ಯದ ಬಜೆಟ್‌ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿ ಕಾರ್ಯಕ್ರಮ ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಬಾರಿ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಎಂಜಿನಿಯರ್‌ಗಳ ಹುದ್ದೆ ಭರ್ತಿ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತ ಹಂತವಾಗಿ ತುಂಬಲಾಗುವುದು ಎಂದರು.

30 ಸಾವಿರ ಹುದ್ದೆ ಭರ್ತಿ:
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಮಾತನಾಡಿ, 2013-18ರ ಅವ ಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13 ಸಾವಿರ ಶಿಕ್ಷಕರು ಸೇರಿದಂತೆ 30 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವ ಧಿಯಲ್ಲಿ 6,500 ಶಿಕ್ಷಕರು ಸೇರಿದಂತೆ 15 ಸಾವಿರ ಖಾಲಿ ಹುದ್ದೆ ತುಂಬಲಾಗುವುದು. ನಂತರ ಎರಡು ವರ್ಷದ ಅವ ಧಿಯಲ್ಲಿ 25 ಸಾವಿರ ಹುದ್ದೆ ತುಂಬಲಾಗುವುದು ಎಂದರು.

ನಮ್ಮ ಸರ್ಕಾರದ ಅವಧಿ  ಮುಗಿಯುವುದರೊಳಗೆ 50 ಸಾವಿರ ಖಾಲಿ ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು ಅದಕ್ಕೆ ಬದ್ಧವಾಗಿದ್ದೇವೆ. ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕಾರಾತ್ಮಕ ರಾಜಕೀಯ ಮಾಡದೇ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದರು.

ಎಂಎಲ್‌ಸಿ ಜಗದೇವ ಗುತ್ತೇದಾರ, ಜಿಡಿಎ ಅಧ್ಯಕ್ಷ ಮಜರ್‌ ಆಲಂಖಾನ್‌, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌, ಕಮಿಷನರ್‌ ಡಾ| ಶರಣಪ್ಪ ಸೇರಿದಂತೆ ಇತರರಿದ್ದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತೀಕರಣ ಮಾಡಲಾಗುವುದು. ಕಲಬುರಗಿ ಹಾಗೂ ಬೀದರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ.
-ಪ್ರಿಯಾಂಕ್‌ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.